23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ದಕ್ಷಿಣ ಕನ್ನಡ ಜಿಲ್ಲೆಯ ಮಾರ್ಗದರ್ಶಿ ಬ್ಯಾಂಕ್ ನಿಂದ “ನಿಮ್ಮ ಹಣ ನಿಮ್ಮ ಹಕ್ಕು” ‘ಅನ್ಕ್ಲೇಮ್ಡ್ ಡೆಪಾಸಿಟ್’ ಜಾಗೃತಿ ಅಭಿಯಾನ

ಮಂಗಳೂರು: ದೀರ್ಘಕಾಲದವರೆಗೆ ಕ್ಲೇಮ್ ಮಾಡದಿರುವ ಠೇವಣಿಗಳನ್ನು ಗುರುತಿಸಿ, ಅವುಗಳನ್ನು ಖಾತೆದಾರರಿಗೆ ಅಥವಾ ಅವರ ಕಾನೂನುಬದ್ಧ ವಾರಸುದಾರರಿಗೆ ಹಸ್ತಾಂತರಿಸುವ ಉದ್ದೇಶದಿಂದ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ‘ಅನ್ಕ್ಲೇಮ್ಡ್ ಡೆಪಾಸಿಟ್’ ಜಾಗೃತಿ ಅಭಿಯಾನ ಚಾಲನೆ ನೀಡಲಾಯಿತು.

ಅಭಿಯಾನಕ್ಕೆ ಜಿಲ್ಲಾ ಪಂಚಾಯತ್ ಉಪಕಾರ್ಯನಿರ್ವಾಹಕ ಅಧಿಕಾರಿ ಶ್ರೀಮತಿ ಜಯಲಕ್ಷ್ಮಿ ಚಾಲನೆ ನೀಡಿ ನಮ್ಮ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕ್ಲೇಮ್ ಮಾಡದೇ ಒಟ್ಟು 633960 – ಖಾತೆಗಳಲ್ಲಿ 142.79 ಕೋಟಿ ರೂಪಾಯಿ ಇದ್ದು ,ಈ ಅಭಿಯಾನದ ಪ್ರಯೋಜನವನ್ನು ಸೂಕ್ತ ವಾರಸುದಾರರು ಪಡೆಯಲು ಸಹಕಾರಿ ಎಂದು ತಿಳಿಸಿದರು.
ಅಭಿಯಾನದಲ್ಲಿ ಬ್ಯಾಂಕರರಿಗೆ ವೇಗವಾಗಿ ಕ್ಲೇಮ್ ಇತ್ಯರ್ಥ ಮಾಡುವ ವಿಧಾನ, ಅಗತ್ಯ ದಾಖಲೆಗಳು, ಹಾಗೂ ಸರ್ಕಾರದ ಮಾರ್ಗಸೂಚಿಗಳ ಕುರಿತು ಲೀಡ್ ಬ್ಯಾಂಕ್ ವ್ಯವಸ್ಥಾಪಕರು ಶ್ರೀಮತಿ ಕವಿತಾ ಎನ್ ಶೆಟ್ಟಿ ಮಾಹಿತಿ ನೀಡಿ ಅಕ್ಟೋಬರ್ ಹಾಗೂ ನವೆಂಬರ್ ತಿಂಗಳಲ್ಲಿ ಈ ಅಭಿಯಾನದ ಭಾಗವಾಗಿ ಒಟ್ಟು 359 ಖಾತೆಗಳನ್ನು ಕ್ಲೇಮ್ ಮಾಡಿ, ರೂ. 1.50 ಕೋಟಿ ಹಣವನ್ನು ಸಂಬಂಧಿಸಿದ ಮಾಲೀಕರು/ವಾರಸುದಾರರಿಗೆ ಹಸ್ತಾಂತರಿಸಲಾಗಿದೆ ಎಂದು ತಿಳಿಸಿದರು.

ಹಣಕಾಸು ಸಚಿವಾಲಯದ ಮಾರ್ಗಸೂಚಿಯಂತೆ, ದೇಶಾದ್ಯಂತ ಈ ‘ನಿಮ್ಮ ಹಣ ನಿಮ್ಮ ಹಕ್ಕು’ ವಿಶೇಷ ಅಭಿಯಾನವು ಬ್ಯಾಂಕಿಂಗ್, ವಿಮೆ ಹಾಗೂ ಸಂಬಂಧಿತ ವಲಯದ ಎಲ್ಲಾ ಶಾಖೆಗಳಲ್ಲಿ 31 ಡಿಸೆಂಬರ್ 2025 ರವರೆಗೆ ಮುಂದುವರಿಯಲಿದೆ. ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ಎಲ್ಐಸಿ ಪ್ರತಿನಿಧಿಗಳು, ಹಾಗೂ ಜಿಲ್ಲಾ ಬ್ಯಾಂಕ್ ಸಂಯೋಜಕರು ಪಾಲ್ಗೊಂಡಿದ್ದರು.

Related posts

ನಡ ಗೌಡರ ಯಾನೆ ಒಕ್ಕಲಿಗರ ಸೇವಾ ಮಹಿಳಾ ಘಟಕ, ಯುವ ವೇದಿಕೆ “ಆಟಿಡೊಂಜಿ ದಿನ” ಹಾಗೂ “ಪ್ರತಿಭಾ ಪುರಸ್ಕಾರ”

Suddi Udaya

ಕೊಕ್ಕಡ: ನಿವೃತ್ತ ಶಿಕ್ಷಕರ ಬೀಳ್ಕೊಡುಗೆ ಸಮಾರಂಭ ಹಾಗೂ ನಿವೃತ್ತ ಸೈನಿಕ ಕೆ. ಮಹಾಬಲರವರಿಗೆ ಅಭಿನಂದನೆ

Suddi Udaya

ಸೌಜನ್ಯ ಪ್ರಕರಣ : ನಡ ಮತ್ತು ಕನ್ಯಾಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಇಂದಬೆಟ್ಟು: ಶತಾಯುಷಿ ಮತದಾರ ಬಂಗಾಡಿ ಅರಮನೆಯ ಬಿ. ರವಿರಾಜ್ ಬಲ್ಲಾಳ್ ರಿಗೆ ಚುನಾವಣಾ ಆಯೋಗದಿಂದ ಗೌರವಪೂರ್ವಕ ಸನ್ಮಾನ ಹಾಗೂ ಪ್ರಮಾಣ ಪತ್ರ ವಿತರಣೆ

Suddi Udaya

ಪರೀಕ್ಷೆಗೆ ಸಂಬಂಧಿಸಿದ ಗೊಂದಲಗಳನ್ನು ಪರಿಹರಿಸಲು ಕೂಡಲೇ ಕ್ರಮಕೈಗೊಳ್ಳುವಂತೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಿಗೆ ಆಗ್ರಹ

Suddi Udaya

ಕನ್ಯಾಡಿ ಸರ್ಕಾರಿ ಶಾಲೆಗೆ ಹಸಿರು ನೈರ್ಮಲ್ಯ ಅಭ್ಯುದಯ ಪ್ರಶಸ್ತಿ

Suddi Udaya
error: Content is protected !!