23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಪ್ರಕರಣ ಹಾಗೂ ಬಂದೂಕು ಪತ್ತೆ ಪ್ರಕರಣ : ಇಂದು ಹೈಕೋರ್ಟ್ ನಲ್ಲಿ ವಿಚಾರಣೆ

ಬೆಳ್ತಂಗಡಿ: ಎಸ್ಐಟಿ ದಾಳಿ ವೇಳೆ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಒಂದು ಅಕ್ರಮ ಬಂದೂಕು ಮತ್ತು ಎರಡು ತಲವಾರು ಪತ್ತೆಯಾದ ಪ್ರಕರಣ ಸಂಬಂಧ ಹೈಕೋರ್ಟ್ ನಲ್ಲಿ ಪ್ರಕರಣಕ್ಕೆ ಮಧ್ಯಂತರ ತಡೆ ಕೋರಿ ಸಲ್ಲಿಸಿದ ಅರ್ಜಿ ವಿಚಾರಣೆ ನ.17 ರಂದು(ಇಂದು) ನಡೆಯಲಿದೆ.

ಬುರುಡೆ ಪ್ರಕರಣ ಸಂಬಂಧ ಆರೋಪಿ ಚಿನ್ನಯ್ಯನಿಗೆ ಆಶ್ರಯ ನೀಡಿದ ಪ್ರಕರಣದಲ್ಲಿ ಎಸ್.ಐ.ಟಿ ಅಧಿಕಾರಿಗಳು ಕೋರ್ಟ್ ಅನುಮತಿ ಪಡೆದು ತಿಮರೋಡಿ ಮಹೇಶ್ ಶೆಟ್ಟಿ ಮನೆಗೆ ದಾಳಿ ಮಾಡಿದಾಗ ಒಂದು ಬಂದೂಕು ಮತ್ತು ಎರಡು ತಲವಾರು ಪತ್ತೆಯಾಗಿತ್ತು. ಈ ಸಂಬಂಧ ಪ್ರಕರಣದಲ್ಲಿ ಜಿಲ್ಲಾ ಕೋರ್ಟ್ ಅರ್ಜಿ ವಜಾ ಮಾಡಿತ್ತು. ಬಳಿಕ ಹೈ ಕೋರ್ಟ್ ನಲ್ಲಿ ಮಧ್ಯಂತರ ತಡೆ ಕೋರಿ ಅರ್ಜಿ ಸಲ್ಲಿಸಿದ್ದರು‌. ಈ ಅರ್ಜಿಗೆ ಮುಂದಿನ ವಿಚಾರಣೆವರೆಗೆ ಮಧ್ಯಂತರ ತಡೆ ನೀಡಿತ್ತು.

ಒಂದು ವರ್ಷಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಪುತ್ತೂರು ಎ.ಸಿ.ಸ್ಟೆಲ್ಲಾ ವರ್ಗಿಸ್ ಸೆ.18 ರಂದು (18-09-2025 ರಿಂದ 17-09-2026 ರವೆಗೆ) ಗಡಿಪಾರು ಮಾಡಿ ಆದೇಶ ಹೊರಡಿಸಿದ್ದರು.
ಈ ಆದೇಶದ ವಿರುದ್ಧ ತಿಮರೋಡಿ ವಕೀಲರ ಮೂಲಕ ದಕ್ಷಿಣ ಕನ್ನಡ ಜಿಲ್ಲಾ ಕೋರ್ಟ್ ಗೆ ಮೊರೆ ಹೋಗಿದ್ದರು. ಆದರೆ ಅ.9 ರಂದು ಜಿಲ್ಲಾ ಕೋರ್ಟ್ ನಲ್ಲಿ ಅರ್ಜಿ ವಜಾಗೊಳಿಸಿತ್ತು. ಇದರ ಬೆನ್ನಲ್ಲೇ ಹೈಕೋರ್ಟ್ ನಲ್ಲಿ ಸೆ.29 ರಂದು ಗಡಿಪಾರು ರದ್ದು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ಅ.13 ರಂದು ವಿಚಾರಣೆ ನಡೆಸಿ ತಿಮರೋಡಿ ಮೇಲೆ ಮುಂದಿನ ಆದೇಶದವರೆಗೆ ಬಲವಂತದ ಕ್ರಮ ಬೇಡ ಎಂದು ಸೂಚನೆ ನೀಡಿ ಗಡಿಪಾರು ಪ್ರಕರಣದ ಆದೇಶವನ್ನು ಕಾಯ್ದಿರಿಸಿತ್ತು.

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಪ್ರಕರಣದ ಆದೇಶದ ಭವಿಷ್ಯ ನ.17 ರಂದು(ಇಂದು) ಹೈ ಕೋರ್ಟ್ ನಲ್ಲಿ ಹೊರಬೀಳಲಿದೆ.

Related posts

ಕನ್ಯಾಡಿ ಶ್ರೀ ರಾಮ ಕ್ಷೇತ್ರದ ನೂತನ ಟ್ರಸ್ಟಿಯಾಗಿ ಬಿ ಪೀತಾಂಬರ ಹೆರಾಜೆ

Suddi Udaya

ಮಡಂತ್ಯಾರು ಜೆಸಿಐ ಪದಾಧಿಕಾರಿಗಳ ಪದಗ್ರಹಣ ಸಮಾರಂಭ: ನೂತನ ಅಧ್ಯಕ್ಷರಾಗಿ ಜೆಸಿ ಅಮಿತಾ ಅಶೋಕ್ ಅಧಿಕಾರ ಸ್ವೀಕಾರ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಸರ್ಕಾರಿ ಬಸ್ಸುಗಳ ಮುಖಾಮುಖಿ ಡಿಕ್ಕಿ: ಪ್ರಯಾಣಿಕರು ಸಣ್ಣಪುಟ್ಟ ಗಾಯಾಗಳಿಂದ ಪಾರು

Suddi Udaya

ವೇಣೂರು: ಸುದೆರ್ದು ನಿಲಯದ ಶ್ರೀಮತಿ ಗೀತಾ ನಿಧನ

Suddi Udaya

ಉಜಿರೆ ಸಂತ ಅಂತೋನಿ ಚರ್ಚ್‌ನಲ್ಲಿ ತೆನೆ ಹಬ್ಬ (ಮೊಂತಿ ಹಬ್ಬ)

Suddi Udaya

ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೈ‌ ಕೊಟ್ಟ ವಿದ್ಯುತ್: ವೈದ್ಯರಿಂದ ಕತ್ತಲಲ್ಲಿ ರೋಗಿಗಳ ಆರೋಗ್ಯ ತಪಾಸಣೆ: ಇನ್ವರ್ಟರ್ ವ್ಯವಸ್ಥೆಗಳು ಇಲ್ಲದೆ ಟಾರ್ಚ್ ಬೆಳಕಿನಿಂದ ಚಿಕಿತ್ಸೆ ನೀಡಬೇಕಾದ ಸ್ಥಿತಿ

Suddi Udaya
error: Content is protected !!