September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಸಮ್ಮೇಳನ 2025

ಪುಂಜಾಲಕಟ್ಟೆ: ಸರಕಾರಿ ಪ್ರಥಮ ದರ್ಜೆ ಕಾಲೇಜು, ಪುಂಜಾಲಕಟ್ಟೆಯಲ್ಲಿ ರಾಜ್ಯಶಾಸ್ತ್ರ ವಿಭಾಗ, ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗ, ಮಾನವಿಕ ಅಧ್ಯಯನ ವಿಭಾಗ ಮತ್ತು ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಯುಕ್ತ ಆಶ್ರಯದಲ್ಲಿ ಅಂತರರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಲಾಯಿತು.

ಸಮ್ಮೇಳನವನ್ನು ಅಲಯನ್ಸ್ ಯೂನಿವರ್ಸಿಟಿ, ಬೆಂಗಳೂರು- ಕಾನೂನು ವಿದ್ಯಾಲಯದ ನಿರ್ದೇಶಕರಾದ ಡಾ. ದೇವಯ್ಯ ಎನ್.ಜಿ ರವರು ಗಿಡಕ್ಕೆ ನೀರೆರೆಯುವುದರ ಮೂಲಕ ಉದ್ಘಾಟಿಸಿದರು. ತಮ್ಮ ಉದ್ಘಾಟನಾ ಭಾಷಣದಲ್ಲಿ ಡಿಜಿಟಲ್ ಯುಗದಲ್ಲಿ ಸ್ಥಿರ ಪರಿಸರವನ್ನು ಕಾಯ್ದುಕೊಳ್ಳುವ ಅಗತ್ಯತೆಯನ್ನು ವಿವರಿಸಿದರು. ಫ್ರಾನ್ಸ್‌ನ ಜೀನ್ ಮೌಲಿನ್ ವಿಶ್ವವಿದ್ಯಾಲಯದ ಡಾ. ಜುಲಿಯನ್ ಪ್ಯಾರೆಟ್ ರವರು ಸಮ್ಮೇಳನದ ದಿಕ್ಕೂಚಿ ಭಾಷಣ ಮಾಡಿದರು. ಶಿಕ್ಷಣ, ಕೈಗಾರಿಕೆ ಮತ್ತು ಕೃತಕ ಬುದ್ಧಿಮತ್ತೆಯ ಪ್ರಸ್ತುತತೆಯ ಕುರಿತು ಮಾತನಾಡಿದರು. ವಿಯೆಟ್ನಾಮ್‌ನ ಹೋ-ಚಿ-ಮಿನ್ ಸಿಟಿ ವಿಶ್ವವಿದ್ಯಾನಿಲಯದ ಡಾ.ನ್ಯುಯನ್ ಫಾನ್ ಫುವಾಂಗ್ ಟಾನ್ ರವರು ಆನ್‌ಲೈನ್ ಮೂಲಕ ಮುಖ್ಯ ಭಾಷಣ ಮಾಡಿದರು.

ಎಕ್ಸೆಲ್ ಸಮೂಹ ಸಂಸ್ಥೆಗಳ ಸಂಸ್ಥಾಪಕ ಸುಮಂತ್ ಕುಮಾರ್ ಜೈನ್ ಬಿ., ಸಮ್ಮೇಳನದಲ್ಲಿ ಭಾಗವಹಿಸಿ ಶುಭಾಶಯಗಳನ್ನು ಕೋರಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಮಾಧವರವರು ಅಧ್ಯಕ್ಷೀಯ ನುಡಿಗಳನ್ನಾಡಿದರು. ಸಮ್ಮೇಳನದ ಮುಖ್ಯಸ್ಥ ಡಾ. ಕೀರ್ತಿರಾಜ್ ರವರು ಅಧಿವೇಶನದ ಪಕ್ಷಿನೋಟ ನೀಡಿದರು. ಅಧಿವೇಶನದ ಸಂಚಾಲಕರಾದ ಪ್ರೊ.ಪ್ರವೀಣ್ ಕಾರ್ಯಕ್ರಮವನ್ನು ಸಂಯೋಜಿಸಿದರು. ಕು.ನಿಶಾ ಮತ್ತು ತಂಡದವರು ಪ್ರಾರ್ಥಿಸಿದರು. ಇಂಗ್ಲಿಷ್ ವಿಭಾಗದ ಸಹಪ್ರಾಧ್ಯಾಪಕರಾದ ಡಾ.ನವೀನ್ ಡಯಾಸ್ ಸ್ವಾಗತಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ಶೈಲೇಶ್ ಕುಮಾರ್ ಡಿ. ಎಚ್. ಧನ್ಯವಾದವಿತ್ತರು. IQAC ಸಂಚಾಲಕರಾದ ಡಾ.ಅವಿತ ಮರಿಯಾ ಕ್ವಾಡ್ರಸ್ ಕಾರ್ಯಕ್ರಮ ನಿರೂಪಿಸಿದರು.

Related posts

ಮೇ 27: ಬೆಳ್ತಂಗಡಿ ತಾಲೂಕಿನ ವಿವಿಧೆಡೆ ವಿದ್ಯುತ್ ನಿಲುಗಡೆ

Suddi Udaya

ನಾಳ ದೇವಸ್ಥಾನದಲ್ಲಿ ವಿಷು ಪ್ರಯುಕ್ತ ಸೀಯಾಳಭೀಷೇಕ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆಗೆ ಚಾಲನೆ: ಧ್ವಜಾರೋಹಣ, ಉತ್ಸವ ಬಲಿ, ಭಕ್ತರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಸ್ನೇಹ ಸಂಗಮ ಆಟೋ ಚಾಲಕರ ಮತ್ತು ಮಾಲಕರ ಸಂಘದ ವತಿಯಿಂದ ಸಂಘದ ಸದಸ್ಯರಿಗೆ ವೈದ್ಯಕೀಯ ನೆರವು

Suddi Udaya

ಎಸ್‌ಐಟಿಗೆ ಹೈಕೋರ್ಟ್ ನೋಟಿಸ್ : ಧರ್ಮಸ್ಥಳ ವಿರುದ್ಧದ ಷಡ್ಯಂತ್ರ ವಿವರಿಸಿ ಮನವಿ : ಬುರುಡೆ ಕೇಸ್ ಚಾರ್ಜ್‌ಶೀಟ್‌ಗೆ ಚಿನ್ನಯ್ಯ ಅರ್ಜಿ

Suddi Udaya

ನಾಡಿನ ಪುಣ್ಯಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ 13ನೇ ವರ್ಷದ ಪಾದಯಾತ್ರೆಯ ಪೂರ್ವಭಾವಿ ಸಭೆ

Suddi Udaya
error: Content is protected !!