July 23, 2026
Uncategorized

ನಡ ಕುತ್ರೋಟ್ಟು ಬಳಿ ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿ: ಬಾಲಕ ಮೃತ್ಯು,

ನಡ :ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾಗಿ ಬಾಲಕ ಸಾವನ್ನಪ್ಪಿರುವ ಘಟನೆ ನಡ ಗ್ರಾಮದ ಹೊಕ್ಕಿಲ ಕುತ್ರೊಟ್ಟು
ನರ್ಜೆ ಕ್ರಾಸ್ ಬಳಿ ನ. 16 ರಂದು ರಾತ್ರಿ ನಡೆದಿದೆ.

ನಾವೂರು ಗ್ರಾಮದ ಗಣೇಶ್ ಎಂಬವರು ಪುತ್ರ
ತನ್ವಿತ್ (12ವ) ಮೃತಪಟ್ಟ ಬಾಲಕ
ನಾವೂರು ಕುಂಡಡ್ಕ ಕಡೆಯಿಂದ ಶಶಿ ಎಂಬವರ ರಿಕ್ಷಾದಲ್ಲಿ
ಧರ್ಮಸ್ಥಳ ಲಕ್ಷ ದೀಪೋತ್ಸವಕ್ಕೆ ಕುತ್ರೋಟ್ಟು – ಟಿ.ಬಿ ಕ್ರಾಸ್ ಮೂಲಕ ಉಜಿರೆ ಹಳೆ ಪೇಟೆಗೆ ಹತ್ತಿರ ರಸ್ತೆಯಲ್ಲಿ ಬರುತ್ತಿದ್ದ ಸಮಯ ಕುತ್ರೋಟ್ಟು ಬಳಿ ಘಟನೆ ನಡೆದಿದೆ.
ಬಾಲಕ ಸೇರಿದಂತೆ ಆಟೋದಲ್ಲಿ ಕೆಲ ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ . ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾಗಿದೆ. ಆಟೋ ಪಲ್ಟಿಯಾಗಿ ಪ ರಿಣಾಮ ಬಾಲಕನ ತಲೆಯ ಭಾಗಕ್ಕೆ ಗಂಭೀರ ಗಾಯವಾಗಿದ್ದ ಬಾಲಕನನ್ನು ತಕ್ಷಣ ಸ್ಥಳೀಯ ನಿವಾಸಿಗಳ ಸಹಕಾರ ದಲ್ಲಿ. ಆಸ್ಪತ್ರೆಗೆ ಕರೆದುಕೊಂಡು ಬಂದರೂ, ಪ್ರಯೋಜನ ವಾಗದೆ ಬಾಲಕ ಮೃತಪಟ್ಟನೆನ್ನಲಾಗಿದೆ. ಆಟೋದಲ್ಲಿದ್ದ ಇನ್ನುಳಿದವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Related posts

ಬೆಳ್ತಂಗಡಿ: ದ.ಕ.ಜಿ.ಪ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಸರಕಾರದ ನಡೆ ಕಾರ್ಯಕರ್ತರ ಕಡೆ ಸಮಾವೇಶಬೆಳ್ತಂಗಡಿ ನಗರ ವ್ಯಾಪ್ತಿಯ ಕಾರ್ಯಕರ್ತರ ಸಭೆ

Suddi Udaya

ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾದ ಮಂಜುನಾಥ್ ರವರಿಗೆ ಮೇಲಂತಬೆಟ್ಟು ಭಗವತಿ ಕ್ಷೇತ್ರದಲ್ಲಿ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ಕ.ಸಾ.ಪ. ಕ್ಕೆ ಸಂಘಟನ ಕಾರ್ಯದರ್ಶಿಗಳ ನೇಮಕ

Suddi Udaya

ಕೊಯ್ಯೂರು ಸ .ಹಿ ಪ್ರಾ. ಶಾಲೆ ಮತ್ತು ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮ

Suddi Udaya

ಸರ್ವಿಸ್ ರಸ್ತೆಯ ಬದಲಿಗೆ ಡ್ಯೂಯೆಲ್ ಕಾರೇಜ್ ನೊಂದಿಗೆ ರಸ್ತೆಯನ್ನು ಅಗಲಗೊಳಿಸಿ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರಿಗೆ ಬೆಳ್ತಂಗಡಿ ವರ್ತಕರ ಸಂಘದಿಂದ ಮನವಿ

Suddi Udaya
error: Content is protected !!