38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುವೆಟ್ಟು ಮತ್ತು ಓಡಿಲ್ನಾಳ ಬಿಜೆಪಿ ಶಕ್ತಿ ಕೇಂದ್ರಗಳ ಅಭ್ಯಾಸ ವರ್ಗ

ಕುವೆಟ್ಟು : ಕುವೆಟ್ಟು ಮತ್ತು ಓಡಿಲ್ನಾಳ ಬಿಜೆಪಿ ಶಕ್ತಿ ಕೇಂದ್ರಗಳ ಅಭ್ಯಾಸವರ್ಗ ಕಾರ್ಯಕ್ರಮ ನ. 16 ರಂದು ಕುವೆಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಗಣೇಶ್ ಕುಲಾಲ್ ಅವರ ಮನೆಯಲ್ಲಿ ನಡೆಯಿತು.

ಬಿಜೆಪಿಯ ಹಿರಿಯ ಕಾರ್ಯಕರ್ತ ಗಂಗಯ್ಯ ಮೂಲ್ಯ ಮತ್ತು ಮಾಜಿ ಕುವೆಟ್ಟು ಪಂಚಾಯತ್ ಅಧ್ಯಕ್ಷ ಅಧ್ಯಕ್ಷ ಪೂವಪ್ಪ ಭಂಡಾರಿಯವರು ದೀಪ ಬೆಳಗಿಸಿ, ಭಾರತ ಮಾತೆಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು.
ಮಂಡಲ ಉಪಾಧ್ಯಕ್ಷ ಕೊರಗಪ್ಪ ಗೌಡ ಉದ್ಘಾಟನಾ ಭಾಷಣ ಮಾಡಿ ಶುಭ ಹಾರೈಸಿದರು.

ನಮ್ಮ ವೈಚಾರಿಕತೆ ಮತ್ತು ಪಂಚ ಪರಿವರ್ತನೆ ವಿಷಯವನ್ನು ಉಮೇಶ್ ನರ್ತಿಕಲ್ಲು ಮಂಡನೆ ಮಾಡಿದರು. ಬೂತ್ ಸಂಘಟನೆ ಮತ್ತು ಸ್ಥಳೀಯ ಆಡಳಿತದೊಂದಿಗೆ ನಮ್ಮ ಪಾತ್ರ ಈ ವಿಷಯವನ್ನು ಸುದೀರ್ ಸುವರ್ಣ ಅಳದಂಗಡಿಯವರು ಮಂಡಿಸಿದರು. ವಿಕಸಿತ ಭಾರತದ ಅಮೃತ ಕಾಲದಲ್ಲಿ ನಮ್ಮ ಸಕ್ರಿಯತೆ ವಿಷಯವನ್ನು ಸೀತಾ ರಾಮ್ ಬೆಲಾಲ್ ಮಂಡಿಸಿದರು.ಬೂತ್ ಷ ಬೈಠಕ್ ಧರ್ಮಸ್ಥಳ ಮಹಾಶಕ್ತಿಕೇಂದ್ರ ಅಧ್ಯಕ್ಷ ಚಂದ್ರಕಾಂತ್ ನಿಡ್ಡಾಜೆಯವರು ತೆಗೆದುಕೊಂಡು ವರದಿ ಪಡೆದುಕೊಂಡರು.
ಶಾಸಕ ಹರೀಶ್ ಪೂಂಜ ಸಮಾರೋಪ ಭಾಷಣ ಮಾಡಿದರು.

ಕುವೆಟ್ಟು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಚಂದ್ರಕಾಂತ್ ನಿಡ್ಡಾಜೆ, ಪ್ರಧಾನ ಕಾರ್ಯದರ್ಶಿ ಪ್ರದೀಪ್ ಶೆಟ್ಟಿ ಶಕ್ತಿನಗರ, ಪಕ್ಷದ ಪ್ರಮುಖರಾದ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಮಮತಾ ಶೆಟ್ಟಿ ದೇವಸ್ಯ,ಯುವ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಉಮೇಶ್ ಕುಲಾಲ್, ಹಿಂದುಳಿದ ಮೋರ್ಚಾದ ತಾಲೂಕು ಕಾರ್ಯದರ್ಶಿ ವಿಠಲ ಆಚಾರ್ಯ, ಮಾಜಿ ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕರಾದ ಪ್ರಭಾಕರ್ ಶೆಟ್ಟಿ ಉಪ್ಪಡ್ಕ, ತಿಲಕ್ ಕಂಚಿಂಜ, ಕುವೆಟ್ಟು ಶಕ್ತಿ ಕೇಂದ್ರದ ಅಧ್ಯಕ್ಷರಾದ ಚಂದ್ರಹಾಸ ದಾಸ್,ಓಡಿಲ್ನಾಳ ಶಕ್ತಿ ಕೇಂದ್ರದ ಅಧ್ಯಕ್ಷರಾದ ರಾಜಪ್ರಕಾಶ್ ಪಡ್ಡೈಲು ಹಾಗು ಕುವೆಟ್ಟು ಮತ್ತು ಓಡಿಲ್ನಾಲ ಭಾಗದ ಪಂಚಾಯತ್ ಸದಸ್ಯರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ಪಂಚಾಯತ್ ಅಧ್ಯಕ್ಷೆ ಭಾರತಿ ಶೆಟ್ಟಿಯವರು ಬಿಜೆಪಿ ಗೀತೆ ಯೊಂದಿಗೆ ಸಂಪದ ಆರಂಭ ಆಗಿ, ಕುಮಾರಿ ರಮ್ಯಾ ಅವರು ವಂದೇಮಾತರಂ ಗೀತೆ ಹಾಡಿದರು. ಬೆಳ್ತಂಗಡಿ ಯುವಮೋರ್ಚಾ ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ ಗುರುವಾಯನಕೆರೆ ಸ್ವಾಗತಿಸಿದರು, ಕುವೆಟ್ಟು ಗ್ರಾಮ ಪಂಚಾಯತ್ ಸದಸ್ಯ ನಿತಿನ್ ಬರಾಯ ಧನ್ಯವಾದವಿತ್ತರು.

Related posts

ನಿಡ್ಲೆ ಸ.ಪ್ರೌ. ಶಾಲೆಯಲ್ಲಿ ಶಾಲಾ ಸಂಸತ್ತು ಮತ್ತು ವಿವಿಧ ಸಂಘಗಳ ಉದ್ಘಾಟನೆ

Suddi Udaya

ಫೆ. 14 : ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಸ್ತ್ರೀರೋಗ ಮತ್ತು ಬಂಜೆತನ ತಪಾಸಣಾ ಶಿಬಿರ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದಲ್ಲಿ ರೈತರಿಗಾಗಿ ಕೃಷಿ ಉಪಕರಣಗಳ ಪ್ರದರ್ಶನ ಮತ್ತು ಮಾರಾಟ

Suddi Udaya

ಕೊಯ್ಯೂರು ಪಂಚದುರ್ಗ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಮಚ್ಚಿನ ಸ. ಪ್ರೌ.ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ನೆರಿಯ ವಾಲ್ಮೀಕಿ ಆಶ್ರಮ ಶಾಲೆಯ ಶಿಕ್ಷಕ ಕೃಷ್ಣಪ್ಪರಿಗೆ ಬೀಳ್ಕೊಡುಗೆ

Suddi Udaya
error: Content is protected !!