July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ : ದಯಾ ವಿಶೇಷ ಶಾಲೆಯಲ್ಲಿ ಮಕ್ಕಳ ದಿನಾಚರಣೆ

ಲಾಯಿಲ: ಕಪುಚಿನ್ ಕೃಷಿಕ್ ಸೇವಾ ಕೇಂದ್ರದ ಅಂಗ ಸಂಸ್ಥೆಯಾದ ದಯಾ ವಿಶೇಷ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಆಲಂಗಾರ್ ಲಯನ್ಸ್ ಕ್ಲಬ್ ಅಧ್ಯಕ್ಷ ಅಮಿತ್ ಡಿಸಿಲ್ವಾ ಮಾತನಾಡಿ ಈ ವಿಶೇಷ ಚೇತನ ಮಕ್ಕಳೊಂದಿಗೆ ಮಕ್ಕಳ ದಿನಾಚರಣೆಯ ಸಂಭ್ರಮವನ್ನು ಆಚರಿಸಿಕೊಳ್ಳಲು ದೊರಕಿರುವ ಈ ಅಮೂಲ್ಯ ಕ್ಷಣಕ್ಕಾಗಿ ನಾವು ಕೃತಜ್ಞರಾಗಿದ್ದೇವೆ. ಈ ಮಕ್ಕಳ ಸೇವೆ ಮಾಡುತ್ತಿರುವ ಸಂಸ್ಥೆಯು ಮುಂದೆ ಇನ್ನಷ್ಟು ಮಕ್ಕಳಿಗೆ ದಾರಿ ದೀಪವಾಗಲಿ ಎನ್ನುತ್ತಾ ಮಕ್ಕಳಿಗೆ ಶುಭಾಶಯವನ್ನು ಕೋರಿದರು.

ಕಾರ್ಯಕ್ರಮದ ಅತಿಥಿ ಮಿಸ್, ರುಬಿಯಾ ಎಫ್.ಎಸ್, ಮಾಲಕರು ಫ್ಯಾಶನ್ ಸ್ಟ್ರೀಟ್, ಬೆಳ್ತಂಗಡಿ, ಇವರು ಮಾತನಾಡಿ, ಮಕ್ಕಳನ್ನು ದೇವರ ಸ್ವರೂಪವೆಂದು ಭಾವಿಸಲಾಗುತ್ತದೆ. ಇಲ್ಲಿನ ಮಕ್ಕಳಂತು ಇನ್ನೂ ವಿಶೇಷ. ಸಂಸ್ಥೆಯು ಇನ್ನೂ ಇದೇ ರೀತಿ ಮುಂದುವರೆದು ಇನ್ನೂ ಮಕ್ಕಳಿಗೆ ಉಪಯೋಗವಾಗುವಂತಹ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಮಾಜದಲ್ಲಿ ಉತ್ತುಂಗಕ್ಕೇರಲಿ ಎಂದು ಶುಭ ಹಾರೈಸಿದರು.

ಶಾಲೆಯ ನಿರ್ದೇಶಕರಾದ ವಂ.ಫಾ.ವಿನೋದ್ ಮಸ್ಕರೇನಸ್ ಮಾತನಾಡಿ, ಸಮಾಜದಲ್ಲಿ ನಾವು ಹಲವಾರು ಕೆಲಸಗಳನ್ನು ಮಾಡಬಹುದು. ಆದರೆ ಒಂದು ಸಮಾಜ ಮುಂದುವರೆಯಲು ಅಲ್ಲಿ ಜಾತಿ, ಮತ, ಭೇದ, ಅಂತಸ್ತುಗಳ ಹಂಗಿಲ್ಲದೇ ಜನರು ಒಗ್ಗೂಡಿ ಕೆಲಸ ಮಾಡಿದರೆ ಮಾತ್ರ ಅಂದು ಸ್ವಾತಂತ್ರ‍್ಯ ಪೂರ್ವದಲ್ಲಿ ನಮ್ಮ ದೇಶದ ಅನೇಕ ಮಹಾತ್ಮರು ಕಂಡಂತಹ ನವಭಾರತದ ಕನಸು ನನಸಾಗಲು ಸಾಧ್ಯ ಎಂದರು.

ಕಾರ್ಯಕ್ರಮದಲ್ಲಿ ಆಲಂಗಾರ್ ಲಯನ್ಸ್ ಕ್ಲಬ್ ಖಜಾಂಜಿ ಲಯನ್ ರೋಕಿ ಮಸ್ಕರೇನಸ್, ಶ್ರೀಮತಿ ಲಿಲ್ಲಿ ಲೋಬೋ, ಮೂಡಬಿದ್ರೆ, ಮಿಸ್. ಮೆರಿನ್ ಎಂ.ಪಿ, ಆಪ್ತಸಮಾಲೋಚಕರು, ದಯಾ ವಿಶೇಷ ಶಾಲೆ, ಮಾಸ್ಟರ್. ಅಫ್ರಾಝ್ ವಿದ್ಯಾರ್ಥಿ ಪ್ರತಿನಿಧಿ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಕಾರ್ಯಕ್ರಮದಲ್ಲಿ ಕೋಮ್ ಸ್ಕೋಪ್ ರವರ ವತಿಯಿಂದ ಒದಗಿಸಿಕೊಡಲಾದ ಹೊಸ ಧ್ವನಿರ್ಧಕವನ್ನು ವಂ.ಫಾ.ವಿನೋದ್ ಮಸ್ಕರೇನಸ್ ರವರು ಉದ್ಘಾಟಿಸಿದರು. ಮಕ್ಕಳ ದಿನಾಚರಣೆಯ ಪ್ರಯುಕ್ತ, ಲಯನ್ಸ್ ಕ್ಲಬ್ ಆಲಂಗಾರ್ ರವರ ವತಿಯಿಂದ ಮಕ್ಕಳಿಗೆ ಬಾತ್ ಟವಲ್ ಹಾಗೂ ಹಣ್ಣು ಹಂಪಲುಗಳನ್ನು ನೀಡಿದರೆ, ಫ್ಯಾಶನ್ ಸ್ಟ್ರೀಟ್, ಬೆಳ್ತಂಗಡಿ, ಇವರ ವತಿಯಿಂದ ಎಲ್ಲಾ ಮಕ್ಕಳಿಗೆ ಉಡುಪುಗಳನ್ನು ವಿತರಿಸಲಾಯಿತು. ಶ್ರೀಮತಿ.ಲಿಲ್ಲಿ ಲೋಬೋ, ಮೂಡಬಿದ್ರೆ, ಇವರ ವತಿಯಿಂದ ಮಕ್ಕಳಿಗೆ ಇಂದಿನ ಊಟೋಪಚಾರದ ವ್ಯವಸ್ಥೆಯನ್ನು ಮಾಡಲಾಯಿತು.

ಕಾರ್ಯಕ್ರಮದಲ್ಲಿ ವಿವಿಧ ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಮಕ್ಕಳಿಂದ ಹಾಗೂ ಶಿಕ್ಷಕರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಡಲಾಯಿತು.
ಶಾಲಾ ಸಿಬ್ಬಂದಿ ಕಿರಣ್ ಮಿರಾಂದ ಸ್ವಾಗತಿಸಿ, ಶಿಕ್ಷಕಿ ಮಿಸ್. ಸುಮನಶ್ರೀ ವಂದಿಸಿ, ವಿಶೇಷ ಶಿಕ್ಷಕಿ ಶ್ರೀಮತಿ ಸುಜಾತ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಅಪ್ಸರಾ ಫ್ಯಾಶನ್ ಸೆಂಟರ್ ನಲ್ಲಿ ಮಾನ್ಸೂನ್ ಸೇಲ್ : ಪ್ರತೀ ಖರೀದಿಯ ಮೇಲೆ ಶೇ.25 ರಷ್ಟು ಡಿಸ್ಕೌಂಟ್

Suddi Udaya

ಬೆಳ್ತಂಗಡಿ: ಹಳೆಕೋಟೆ ಬಳಿ ಓಮಿನಿ ಕಾರು ಹಾಗೂ ಬೈಕ್ ಮುಖಾಮುಖಿ ಡಿಕ್ಕಿ : ಬೈಕ್ ಸವಾರ ಗಂಭೀರ ಗಾಯ

Suddi Udaya

ಮುಂಡಾಜೆ :ಯುವ ಸಾಹಿತಿ ಆಪ್ತಿ ಪಟವರ್ಧನ್ ರವರು ಬರೆದ ಜರ್ನಿ ಅಂಡರ್‌ದ ಸ್ಕೈ ಪುಸ್ತಕ ಬಿಡುಗಡೆ

Suddi Udaya

ಸಾಮರಸ್ಯದ ಸಂಕ್ರಾಂತಿಗೆ ವೇಣೂರಿನಲ್ಲಿ ಚಾಲನೆ: ಪರಿಶಿಷ್ಟ ಜಾತಿ ಕುಟುಂಬಿಕರೊಂದಿಗೆ ಸಂಕ್ರಾಂತಿ ಆಚರಿಸಿದ ಶಾಸಕ ಹರೀಶ್ ಪೂಂಜ

Suddi Udaya

ಮಡಂತ್ಯಾರು ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ 35ನೇ ವರ್ಷದ ಮೊಸರು ಕುಡಿಕೆ ಉತ್ಸವದ ಗೌರವಾಧ್ಯಕ್ಷರಾಗಿ ಪದ್ಮನಾಭ ಸುವರ್ಣ ಬಳ್ಳಮಂಜ, ಅಧ್ಯಕ್ಷರಾಗಿ ಪ್ರಶಾಂತ್ ಎಂ. ಪಾರೆಂಕಿ ಆಯ್ಕೆ

Suddi Udaya

ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘದ ಮಹಿಳಾ ಘಟಕದ ಉದ್ಘಾಟನಾ ಸಮಾರಂಭ

Suddi Udaya
error: Content is protected !!