September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರಾಯ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಭಜನಾ ತರಬೇತಿ ಕಾರ್ಯಾಗಾರ

ಬೆಳ್ತಂಗಡಿ: ಗುರುವಾಯನಕೆರೆ ಯೋಜನಾ ವ್ಯಾಪ್ತಿಯ ಕರಾಯ ಶ್ರೀ ಕೃಷ್ಣ ಭಜನಾ ಮಂದಿರ ಮತ್ತು ಪರ್ಯಾಯ ಶ್ರೀ ಪುತ್ತಿಗೆ ಮಠ, ಶ್ರೀ ಕೃಷ್ಣ ಮಠ ಉಡುಪಿ ಇಲ್ಲಿನ ವಿಶ್ವಾಗೀತಾ ಪರ್ಯಾಯ 2024-2026 ಇದರ ಗೀತೋತ್ಸವ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳ ಕಮ್ಮಟದ ಹಿರಿಯ ಸಂಪನ್ಮೂಲ ವ್ಯಕ್ತಿ ಸಂಗೀತ ವಿದುಷಿ ಶ್ರೀಮತಿ ಉಷಾ ಹೆಬ್ಬಾರ್ ಮಣಿಪಾಲ ಇವರಿಂದ ಶ್ರೀ ಕೃಷ್ಣ ಭಜನಾ ಮಂದಿರ ಕರಾಯ ಇದರ ಸಭಾಂಗಣದಲ್ಲಿ ಭಜನಾ ತರಬೇತಿ ಕಾರ್ಯಗಾರ ನಡೆಯಿತು.

ಕರಾಯ ವ್ಯಾಪ್ತಿಯ 5 ಭಜನಾ ಮಂಡಳಿಯ 250 ಭಜಕರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಭಜನ ಮಂಡಳಿಗಳಿಗೆ ತರಬೇತಿ ನೀಡಲಾಯಿತು. ಈ ತರಬೇತಿ ಕಾರ್ಯಗಾರದಲ್ಲಿ ಶ್ರೀಮತಿ ಸಾವಿತ್ರಿ , ಬೆಳ್ತಂಗಡಿ ತಾಲೂಕು ಕುಣಿತ ಭಜನಾ ತರಬೇತುದಾರರ ತಂಡದ ಅಧ್ಯಕ್ಷ ಸಂದೇಶ್ ಮದ್ದಡ್ಕ, ಭಜನ ಪರಿಷತ್ ಜಿಲ್ಲಾ ಸಮನ್ವಯಧಿಕಾರಿ ಸಂತೋಷ್ ಪಿ ಅಳಿಯೂರು, ಕರಾಯ ಭಜನಾ ಮಂಡಳಿಯ ಅಧ್ಯಕ್ಷ ಜಗದೀಶ್ ಶೆಟ್ಟಿ ಮೈರಾ, ಭಜನ ಪರಿಷತ್ ರಾಜ್ಯಧ್ಯಕ್ಷ ಚಂದ್ರಶೇಖರ ಸಾಲ್ಯಾನ್ ಕೊಯ್ಯೂರು, ಭಜನಾ ತರಬೇತುದಾರರ ತಂಡ, ವಲಯ ಮೇಲ್ವಿಚಾರಕರರಾದ ವಿಶ್ವನಾಥ್, ಸೇವಾಪ್ರತಿನಿಧಿ ಸುಜಾತಾ, ಭಜನಾ ತರಬೇತುಧಾರರಾದ ನಾಗೇಶ್ ಬಿ ನೆರಿಯ ಹಾಗು ಭಜನ ಮಂಡಳಿಯ ಸದಸ್ಯರು & ಪೋಷಕರು ಉಪಸ್ಥಿತರಿದ್ದರು.


ಕಾರ್ಯಕ್ರಮದ ನಿರೂಪಣೆಯನ್ನು ವಲಯ ಮೇಲ್ವಿಚಾರಕರಾದ ವಿಶ್ವನಾಥ್ ಮಾಡಿದರು. ಮಂಡಳಿಯ ಅಧ್ಯಕ್ಷ ಜಗದೀಶ್ ಶೆಟ್ಟಿ ಮೈರಾ ಧನ್ಯವಾದವಿತ್ತರು.

Related posts

ಇಚ್ಚೂರು ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಷಷ್ಠಿಯ ಪ್ರಯುಕ್ತ ವಿಶೇಷ ಭಜನಾ ಕಾರ್ಯಕ್ರಮ

Suddi Udaya

ಡಿ.26 ವಿದ್ಯುತ್ ನಿಲುಗಡೆ

Suddi Udaya

ನಿರೂಪಕ ಅಜಿತ್ ಕೊಕ್ರಾಡಿ ಯವರಿಗೆ ” ನಿರೂಪಣಾ ರತ್ನ ರಾಜ್ಯ ಪ್ರಶಸ್ತಿ -2026″

Suddi Udaya

ಪಿಯುಸಿ ಫಲಿತಾಂಶ: ಎಸ್‌ಡಿಎಂ ಪಿಯು ಕಾಲೇಜಿಗೆ ಶೇ.98.78 ಫಲಿತಾಂಶ

Suddi Udaya

ನಾಳೆ (ಜು.14) ಉಜಿರೆಯಲ್ಲಿ ಶುಭಾರಂಭಗೊಳ್ಳಲಿದೆ “ಡೈನಮಿಕ್ ಡ್ಯಾನ್ಸ್ ಫ್ಯಾಕ್ಟರಿ&ಕಾಸ್ಟೋಮ್ ಕಾರ್ನರ್”

Suddi Udaya

ನೆಲ್ಯಾಡಿಯಲ್ಲಿ ಉದನೆ ವಲಯ ಮಟ್ಟದ ಮಾತೃಸಂಗಮ ‘ಫಿದೆಲಿಯುಂ–2026’

Suddi Udaya
error: Content is protected !!