September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌತಡ್ಕ : ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ರವರ ಪುತ್ರಿಗೆ ಐಟಿ ಕಂಪೆನಿಯಲ್ಲಿ ಉದ್ಯೋಗ ದೊರಕಿಸಿಕೊಟ್ಟ ರಕ್ಷಿತ್ ಶಿವರಾo

ಬೆಳ್ತಂಗಡಿ: ಶ್ರೀ ಕ್ಷೇತ್ರ ಸೌತಡ್ಕದ ದೇವಸ್ಥಾನದಲ್ಲಿ ದಿನಗೂಲಿ ನೌಕರರಾಗಿ ದುಡಿಯುತ್ತಿರುವ ಶ್ರೀಮತಿ ಸುಜಾತಾ ಇವರ ಪತಿ ಬಾಲಕೃಷ್ಣ ಶೆಟ್ಟಿ ಇವರು ಇತ್ತೀಚೆಗೆ ಆನೆ ದಾಳಿ ಸಂದರ್ಭ ಮೃತ ಪಟ್ಟಿದ್ದು ಆ ಸಮಯ ರಾಜ್ಯ ಕೆ.ಪಿ.ಸಿ.ಸಿ.ಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾo ಇವರು ಮನೆ ಬೇಟಿ ನೀಡಿದ ಸಂದರ್ಭ, ಮನೆಯವರು ಮತ್ತು ಗ್ರಾಮಸ್ಥರು ಮೃತ ಬಾಲಕೃಷ್ಣ ಶೆಟ್ರ ಪುತ್ರಿ ಕುಮಾರಿ ವೇದಿತಳಿಗೆ , ಉದ್ಯೋಗ ಮತ್ತು ಆನೇ ದಾಳಿಯಿಂದ ಮೃತ ಪಟ್ಟ ಬಗ್ಗೆ ಅರಣ್ಯ ಇಲಾಖೆ ಯಿಂದ ಸೂಕ್ತ ಪರಿಹಾರ ದೊರಕಿಸಿಕೊಡುವಂತೆ ವಿನಂತಿಸಿದ್ದರು.

ಮನವಿಗೆ ಸ್ಪಂದಿಸಿದ ರಕ್ಷಿತ್ ಶಿವಾರಂ ರವರು ಬೆಂಗಳೂರಿನ ಪ್ರಸಿದ್ಧ ಐಟಿ ಕಂಪನಿಯಲ್ಲಿ ಉದ್ಯೋಗ ದೊರಕಿಸಿಕೊಟ್ಟಿದ್ದಾರೆ. ನ.17ರಂದು ಕುಮಾರಿ ವೇದಿತ ಅವರು ಐಟಿ ಉದ್ಯೋಗಿಯಾಗಿ ಕೆಲಸ ಸೇರುವಂತೆ ಸಂಸ್ಥೆಯು ಆದೇಶ ನೀಡಿರುತ್ತದೆ. ಅಲ್ಲದೆ ಅರಣ್ಯ ಇಲಾಖೆಯಿಂದ ಪರಿಹಾರವಾಗಿ ರೂ 20ಲಕ್ಷ ಮಂಜೂರಾತಿ ಗೊಳಿಸುವಲ್ಲಿಯೂ ಸಕ್ರಿಯ ಪಾತ್ರ ವಹಿಸಿ, ಪರಿಹಾರ ಒದಗಿಸಿದ ಮತ್ತು ಉದ್ಯೋಗವನ್ನು ದೊರಕಿಸಿಕೊಟ್ಟ ರಕ್ಷಿತ್ ಶಿವರಾಂ ಇವರಿಗೆ ಕ್ಷೇತ್ರದ ವ್ಯವಸ್ಥಾಪನ ಸಮಿತಿಯು ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿದೆ ಎಂದು ವ್ಯವಸ್ಥಾಪನ ಸಮಿತಿಯು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ಕಾಶಿಪಟ್ಣ : ಅವಳಿ ಹೆಣ್ಣು ಕರುಗಳಿಗೆ ಜನ್ಮ ನೀಡಿದ ಗೋವು

Suddi Udaya

ತೆಂಕಕಾರಂದೂರು: ಆಟೋ ರಿಕ್ಷಾ ಹಾಗೂ ಬೈಕ್ ಅಪಘಾತ

Suddi Udaya

ಬೆಳ್ತಂಗಡಿ : ಆಡಳಿತ ಸೌಧದಲ್ಲಿ ಸರ್ವಜ್ಞ ಜಯಂತಿ ಆಚರಣೆ

Suddi Udaya

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ವಿನಿಯೋಗಿಸಿರುವ ಅನುದಾನವೆಷ್ಟು,? ವಿಧಾನ ಪರಿಷತ್ ನಲ್ಲಿ ಪ್ರತಾಪ್ ಸಿಂಹ ನಾಯಕ್ ರವರ ಪ್ರಶ್ನೆಗೆ ಸಚಿವರ ಉತ್ತರ

Suddi Udaya

ಇಂದಬೆಟ್ಟು: ಗೊಂಚಲು ಸ್ತ್ರೀ ಶಕ್ತಿ ಮಹಾಸಭೆ

Suddi Udaya

ಕುಕ್ಕೇಡಿ : ಗುಲಾಬಿ ಶೆಟ್ಟಿ ನಿಧನ

Suddi Udaya
error: Content is protected !!