July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರಾಯ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಭಜನಾ ತರಬೇತಿ ಕಾರ್ಯಾಗಾರ

ಬೆಳ್ತಂಗಡಿ: ಗುರುವಾಯನಕೆರೆ ಯೋಜನಾ ವ್ಯಾಪ್ತಿಯ ಕರಾಯ ಶ್ರೀ ಕೃಷ್ಣ ಭಜನಾ ಮಂದಿರ ಮತ್ತು ಪರ್ಯಾಯ ಶ್ರೀ ಪುತ್ತಿಗೆ ಮಠ, ಶ್ರೀ ಕೃಷ್ಣ ಮಠ ಉಡುಪಿ ಇಲ್ಲಿನ ವಿಶ್ವಾಗೀತಾ ಪರ್ಯಾಯ 2024-2026 ಇದರ ಗೀತೋತ್ಸವ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳ ಕಮ್ಮಟದ ಹಿರಿಯ ಸಂಪನ್ಮೂಲ ವ್ಯಕ್ತಿ ಸಂಗೀತ ವಿದುಷಿ ಶ್ರೀಮತಿ ಉಷಾ ಹೆಬ್ಬಾರ್ ಮಣಿಪಾಲ ಇವರಿಂದ ಶ್ರೀ ಕೃಷ್ಣ ಭಜನಾ ಮಂದಿರ ಕರಾಯ ಇದರ ಸಭಾಂಗಣದಲ್ಲಿ ಭಜನಾ ತರಬೇತಿ ಕಾರ್ಯಗಾರ ನಡೆಯಿತು.

ಕರಾಯ ವ್ಯಾಪ್ತಿಯ 5 ಭಜನಾ ಮಂಡಳಿಯ 250 ಭಜಕರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಭಜನ ಮಂಡಳಿಗಳಿಗೆ ತರಬೇತಿ ನೀಡಲಾಯಿತು. ಈ ತರಬೇತಿ ಕಾರ್ಯಗಾರದಲ್ಲಿ ಶ್ರೀಮತಿ ಸಾವಿತ್ರಿ , ಬೆಳ್ತಂಗಡಿ ತಾಲೂಕು ಕುಣಿತ ಭಜನಾ ತರಬೇತುದಾರರ ತಂಡದ ಅಧ್ಯಕ್ಷ ಸಂದೇಶ್ ಮದ್ದಡ್ಕ, ಭಜನ ಪರಿಷತ್ ಜಿಲ್ಲಾ ಸಮನ್ವಯಧಿಕಾರಿ ಸಂತೋಷ್ ಪಿ ಅಳಿಯೂರು, ಕರಾಯ ಭಜನಾ ಮಂಡಳಿಯ ಅಧ್ಯಕ್ಷ ಜಗದೀಶ್ ಶೆಟ್ಟಿ ಮೈರಾ, ಭಜನ ಪರಿಷತ್ ರಾಜ್ಯಧ್ಯಕ್ಷ ಚಂದ್ರಶೇಖರ ಸಾಲ್ಯಾನ್ ಕೊಯ್ಯೂರು, ಭಜನಾ ತರಬೇತುದಾರರ ತಂಡ, ವಲಯ ಮೇಲ್ವಿಚಾರಕರರಾದ ವಿಶ್ವನಾಥ್, ಸೇವಾಪ್ರತಿನಿಧಿ ಸುಜಾತಾ, ಭಜನಾ ತರಬೇತುಧಾರರಾದ ನಾಗೇಶ್ ಬಿ ನೆರಿಯ ಹಾಗು ಭಜನ ಮಂಡಳಿಯ ಸದಸ್ಯರು & ಪೋಷಕರು ಉಪಸ್ಥಿತರಿದ್ದರು.


ಕಾರ್ಯಕ್ರಮದ ನಿರೂಪಣೆಯನ್ನು ವಲಯ ಮೇಲ್ವಿಚಾರಕರಾದ ವಿಶ್ವನಾಥ್ ಮಾಡಿದರು. ಮಂಡಳಿಯ ಅಧ್ಯಕ್ಷ ಜಗದೀಶ್ ಶೆಟ್ಟಿ ಮೈರಾ ಧನ್ಯವಾದವಿತ್ತರು.

Related posts

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಕಲ್ಮಂಜ ನಿವಾಸಿ ರಘು ನಿಧನ

Suddi Udaya

ಬೆಳ್ತಂಗಡಿ ತಾಲೂಕು ಸಮಿತಿ ಮತ್ತು ಗ್ರಾಮ ಸಮಿತಿ ರೈತ ಸದಸ್ಯರ ಪ್ರಶಿಕ್ಷಣ ವರ್ಗ

Suddi Udaya

ಬೆಳ್ತಂಗಡಿ: ಯುನೈಟೆಡ್ ಎಂಪವರ್‌ಮೆಂಟ್ ಅಸೋಸಿಯೇಷನ್ ಬೆಳ್ತಂಗಡಿ ವಲಯ ವಾರ್ಷಿಕ ಮಹಾಸಭೆ ಹಾಗೂ ಸಮಿತಿ ರಚನೆ

Suddi Udaya

ಶಿಶಿಲ : ಆಚಾರಿಪಾಲು ನಿವಾಸಿ ಉದ್ಯಮಿ ಸತೀಶ ಗೋಖಲೆ ಕೊಲ್ಕತ್ತದಲ್ಲಿ ನಿಧನ

Suddi Udaya

ಸೋಣಂದೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya
error: Content is protected !!