September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಪ್ರಕರಣ: ಆದೇಶ ರದ್ದುಪಡಿಸಿದ ಹೈಕೋರ್ಟ್

ಬೆಳ್ತಂಗಡಿ: ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತರು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ.

ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಸೆಪ್ಟೆಂಬರ್ 18ರಂದು ಪುತ್ತೂರು ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗಿಸ್ ಹೊರಡಿಸಿರುವ ಆದೇಶವನ್ನು ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಇಂದು (ನ.17) ಪ್ರಕಟಿಸಿತು.

ಅರ್ಜಿಯನ್ನು ಭಾಗಶಃ ಮಾನ್ಯ ಮಾಡಿರುವ ನ್ಯಾಯಪೀಠ, ಮಹೇಶ್ ಶೆಟ್ಟಿ ತಿಮರೋಡಿಯವರ ಗಡಿಪಾರು ಆದೇಶ ರದ್ದುಪಡಿಸಿ‌ ಆದೇಶ ನೀಡಿದೆ. ಅಲ್ಲದೆ ಪ್ರಕರಣವನ್ನು ಹೊಸದಾಗಿ ಪರಿಗಣಿಸಿ 15 ದಿನದೊಳಗೆ ಸೂಕ್ತ ಆದೇಶ ಹೊರಡಿಸುವಂತೆಯೂ ಎರಡನೇ ಪ್ರತಿವಾದಿಯಾದ ಪುತ್ತೂರು ಸಹಾಯಕ ಆಯುಕ್ತರಿಗೆ ನ್ಯಾಯಪೀಠ ನಿರ್ದೇಶಿಸಿದೆ ಎಂದು ಮಾಹಿತಿ ಲಭ್ಯವಾಗಿದೆ.

Related posts

ಕಲ್ಮಂಜ 88 ನೇ ವಾರ್ಡಿನ ಬಿಜೆಪಿ ಪದಾಧಿಕಾರಿಗಳ ಆಯ್ಕೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನಕ್ಕೆ ಶಿವಪ್ಪ ಪೂಜಾರಿ ಕುಟುಂಬಸ್ಥರಿಂದ “ಬೆಳ್ಳಿಯ ಹೂವಿನ” ಮಾಲೆ ಸಮರ್ಪಣೆ

Suddi Udaya

ಮಾಲಾಡಿ: ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ರಿಂದ ಕಾರ್ಯಕರ್ತರ ಸಭೆ

Suddi Udaya

ಮರೋಡಿ: ವಿಕಸಿತ ಭಾರತ ಸಂಕಲ್ಪ ಯಾತ್ರೆ-ಸಾಧಕರಿಗೆ ಗೌರವಾರ್ಪಣೆ

Suddi Udaya

ಪಿಯುಸಿ ಫಲಿತಾಂಶ: ಪುಂಜಾಲಕಟ್ಟೆ ಪ.ಪೂ. ಕಾಲೇಜಿನ ಸಾತ್ವಿಗೆ 583 ಅಂಕ

Suddi Udaya

ಇತ್ತೀಚೆಗೆ ನಿಧನರಾದ ವೆಂಕಪ್ಪ ಗೌಡರವರ ಮನೆಗೆ ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಭೇಟಿ

Suddi Udaya
error: Content is protected !!