23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಧ.ಮಂ. ಪ.ಪೂ. ಕಾಲೇಜಿನ ಸಂಸ್ಕೃತ ಸಂಘದ ವತಿಯಿಂದ ಪರಿಸರ ಪಾಠ ಹಾಗೂ ಸಾಲುಮರದ ತಿಮ್ಮಕ್ಕ ರವರಿಗೆ ನುಡಿನಮನ

ಉಜಿರೆ: ಭಾರತದಲ್ಲಿ ನಾಲ್ಕು ಜೈವಿಕ ವೈವಿಧ್ಯ ತಾಣಗಳಿವೆ. ಹಿಮಾಲಯ, ಪೂರ್ವ ಹಿಮಾಲಯ, ಇಂಡೋ-ಬರ್ಮಾ ಮತ್ತು ಪಶ್ಚಿಮ ಘಟ್ಟ. ಈ ತಾಣಗಳು ಹೆಚ್ಚಿನ ಸಂಖ್ಯೆಯ ವಿಶಿಷ್ಟ ಪ್ರಭೇದಗಳನ್ನು ಹೊಂದಿವೆ ಮತ್ತು ವಿಪರೀತ ಮಾನವ ಚಟುವಟಿಕೆ ಮತ್ತು ಆವಾಸಸ್ಥಾನ ನಷ್ಟದಿಂದಾಗಿ ಸಂರಕ್ಷಣೆಗೆ ಆದ್ಯತೆ ನೀಡಬೇಕಾದ ಪ್ರದೇಶಗಳಾಗಿವೆ. ಪಶ್ಚಿಮ ಘಟ್ಟ ಜೀವ ವೈವಿಧ್ಯಗಳ ಆಗರವಾಗಿದೆ. ಉಜಿರೆಯ ಯಶೋವನ ಕೂಡ ವಿಶಿಷ್ಟವಾದ ವೃಕ್ಷಾಲಯವಾಗಿದೆ. ಪ್ರತಿಯೊಬ್ಬರಿಗೂ ಪರಿಸರದ ಕಾಳಜಿ ಬೇಕು. ಪರಿಸರ ಹಾಗೂ ಜೀವ ವೈವಿಧ್ಯ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಮೇಘಾ ಶಿವರಾಜ್ ಹೇಳಿದರು

ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗ ಹಾಗೂ ಸಂಸ್ಕೃತ ಸಂಘದ ವತಿಯಿಂದ ನಡೆದ ಪರಿಸರ ಪಾಠ ಹಾಗೂ ಸಾಲುಮರದ ತಿಮ್ಮಕ್ಕ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಈ ಸಂದರ್ಭದಲ್ಲಿ ಸಾಲು ಮರದ ತಿಮ್ಮಕ್ಕ ಅವರ ಪ್ರಕೃತಿ ಪ್ರೇಮ ಹಾಗೂ ಅವರ ಪರಿಸರ ಕಾಳಜಿಯ ಕೊಡುಗೆಗಳನ್ನು ಸ್ಮರಿಸಿದರು. ಇದರೊಂದಿಗೆ ಆಯುಷ್ ಸಚಿವಾಲಯ ಪ್ರಾಯೋಜಕತ್ವದ ಜನಜ್ಞಾನಾಧಾರಿತ ಔಷಧೀಯ ಸಸ್ಯಗಳ ಆಧಾರದ ಮೇಲೆ ನಿರ್ಮಿಸಿದ ಸಸ್ಯೋದ್ಯಾನ , ನವಗ್ರಹ ವನ , ರಾಶಿ ವನ , ಹಸಿರು ಮನೆ ಇತ್ಯಾದಿಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಿದರು.

ಕಲಾ ವಿದ್ಯಾರ್ಥಿನಿ ಶ್ರೀಪೂರ್ಣಾ ಅವರು ವಿದ್ಯಾರ್ಥಿಗಳ ಪರವಾಗಿ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿ ನಮನದ ಮೂಲಕ ಶ್ರದ್ಧಾಂಜಲಿ ಅರ್ಪಿಸಿದರು.

ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥರಾದ ಡಾ. ಪ್ರಸನ್ನಕುಮಾರ ಐತಾಳ್ ಪ್ರಾಸ್ತಾವಿಕ ನುಡಿಗಳನ್ನಾಡಿ ಪ್ರಾಚೀನ ಸಂಸ್ಕೃತಜ್ಞರ ಪರಿಸರ ಪ್ರೇಮ ಹಾಗೂ ಪ್ರಕೃತಿಪ್ರೀತಿ ವಿಚಾರಗಳ ಬಗ್ಗೆ ವಿವರಿಸಿದರು.

ಸೌಪರ್ಣಿಕಾ ರಾವ್ ಸ್ಮರಣಿಕೆ ನೀಡಿ ಗೌರವಿಸಿದರು. ಸಮೃದ್ಧಿ ಸ್ವಾಗತಿಸಿ ಪರಿಚಯಿಸಿದರು. ಪ್ರಸನ್ನಾ .ಪಿ. ನಿರೂಪಿಸಿ , ಧರೇಶ .ಹೆಚ್. ವಂದಿಸಿದರು.

Related posts

ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 40ನೇ ಸಂಭ್ರಮಾಚರಣೆಯ ಪ್ರಯುಕ್ತ 16ನೇ ವರ್ಷದ ಉಚಿತ ಸಾಮೂಹಿಕ ವಿವಾಹ: ಸ್ವಸ್ತಿ ಸಿರಿ ಪ್ರಶಸ್ತಿ ಪ್ರದಾನ

Suddi Udaya

ಪುದುವೆಟ್ಟು: ಶ್ರೀಮತಿ ಯಶೋದಾ ನಿಧನ

Suddi Udaya

ಎಸ್.ಡಿ.ಎಮ್. ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ಸಾಧನೆಗೈದ ಕುಮಾರ್‌ ನಿಹಾರ್‌ ಎಸ್‌ ಆರ್‌ ಇವರೊಂದಿಗೆ ವಿಶೇಷ ಸಂವಾದ

Suddi Udaya

ಪುತ್ತೂರು ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲರವರು ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ, ಸೌತಡ್ಕ ಮಹಾಗಣಪತಿ ದೇವಸ್ಥಾನ ಹಾಗೂ ಕಾವು ತ್ರಿಗುಣಾತ್ಮಿಕ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ “ಸ್ಪರ್ಧಾತ್ಮಕ ಪರೀಕ್ಷಾ ಕಾರ್ಯಾಗಾರ”

Suddi Udaya

ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ: ನೆಕ್ಕಿಲು ಸ.ಕಿ.ಪ್ರಾ. ಶಾಲೆಗೆ ಹಲವು ಪ್ರಶಸ್ತಿ

Suddi Udaya
error: Content is protected !!