23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ನಡ ಕುತ್ರೋಟ್ಟು ಬಳಿ ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿ: ಬಾಲಕ ಮೃತ್ಯು,

ನಡ :ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾಗಿ ಬಾಲಕ ಸಾವನ್ನಪ್ಪಿರುವ ಘಟನೆ ನಡ ಗ್ರಾಮದ ಹೊಕ್ಕಿಲ ಕುತ್ರೊಟ್ಟು
ನರ್ಜೆ ಕ್ರಾಸ್ ಬಳಿ ನ. 16 ರಂದು ರಾತ್ರಿ ನಡೆದಿದೆ.

ನಾವೂರು ಗ್ರಾಮದ ಗಣೇಶ್ ಎಂಬವರು ಪುತ್ರ
ತನ್ವಿತ್ (12ವ) ಮೃತಪಟ್ಟ ಬಾಲಕ
ನಾವೂರು ಕುಂಡಡ್ಕ ಕಡೆಯಿಂದ ಶಶಿ ಎಂಬವರ ರಿಕ್ಷಾದಲ್ಲಿ
ಧರ್ಮಸ್ಥಳ ಲಕ್ಷ ದೀಪೋತ್ಸವಕ್ಕೆ ಕುತ್ರೋಟ್ಟು – ಟಿ.ಬಿ ಕ್ರಾಸ್ ಮೂಲಕ ಉಜಿರೆ ಹಳೆ ಪೇಟೆಗೆ ಹತ್ತಿರ ರಸ್ತೆಯಲ್ಲಿ ಬರುತ್ತಿದ್ದ ಸಮಯ ಕುತ್ರೋಟ್ಟು ಬಳಿ ಘಟನೆ ನಡೆದಿದೆ.
ಬಾಲಕ ಸೇರಿದಂತೆ ಆಟೋದಲ್ಲಿ ಕೆಲ ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ . ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾಗಿದೆ. ಆಟೋ ಪಲ್ಟಿಯಾಗಿ ಪ ರಿಣಾಮ ಬಾಲಕನ ತಲೆಯ ಭಾಗಕ್ಕೆ ಗಂಭೀರ ಗಾಯವಾಗಿದ್ದ ಬಾಲಕನನ್ನು ತಕ್ಷಣ ಸ್ಥಳೀಯ ನಿವಾಸಿಗಳ ಸಹಕಾರ ದಲ್ಲಿ. ಆಸ್ಪತ್ರೆಗೆ ಕರೆದುಕೊಂಡು ಬಂದರೂ, ಪ್ರಯೋಜನ ವಾಗದೆ ಬಾಲಕ ಮೃತಪಟ್ಟನೆನ್ನಲಾಗಿದೆ. ಆಟೋದಲ್ಲಿದ್ದ ಇನ್ನುಳಿದವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Related posts

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಹಿಂದಿ ದಿವಸ ಆಚರಣೆ

Suddi Udaya

ತಣ್ಣೀರುಪಂತ ಪ್ಯಾಕ್ಸ್ ಆಡಳಿತ ಮಂಡಳಿಗೆ ನಡೆದ ಚುನಾವಣೆ; ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಬಿಜೆಪಿ ಕಾರ್ಯಕರ್ತರಿಗೆ – ಮತದಾರರಿಗೆ ಅಭಿನಂದನಾ ಕಾರ್ಯಕ್ರಮ ಸಹಕಾರ ಭಾರತಿ ಅಧಿಕಾರದ ಚುಕ್ಕಾಣಿ ಹಿಡಿದು ಇತಿಹಾಸ ಸೃಷ್ಟಿಸಿದೆ – ಹರೀಶ್ ಪೂಂಜ

Suddi Udaya

ಸೌಜನ್ಯ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ: ಕುಸುಮಾವತಿಯವರೊಂದಿಗೆ ಮಾತುಕತೆ

Suddi Udaya

ಭೀಕರ ಮಳೆ: ತಣ್ಣೀರುಪಂತದಲ್ಲಿ ಉಷಾ ಪುರುಷೋತ್ತಮರವರ ಮನೆ ಸಂಪೂರ್ಣ ಹಾನಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸತ್ಯನಪಲ್ಕೆ ಶಾಲೆ ಮಕ್ಕಳಿಗೆ ಊಟದ ತಟ್ಟೆ ವಿತರಣೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆ ವೇಣೂರು ಇಲ್ಲಿನ ಹಳೆ ವಿದ್ಯಾರ್ಥಿ ಸಂಘ ಪ್ರತಿ ವರ್ಷದಂತೆ ದೀಪಾವಳಿಯ ನರಕ ಚತುರ್ದಶಿಯಂದು ಆಯೋಜಿಸಿರುವ ವಾರ್ಷಿಕ ಕ್ರೀಡಾಕೂಟ ಹಾಗೂ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ

Suddi Udaya
error: Content is protected !!