September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

ಲಾಯಿಲ ಗ್ರಾಮ ಪಂಚಾಯತ್ ನಲ್ಲಿ 2025-26 ನೇ ಸಾಲಿನ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆಯನ್ನು ಹಮ್ಮಿಕೊಳ್ಳಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಪಂಚಾಯತ್ ಅಧ್ಯಕ್ಷೆ ಜಯಂತಿ ಎಂ ಕೆ ವಹಿಸಿದರು. ಸಭೆಯಲ್ಲಿ ಪಂಚಾಯತ್ ಉಪಾಧ್ಯಕ್ಷರು, ಸದಸ್ಯರಾದ ಜಯಂತಿ ಆಶಾಸಾಲ್ದಾನ, ರಜನಿ ಎಂ ಆರ್, ಅರವಿಂದ ಕುಮಾರ್, ಲೆಕ್ಕಸಹಾಯಕರಾದ ಸುಪ್ರಿತಾ ಶೆಟ್ಟಿ ಮತ್ತು ಅರೋಗ್ಯ ಕಾರ್ಯಕರ್ತೆ ಸರಸ್ವತಿ ಆಶಾಕಾರ್ಯಕರ್ತರು ಹಾಗೂ ಇಂದಬೆಟ್ಟು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರದ ಜೋಸೆಫ್ ರವರು ಹಾಜರಿದ್ದು ವಿಶೇಷ ವಿಕಲಚೇತನ ರಿಗೆ ಸಿಗುವ ಸೌಲಭ್ಯದ ಬಗ್ಗೆ ಮಾಹಿತಿ ನೀಡಿದರು.

ಸೌಭಾಗ್ಯ ವಿಕಲಚೇತನರ ಪತ್ತಿನ ಸಹಕಾರಿ ಸಂಘದ ವ್ಯವಸ್ಥಾಪಕರು ಉಪಸ್ಥಿತರಿದ್ದರು. ವಿಕಲಚೇತನರಿಗೆ ಬ್ಯಾಂಕಿನಿಂದ ಸಿಗುವ ಸೌಲಭ್ಯದ ಬಗ್ಗೆ ಮಾಹಿತಿ ನೀಡಿದರು. ಆಯ್ದ ಫಲಾನುಭವಿಗಳಿಗೆ ಪಂಚಾಯತ್ ವತಿಯಿಂದ ವೀಲ್ ಚೇರ್, ವಾಕರ್ ವಿತರಿಸಲಾಯಿತು. ಗ್ರಾಮ ಸಭೆಗೆ ಆಗಮಿಸಿದ ಎಲ್ಲಾರಿಗೂ ಅರೋಗ್ಯ ತಪಾಸಣೆಯನ್ನು ಏರ್ಪಡಿಸಲಾಗಿತ್ತು.

ವಿಶೇಷವಾಗಿ ಪಂಚಾಯತ್ ನಲ್ಲಿ ಸೇವೆ ಸಲಿಸುತ್ತಿರುವ ವಿ ಆರ್ ಡಬ್ಲ್ಯೂ ಸೋಮನಾಥ ಹಾಗೂ ಸ್ವಚ್ಛತಾ ಸಿಬ್ಬಂದಿ ಯೋಗೀಶ್ ಇವರಿಗೆ ಉತ್ತಮ ಸೇವಾ ಮನೋಭಾವಕ್ಕೆ ಗೌರವ ಸನ್ಮಾನ ಹಮ್ಮಿಕೊಳ್ಳಲಾಯಿತು. ಪಂಚಾಯತ್ ಲೆಕ್ಕ ಸಹಾಯಕಿ ಸುಪ್ರೀತಾ ಶೆಟ್ಟಿ ನಿರೂಪಿಸಿ, ಧನ್ಯವಾದವಿತ್ತರು.

ಗ್ರಾಮ ಪಂಚಾಯತ್ ಬಿಲ್ ಕಲೆಕ್ಟರ್ ಮೋಹನ್ ಜಮಾ ಖರ್ಚು ಮಂಡನೆ ಮಾಡಿದರು. ಸಿಬ್ಬಂದಿಗಳು ಸಹಕರಿಸಿದರು.

Related posts

ಕು.ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ನೈಜ್ಯ ಆರೋಪಿಗಳ ಪತ್ತೆಯಾಗಿ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ

Suddi Udaya

ಉಜಿರೆ: ‘ಮರು ಉತ್ಪಾದನೆಗೆ ಯೋಗ್ಯವಿಲ್ಲದ ಪ್ಲಾಸ್ಟಿಕ್ ತ್ಯಾಜ್ಯದಿಂದ ಡಾಮಾರು ರಸ್ತೆ ನಿರ್ಮಾಣ” ಕುರಿತು ರಾಜ್ಯ ಮಟ್ಟದ ವಿಚಾರ ಸಂಕಿರಣ

Suddi Udaya

ವಾಣಿ ಪ.ಪೂ. ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya

ಗುರುವಾಯನಕೆರೆ: ಸ್ಕೂಟಿ- ಬೈಕ್ ಮುಖಾಮುಖಿ ಡಿಕ್ಕಿ,ಸವಾರರಿಬ್ಬರಿಗೆ ಗಂಭೀರ ಗಾಯ,ಆಸ್ಪತ್ರೆಗೆ ದಾಖಲು

Suddi Udaya

ಶಿಬಾಜೆ: ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿಯ ಮನೆಗೆ ಶಾಸಕ ಹರೀಶ್ ಪೂಂಜ ಹಾಗೂ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯ ವೈಯಕ್ತಿಕ ಹಾಗೂ ಸಾಮೂಹಿಕ ವಿಭಾಗದಲ್ಲಿ ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಪ್ರಥಮ ಸ್ಥಾನ

Suddi Udaya
error: Content is protected !!