37.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕೆಪಿಎಸ್ ಪುಂಜಾಲಕಟ್ಟೆ ಪದವಿಪೂರ್ವ ವಿಭಾಗದ ಕಾಲೇಜು ವಾರ್ಷಿಕೋತ್ಸವ

ಪುಂಜಾಲಕಟ್ಟೆ : ಕೆಪಿಎಸ್ ಪುಂಜಾಲಕಟ್ಟೆಯ ಪದವಿಪೂರ್ವ ವಿಭಾಗದ ಕಾಲೇಜು ವಾರ್ಷಿಕೋತ್ಸವ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಉದ್ಘಾಟಿಸಿ ಮಕ್ಕಳ ದಿನಾಚರಣೆಯ ಶುಭಾಶಯ ಕೋರುತ್ತಾ ಮಕ್ಕಳ ಸಾಮಾಜಿಕ ಜವಾಬ್ದಾರಿಗಳ ಬಗ್ಗೆ ಮಾತನಾಡುತ್ತ ತಂದೆ ತಾಯಿ ಮತ್ತು ಸಮಾಜದ ಕೊಡುಗೆಯನ್ನು ಸದಾ ಸ್ಮರಿಸುವುದು ಮಕ್ಕಳ ಜವಾಬ್ದಾರಿ ಎಂದು ನೆನಪಿಸಿದರು.

ಮುಖ್ಯ ಅತಿಥಿಯಾಗಿ ದ. ಕ. ಜಿಲ್ಲಾ ಪದವಿ ಪೂರ್ವ ಪ್ರಾಂಶುಪಾಲರ ಸಂಘದ ಅಧ್ಯಕ್ಷ ನವೀನ್ ಶೆಟ್ಟಿ ಕೆ, ವಾಮದಪದವು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಜಯರಾಮ್ ಮತ್ತು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶ್ಯಾಮ್ ಪ್ರಸಾದ್ ಸಂಪಿಗೆತ್ತಾಯ ಉಪಸ್ಥಿತರಿದ್ದರು. ದತ್ತಿ ಬಹುಮಾನ, ಆಟೋಟ ಸ್ಪರ್ಧೆ, ಕಲಿಕಾ, ಮತ್ತು ಸಾಂಸ್ಕೃತಿಕ ಸ್ಪರ್ಧೆ ಗಳಲ್ಲಿ ವಿಜೇತರಾದ ವಿದ್ಯಾರ್ಥಿ ಗಳನ್ನು ಪುರಸ್ಕಾರ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಪೋಷಕ ರಕ್ಷಕ ಸಭೆ ನಡೆಸಲಾಯಿತು. ಸೃಷ್ಟಿ ಟಿoಕರಿಂಗ್ ಪ್ರಯೋಗಾಲಯ ಉದ್ಘಾಟಿಸಲಾಯಿತು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು. ಹೈಸ್ಕೂಲ್ ಪ್ರಭಾರ ಉಪಾಪ್ರಾಂಶುಪಾಲರಾದ ನಿರಂಜನ್ ಜೈನ್ ಮತ್ತು ಶಾಲಾಭಿವೃದ್ಧಿ ಸದಸ್ಯರಾದ ದಿವಾಕರ್ ಮತ್ತು ಇತರ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿಯಲ್ಲಿ ಅಗ್ನಿ ಅನಾಹುತಗಳ ತಡೆಗಟ್ಟುವ ಕುರಿತು ಅಗ್ನಿಶಾಮಕ ದಳದಿಂದ ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya

ಕಳಿಯ ಗ್ರಾ.ಪಂ. ನಿಂದ ಯಶಸ್ವಿ ಮಾದರಿ ಜನ ಸ್ನೇಹಿ ಆಧಾರ್ ಕ್ಯಾಂಪ್ & ಅಂಚೆ ಜನ ಸಂಪರ್ಕ ಅಭಿಯಾನ

Suddi Udaya

ಬಳಂಜ: ಕಾಪಿನಡ್ಕ ರಬ್ಬರ್ ತೋಟದಲ್ಲಿ ಚಿರತೆ ಪ್ರತ್ಯಕ್ಷ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ದೇವರಮನೆಗುಡ್ಡ ರಸ್ತೆಯಲ್ಲಿ ಬೆಳ್ತಂಗಡಿ ಯುವಕರ ಹುಚ್ಚಾಟ: ಪ್ರಕರಣ ದಾಖಲು

Suddi Udaya

ಉಜಿರೆ: ಕುಂಟಿನಿ ಎಸ್ ಸಿ ಕಾಲೊನಿಯಲ್ಲಿ 9ನೇ ವರ್ಷದ ಸಾಮೂಹಿಕ ದೀಪಾವಳಿ ಆಚರಣೆ

Suddi Udaya
error: Content is protected !!