ಬೆಳ್ತಂಗಡಿ: ಗುಡ್ ಫ್ಯೂಚರ್ ಶಾಲೆಯಲ್ಲಿ ಮಕ್ಕಳ ದಿನಾಚರಣೆ, ವಾರ್ಷಿಕ ಕ್ರೀಡಾಕೂಟ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಿತು.
ಶಾಲಾ ಶಿಕ್ಷಕಿಯರ ಪ್ರಾರ್ಥನೆಯ ಬಳಿಕ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲಾ ಸಂಚಾಲಕರಾದ ನಸೀರ್ ಅಹಮದ್ ಖಾನ್ ರವರು ಹಸಿರು ನಿಶಾನೆಯ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅತಿಥಿಗಳ ಜೊತೆಗೂಡಿ ನೆಹರೂರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಮುಖ್ಯೋಪಾಧ್ಯಾಯರಾದ ಪ್ರಭಾಕರ ಶೆಟ್ಟಿ ಅವರು ಮಕ್ಕಳ ದಿನಾಚರಣೆಯ ಮಹತ್ವವನ್ನು ತಿಳಿಸಿದರು. ಶಿಕ್ಷಕಿ ಶ್ರುತಿ ನೆಹರೂರವರ ಆದರ್ಶ ಜೀವನದ ಕುರಿತು ಮಾತನಾಡಿದರು.
ನಂತರ ನಡೆದ ವಾರ್ಷಿಕ ಬಹುಮಾನ ವಿತರಣಾ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿ ಶ್ರೀಮತಿ ಬಿಂದು ಕೇಶವರವರು ಬಹುಮಾನ ನೀಡುವ ಮೂಲಕ ಚಾಲನೆ ನೀಡಿದರು. ವೇದಿಕೆಯಲ್ಲಿ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಶುಕುರ್ ಸಾಹೇಬ್, ಉಪಾಧ್ಯಕ್ಷ ಧನ ಕೀರ್ತಿ ಜೈನ್ ಹಾಗೂ ಶ್ರೀಮತಿ ವಿನಯ ಮಾಜಿ ಉಪಾಧ್ಯಕ್ಷ ವೀರೇಂದ್ರ ಕುಮಾರ್ ಜೈನ್, ಶ್ರೀಮತಿ ಹರಿಣಾಕ್ಷಿ ಸದಸ್ಯರಾದ ಯಶೋಧರ ರವರು ಉಪಸ್ಥಿತರಿದ್ದು ಮಕ್ಕಳಿಗೆ ಬಹುಮಾನ ವಿತರಿಸಿದರು. ಶಿಕ್ಷಕಿಯರಾದ ಸೌಜನ್ಯ, ಅಫ್ರ ,ರೂಪ ಇವರು ವಿಜೇತರ ಹೆಸರನ್ನು ವಾಚಿಸಿದರು. ಶಿಕ್ಷಕಿ ಕುಮುದಾಕ್ಷಿ ಸ್ವಾಗತಿಸಿ , ರಕ್ಷಿತಾ ಧನ್ಯವಾದವಿತ್ತರು. ಶಿಕ್ಷಕಿ ಪೈಝುನ್ ಕಾರ್ಯಕ್ರಮ ನಿರ್ವಹಿಸಿದರು.















