22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌತಡ್ಕ : ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ರವರ ಪುತ್ರಿಗೆ ಐಟಿ ಕಂಪೆನಿಯಲ್ಲಿ ಉದ್ಯೋಗ ದೊರಕಿಸಿಕೊಟ್ಟ ರಕ್ಷಿತ್ ಶಿವರಾo

ಬೆಳ್ತಂಗಡಿ: ಶ್ರೀ ಕ್ಷೇತ್ರ ಸೌತಡ್ಕದ ದೇವಸ್ಥಾನದಲ್ಲಿ ದಿನಗೂಲಿ ನೌಕರರಾಗಿ ದುಡಿಯುತ್ತಿರುವ ಶ್ರೀಮತಿ ಸುಜಾತಾ ಇವರ ಪತಿ ಬಾಲಕೃಷ್ಣ ಶೆಟ್ಟಿ ಇವರು ಇತ್ತೀಚೆಗೆ ಆನೆ ದಾಳಿ ಸಂದರ್ಭ ಮೃತ ಪಟ್ಟಿದ್ದು ಆ ಸಮಯ ರಾಜ್ಯ ಕೆ.ಪಿ.ಸಿ.ಸಿ.ಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾo ಇವರು ಮನೆ ಬೇಟಿ ನೀಡಿದ ಸಂದರ್ಭ, ಮನೆಯವರು ಮತ್ತು ಗ್ರಾಮಸ್ಥರು ಮೃತ ಬಾಲಕೃಷ್ಣ ಶೆಟ್ರ ಪುತ್ರಿ ಕುಮಾರಿ ವೇದಿತಳಿಗೆ , ಉದ್ಯೋಗ ಮತ್ತು ಆನೇ ದಾಳಿಯಿಂದ ಮೃತ ಪಟ್ಟ ಬಗ್ಗೆ ಅರಣ್ಯ ಇಲಾಖೆ ಯಿಂದ ಸೂಕ್ತ ಪರಿಹಾರ ದೊರಕಿಸಿಕೊಡುವಂತೆ ವಿನಂತಿಸಿದ್ದರು.

ಮನವಿಗೆ ಸ್ಪಂದಿಸಿದ ರಕ್ಷಿತ್ ಶಿವಾರಂ ರವರು ಬೆಂಗಳೂರಿನ ಪ್ರಸಿದ್ಧ ಐಟಿ ಕಂಪನಿಯಲ್ಲಿ ಉದ್ಯೋಗ ದೊರಕಿಸಿಕೊಟ್ಟಿದ್ದಾರೆ. ನ.17ರಂದು ಕುಮಾರಿ ವೇದಿತ ಅವರು ಐಟಿ ಉದ್ಯೋಗಿಯಾಗಿ ಕೆಲಸ ಸೇರುವಂತೆ ಸಂಸ್ಥೆಯು ಆದೇಶ ನೀಡಿರುತ್ತದೆ. ಅಲ್ಲದೆ ಅರಣ್ಯ ಇಲಾಖೆಯಿಂದ ಪರಿಹಾರವಾಗಿ ರೂ 20ಲಕ್ಷ ಮಂಜೂರಾತಿ ಗೊಳಿಸುವಲ್ಲಿಯೂ ಸಕ್ರಿಯ ಪಾತ್ರ ವಹಿಸಿ, ಪರಿಹಾರ ಒದಗಿಸಿದ ಮತ್ತು ಉದ್ಯೋಗವನ್ನು ದೊರಕಿಸಿಕೊಟ್ಟ ರಕ್ಷಿತ್ ಶಿವರಾಂ ಇವರಿಗೆ ಕ್ಷೇತ್ರದ ವ್ಯವಸ್ಥಾಪನ ಸಮಿತಿಯು ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿದೆ ಎಂದು ವ್ಯವಸ್ಥಾಪನ ಸಮಿತಿಯು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹಿರಿಯ ವಕೀಲರಾದ ಲಕ್ಷ್ಮೀ ಅಯ್ಯಂಗಾರ್ ಭೇಟಿ

Suddi Udaya

ಗುರುವಾಯನಕೆರೆ ಸಹಕಾರಿ ಸಂಘದ  ವಾರ್ಷಿಕ ಮಹಾಸಭೆ

Suddi Udaya

ಎ.10: ಧರ್ಮಸ್ಥಳ ಗೀತ ನೃತ್ಯಾಲಯ ನೃತ್ಯ ತರಬೇತಿ ಕೇಂದ್ರ ಪ್ರಸ್ತುತಪಡಿಸುವ “ನೃತ್ಯ ರಶ್ಮಿ ನೃತ್ಯೋತ್ಸವ ಹಾಗೂ ಗುರುವಂದನೆ” ಮತ್ತು ಪ್ರಥಮ ವರ್ಷದ ಸಂಭ್ರಮ

Suddi Udaya

ಬಂಗಾಡಿ ಬಿಎಸ್ ಎನ್ ಎಲ್ ನೆಟ್ವರ್ಕ್ ಸಮಸ್ಯೆ: ನೆಟ್ವರ್ಕ್ ಇಲ್ಲದೆ ಬ್ಯಾಂಕ್ , ಗ್ರಾಮ ಪಂಚಾಯತ್ ಗಳಲ್ಲಿ ಗ್ರಾಹಕರ ಪರದಾಟ

Suddi Udaya

ಮೃತದೇಹ ಹೂತು ಹಾಕಿದ ಪ್ರಕರಣ: 17 ನೇ ಗುರುತಿನಲ್ಲಿ ಸಿಗದ ಅಸ್ಥಿಪಂಜರ

Suddi Udaya

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ವತಿಯಿಂದ 15ನೇ ವರ್ಷದ ಶನಿಪೂಜೆ

Suddi Udaya
error: Content is protected !!