September 6, 2026
Uncategorized

ನಡ ಕುತ್ರೋಟ್ಟು ಬಳಿ ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿ: ಬಾಲಕ ಮೃತ್ಯು,

ನಡ :ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾಗಿ ಬಾಲಕ ಸಾವನ್ನಪ್ಪಿರುವ ಘಟನೆ ನಡ ಗ್ರಾಮದ ಹೊಕ್ಕಿಲ ಕುತ್ರೊಟ್ಟು
ನರ್ಜೆ ಕ್ರಾಸ್ ಬಳಿ ನ. 16 ರಂದು ರಾತ್ರಿ ನಡೆದಿದೆ.

ನಾವೂರು ಗ್ರಾಮದ ಗಣೇಶ್ ಎಂಬವರು ಪುತ್ರ
ತನ್ವಿತ್ (12ವ) ಮೃತಪಟ್ಟ ಬಾಲಕ
ನಾವೂರು ಕುಂಡಡ್ಕ ಕಡೆಯಿಂದ ಶಶಿ ಎಂಬವರ ರಿಕ್ಷಾದಲ್ಲಿ
ಧರ್ಮಸ್ಥಳ ಲಕ್ಷ ದೀಪೋತ್ಸವಕ್ಕೆ ಕುತ್ರೋಟ್ಟು – ಟಿ.ಬಿ ಕ್ರಾಸ್ ಮೂಲಕ ಉಜಿರೆ ಹಳೆ ಪೇಟೆಗೆ ಹತ್ತಿರ ರಸ್ತೆಯಲ್ಲಿ ಬರುತ್ತಿದ್ದ ಸಮಯ ಕುತ್ರೋಟ್ಟು ಬಳಿ ಘಟನೆ ನಡೆದಿದೆ.
ಬಾಲಕ ಸೇರಿದಂತೆ ಆಟೋದಲ್ಲಿ ಕೆಲ ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ . ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾಗಿದೆ. ಆಟೋ ಪಲ್ಟಿಯಾಗಿ ಪ ರಿಣಾಮ ಬಾಲಕನ ತಲೆಯ ಭಾಗಕ್ಕೆ ಗಂಭೀರ ಗಾಯವಾಗಿದ್ದ ಬಾಲಕನನ್ನು ತಕ್ಷಣ ಸ್ಥಳೀಯ ನಿವಾಸಿಗಳ ಸಹಕಾರ ದಲ್ಲಿ. ಆಸ್ಪತ್ರೆಗೆ ಕರೆದುಕೊಂಡು ಬಂದರೂ, ಪ್ರಯೋಜನ ವಾಗದೆ ಬಾಲಕ ಮೃತಪಟ್ಟನೆನ್ನಲಾಗಿದೆ. ಆಟೋದಲ್ಲಿದ್ದ ಇನ್ನುಳಿದವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Related posts

ವಾಣಿ ಕಾಲೇಜ್ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ವೇಣೂರು ಗ್ರಾ.ಪಂ. ಮಾಜಿ ಅಧ್ಯಕ್ಷ ಕರುಣಾಕರ ಹೆಗ್ಡೆ ನಿಧನ

Suddi Udaya

ಧರ್ಮಸ್ಥಳ ಕನ್ಯಾಡಿಯಲ್ಲಿ ಸಿಡಿಲು ಬಡಿದು ದನ ಸಾವು

Suddi Udaya

ಮಂಜುಶ್ರೀ ಸೀನಿಯರ್ ಚೇಂಬರ್ ಪೂರ್ವಧ್ಯಕ್ಷರಾದ ಪ್ರಥ್ವಿರಂಜನ್ ರಾವ್’ರವರ ಶ್ರದ್ಧಾಂಜಲಿ ಸಭೆ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರಾಗಿದ್ದ ದಿ . ಸುಭಾಶ್ಚಂದ್ರ ಸುರ್ಯಗುತ್ತು ಇವರ ಸ್ಮರಣಾರ್ಥ ಪುಸ್ತಕ ವಿತರಣೆ

Suddi Udaya

ಗುರುವಾಯನಕೆರೆ : ಗೆಳೆಯರ ಬಳಗದ ಶಾರದಾ ಕಲಾ ಮಂಟಪದಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!