22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ನಡ ಕುತ್ರೋಟ್ಟು ಬಳಿ ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿ: ಬಾಲಕ ಮೃತ್ಯು,

ನಡ :ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾಗಿ ಬಾಲಕ ಸಾವನ್ನಪ್ಪಿರುವ ಘಟನೆ ನಡ ಗ್ರಾಮದ ಹೊಕ್ಕಿಲ ಕುತ್ರೊಟ್ಟು
ನರ್ಜೆ ಕ್ರಾಸ್ ಬಳಿ ನ. 16 ರಂದು ರಾತ್ರಿ ನಡೆದಿದೆ.

ನಾವೂರು ಗ್ರಾಮದ ಗಣೇಶ್ ಎಂಬವರು ಪುತ್ರ
ತನ್ವಿತ್ (12ವ) ಮೃತಪಟ್ಟ ಬಾಲಕ
ನಾವೂರು ಕುಂಡಡ್ಕ ಕಡೆಯಿಂದ ಶಶಿ ಎಂಬವರ ರಿಕ್ಷಾದಲ್ಲಿ
ಧರ್ಮಸ್ಥಳ ಲಕ್ಷ ದೀಪೋತ್ಸವಕ್ಕೆ ಕುತ್ರೋಟ್ಟು – ಟಿ.ಬಿ ಕ್ರಾಸ್ ಮೂಲಕ ಉಜಿರೆ ಹಳೆ ಪೇಟೆಗೆ ಹತ್ತಿರ ರಸ್ತೆಯಲ್ಲಿ ಬರುತ್ತಿದ್ದ ಸಮಯ ಕುತ್ರೋಟ್ಟು ಬಳಿ ಘಟನೆ ನಡೆದಿದೆ.
ಬಾಲಕ ಸೇರಿದಂತೆ ಆಟೋದಲ್ಲಿ ಕೆಲ ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ . ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾಗಿದೆ. ಆಟೋ ಪಲ್ಟಿಯಾಗಿ ಪ ರಿಣಾಮ ಬಾಲಕನ ತಲೆಯ ಭಾಗಕ್ಕೆ ಗಂಭೀರ ಗಾಯವಾಗಿದ್ದ ಬಾಲಕನನ್ನು ತಕ್ಷಣ ಸ್ಥಳೀಯ ನಿವಾಸಿಗಳ ಸಹಕಾರ ದಲ್ಲಿ. ಆಸ್ಪತ್ರೆಗೆ ಕರೆದುಕೊಂಡು ಬಂದರೂ, ಪ್ರಯೋಜನ ವಾಗದೆ ಬಾಲಕ ಮೃತಪಟ್ಟನೆನ್ನಲಾಗಿದೆ. ಆಟೋದಲ್ಲಿದ್ದ ಇನ್ನುಳಿದವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Related posts

ಅಳದಂಗಡಿ ಶ್ರೀ ಸತ್ಯ ದೇವತೆಗೆ ಹರಕೆ ರೂಪದಲ್ಲಿ ಗಗ್ಗರ ಸಮಪ೯ಣೆ

Suddi Udaya

ಪಟ್ರಮೆ: ಅಲಂಗೂರು ನಿವಾಸಿ ಶ್ರೀಧರ ಗೌಡ (ಕಾಂತಪ್ಪಗೌಡ) ನಿಧನ

Suddi Udaya

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮಾ ಮಸ್ಜಿದ್ ಯಲ್ಲಿ ಬಕ್ರೀದ್ ಆಚರಣೆ

Suddi Udaya

ಮಾಲಾಡಿ ಗ್ರಾ.ಪಂ ಅಧ್ಯಕ್ಷ ಪುನೀತ್ ಕುಮಾರ್ ನೇತೃತ್ವದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಉಂಟಾಗಿರುವ ದೊಡ್ಡ ಗಾತ್ರದ ಹೊಂಡಗಳನ್ನು ಮುಚ್ಚುವ ಕೆಲಸ, ಸಾರ್ವಜನಿಕರಿಂದ ಮೆಚ್ಚುಗೆ

Suddi Udaya

ಧರ್ಮಸ್ಥಳ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯ

Suddi Udaya

ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!