25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರೂ. 2.00 ಕೋಟಿ ಅನುದಾನದಲ್ಲಿ ಬೆಳ್ತಂಗಡಿ ನಗರದ ಕೆ.ಇ.ಬಿ ರಸ್ತೆ- ರೆಂಕೆದಗುತ್ತು-ಮಲ್ಲೊಟ್ಟು ಸಂಪರ್ಕಿಸುವ ರಸ್ತೆಯ ಅಗಲೀಕರಣ ಡಾಂಬರೀಕರಣ ಮತ್ತು ಒಳಚರಂಡಿ ನಿರ್ಮಾಣಕ್ಕೆ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಶಿಲಾನ್ಯಾಸ, ಶಾಸಕ ಹರೀಶ್ ಪೂಂಜ ಭಾಗಿ

ಬೆಳ್ತಂಗಡಿ:ರಾಜ್ಯಸಭಾ ಸಂಸದರಾದ,ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ‌.ಡಿ ವೀರೇಂದ್ರ ಹೆಗ್ಗಡೆಯವರ ಪ್ರದೇಶಾಭಿವೃದ್ಧಿ ನಿಧಿಯಡಿ ಮಂಜೂರುಗೊಂಡಿರುವ ರೂ. 2.00 ಕೋಟಿ ಅನುದಾನದಲ್ಲಿ ಬೆಳ್ತಂಗಡಿ ನಗರದ ಕೆ.ಇ.ಬಿ ರಸ್ತೆ- ರೆಂಕೆದಗುತ್ತು-ಮಲ್ಲೊಟ್ಟು ಸಂಪರ್ಕಿಸುವ ರಸ್ತೆಯ ಅಗಲೀಕರಣ ಡಾಂಬರೀಲರಣ ಮತ್ತು ಒಳಚರಂಡಿ ನಿರ್ಮಾಣಕ್ಕೆ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಶಿಲಾನ್ಯಾಸ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು ಹಾಲು ಉತ್ಪಾದನೆಯಲ್ಲಿ ಬೀದರ್ ಜಿಲ್ಲೆ ತೀರಾ ಹಿಂದೆ ಉಳಿದಿದ್ದು, ಅಲ್ಲಿಗೆ ಹೆಚ್ವಿನ ಅನುದಾನ ನೀಡಿ ಹಾಲು ಹೆಚ್ಚಳ ಮಾಡಲಾಗಿದೆ‌.ಸ್ಮಾರ್ಟ್ ಕ್ಲಾಸ್ ಗೆ ಸಹಕಾರ ನೀಡಲಾಗಿದೆ.ಎಲ್ಲರ ಅನುಕೂಲಕ್ಕಾಗಿ ರಸ್ತೆ ಅಭಿವೃದ್ಧಿಗೆ ಅನುದಾನ ನೀಡಲಾಗಿದೆ. ಸಿರಿ ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದರು‌

ಶಾಸಕ ಹರೀಶ್ ಪೂಂಜ ಮಾತನಾಡಿ ಸಿರಿ ಸಂಸ್ಥೆ ಈ ಭಾಗಕ್ಕೆ ಬಂದ ಮೇಲೆ ಜನರ ಅನುಕೂಲಕ್ಕಾಗಿ ಇಲ್ಲಿನ ರಸ್ತೆಗೆ ಖಾವಂದರು ರೂ.2 ಕೋಟಿ ಅನುದಾನ ನೀಡಿ ಸಹಕರಿಸಿದ್ದಾರೆ.ಸಾವಿರಾರು ಜನರು,ವಾಹನ ಓಡಾಡುವ ರಸ್ತೆ ಇದಾಗಿದ್ದು,ಉಪ್ಪಿನಂಗಡಿಗೆ ಸಂಪರ್ಕಿಸುತ್ತಿದೆ. ರಾಜ್ಯಸಭಾ ಅನುದಾನವನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ ಇಡೀ ದೇಶಕ್ಕೆ ಖಾವಂದರು ಮಾದರಿಯಾಗಿದ್ದಾರೆ.ಸಿರಿ ಸಂಸ್ಥೆಯ ಎದುರಿರುವ 15 ಎಕ್ರೆ ಜಾಗದಲ್ಲಿ ತಾಲೂಕು ಕ್ರೀಡಾಂಗಣ ನಿರ್ಮಾಣವಾಗಲಿದೆ ಎಂದರು.

ವೇದಿಕೆಯಲ್ಲಿ ಬರೋಡ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ,ಎಸ್.ಕೆ.ಡಿ.ಆರ್.ಡೊ.ಪಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅನಿಲ್ ಕುಮಾರ್ ಎಸ್.ಎಸ್,ಸಿರಿ ನಿರ್ದೇಶಕ,ಉದ್ಯಮಿ ರಾಜೇಶ್ ಪೈ,ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ,ಉಪಾಧ್ಯಕ್ಷೆ ಗೌರಿ, ಸ್ಥಾಯಿ ಸಮಿತಿ ಅಧ್ಯಕ್ಷ ಶರತ್ ಶೆಟ್ಟಿ,ನಗರ ಪಂಚಾಯತ್ ಮುಖ್ಯಧಿಕಾರಿ ರಾಜೇಶ್ ಉಪಸ್ಥಿತರಿದ್ದರು.

ಡಾ.ಡಿ.ಹೆಗ್ಗಡೆಯವರನ್ನು ಪಟ್ಟಣ ಪಂಚಾಯತ್ ವತಿಯಿಂದ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಪ್ರಮುಖರಾದ ಶ್ರೀನಿವಾಸ್ ರಾವ್ ಧರ್ಮಸ್ಥಳ,ಸಂಪತ್ ರತ್ನ ಉಜಿರೆ,ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಬಾಲಕೃಷ್ಣ ಶೆಟ್ಟಿ ಸಾಲಿಗ್ರಾಮ,ಜಗದೀಶ್ ಡಿ,ಜೇಮ್ಸ್ ರುಡ್ ಸೆಟ್,ಪ್ರಸಾದ್ ಬೆಳ್ತಂಗಡಿ, ಶ್ರೀನಾಥ್ ಕೆ.ಎಮ್,ರಜನಿ ಕುಡ್ವ,ವಿವೇಕಾನಂದ ಪ್ರಭು,ಕಿರಣ್ ಕುಮಾರ್ ಶೆಟ್ಟಿ ಹಾಗೂ ಇತರರು ಉಪಸ್ಥಿತರಿದ್ದರು.

ಸಿರಿ ಸಂಸ್ಥೆಯ ಎಂಡಿ ಕೆ.ಎನ್ ಜನಾರ್ಧನ್ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು.ಸಿರಿ ಸಂಸ್ಥೆಯ ಜೀವನ್ ನಿರೂಪಿಸಿದರು. ಸಿಇಓ ಹಾಗೂ ಸಿಬ್ಬಂದಿಗಳು ಸಹಕರಿಸಿದರು.

Related posts

ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಬೆಳ್ತಂಗಡಿ ಮುರ ನಿವಾಸಿ ಬೈಕ್ ಸವಾರ ಗಂಭೀರ, ಬೈಕ್ ನಲ್ಲಿದ್ದ ಪುಟ್ಟ ಮಗು ಸ್ಥಳದಲ್ಲೇ ಮೃತ್ಯು

Suddi Udaya

ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟದ ಕರ್ನಾಟಕ ತಂಡದ ಶಿಬಿರಕ್ಕೆ ಸುಲ್ಕೇರಿಯ ಶಶಿಕಾಂತ್ ಆಯ್ಕೆ

Suddi Udaya

ಕುತ್ಲೂರು ಶಾಲೆಯಲ್ಲಿ ಮರಳಿ ಮಕ್ಕಳನ್ನು ಸೇರಿಸೋಣ ಅಭಿಯಾನ

Suddi Udaya

ಡಿ.29,30,31 ಸುಲ್ಕೇರಿ ಬಸದಿ ಧಾಮ ಸಂಪ್ರೋಕ್ಷಣ ಪೂರ್ವಕ ಪ್ರತಿಷ್ಠಾ ಮಹೋತ್ಸವ

Suddi Udaya

“ಸ್ಪೆಕ್ಟ್ರಾ” ಅಸೋಸಿಯೇಶನ್‌ ನ ವಾರ್ಷಿಕ ಕಾರ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya

ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದಿಂದ ವೈದ್ಯಕೀಯ ನೆರವು

Suddi Udaya
error: Content is protected !!