ಗ್ರಾಮಾಂತರ ಸುದ್ದಿಚಿತ್ರ ವರದಿ

ದಕ್ಷಿಣ ಕನ್ನಡ ಜಿಲ್ಲೆಯ ಮಾರ್ಗದರ್ಶಿ ಬ್ಯಾಂಕ್ ನಿಂದ “ನಿಮ್ಮ ಹಣ ನಿಮ್ಮ ಹಕ್ಕು” ‘ಅನ್ಕ್ಲೇಮ್ಡ್ ಡೆಪಾಸಿಟ್’ ಜಾಗೃತಿ ಅಭಿಯಾನ

ಮಂಗಳೂರು: ದೀರ್ಘಕಾಲದವರೆಗೆ ಕ್ಲೇಮ್ ಮಾಡದಿರುವ ಠೇವಣಿಗಳನ್ನು ಗುರುತಿಸಿ, ಅವುಗಳನ್ನು ಖಾತೆದಾರರಿಗೆ ಅಥವಾ ಅವರ ಕಾನೂನುಬದ್ಧ ವಾರಸುದಾರರಿಗೆ ಹಸ್ತಾಂತರಿಸುವ ಉದ್ದೇಶದಿಂದ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ‘ಅನ್ಕ್ಲೇಮ್ಡ್ ಡೆಪಾಸಿಟ್’ ಜಾಗೃತಿ ಅಭಿಯಾನ ಚಾಲನೆ ನೀಡಲಾಯಿತು.

ಅಭಿಯಾನಕ್ಕೆ ಜಿಲ್ಲಾ ಪಂಚಾಯತ್ ಉಪಕಾರ್ಯನಿರ್ವಾಹಕ ಅಧಿಕಾರಿ ಶ್ರೀಮತಿ ಜಯಲಕ್ಷ್ಮಿ ಚಾಲನೆ ನೀಡಿ ನಮ್ಮ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕ್ಲೇಮ್ ಮಾಡದೇ ಒಟ್ಟು 633960 – ಖಾತೆಗಳಲ್ಲಿ 142.79 ಕೋಟಿ ರೂಪಾಯಿ ಇದ್ದು ,ಈ ಅಭಿಯಾನದ ಪ್ರಯೋಜನವನ್ನು ಸೂಕ್ತ ವಾರಸುದಾರರು ಪಡೆಯಲು ಸಹಕಾರಿ ಎಂದು ತಿಳಿಸಿದರು.
ಅಭಿಯಾನದಲ್ಲಿ ಬ್ಯಾಂಕರರಿಗೆ ವೇಗವಾಗಿ ಕ್ಲೇಮ್ ಇತ್ಯರ್ಥ ಮಾಡುವ ವಿಧಾನ, ಅಗತ್ಯ ದಾಖಲೆಗಳು, ಹಾಗೂ ಸರ್ಕಾರದ ಮಾರ್ಗಸೂಚಿಗಳ ಕುರಿತು ಲೀಡ್ ಬ್ಯಾಂಕ್ ವ್ಯವಸ್ಥಾಪಕರು ಶ್ರೀಮತಿ ಕವಿತಾ ಎನ್ ಶೆಟ್ಟಿ ಮಾಹಿತಿ ನೀಡಿ ಅಕ್ಟೋಬರ್ ಹಾಗೂ ನವೆಂಬರ್ ತಿಂಗಳಲ್ಲಿ ಈ ಅಭಿಯಾನದ ಭಾಗವಾಗಿ ಒಟ್ಟು 359 ಖಾತೆಗಳನ್ನು ಕ್ಲೇಮ್ ಮಾಡಿ, ರೂ. 1.50 ಕೋಟಿ ಹಣವನ್ನು ಸಂಬಂಧಿಸಿದ ಮಾಲೀಕರು/ವಾರಸುದಾರರಿಗೆ ಹಸ್ತಾಂತರಿಸಲಾಗಿದೆ ಎಂದು ತಿಳಿಸಿದರು.

ಹಣಕಾಸು ಸಚಿವಾಲಯದ ಮಾರ್ಗಸೂಚಿಯಂತೆ, ದೇಶಾದ್ಯಂತ ಈ ‘ನಿಮ್ಮ ಹಣ ನಿಮ್ಮ ಹಕ್ಕು’ ವಿಶೇಷ ಅಭಿಯಾನವು ಬ್ಯಾಂಕಿಂಗ್, ವಿಮೆ ಹಾಗೂ ಸಂಬಂಧಿತ ವಲಯದ ಎಲ್ಲಾ ಶಾಖೆಗಳಲ್ಲಿ 31 ಡಿಸೆಂಬರ್ 2025 ರವರೆಗೆ ಮುಂದುವರಿಯಲಿದೆ. ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ಎಲ್ಐಸಿ ಪ್ರತಿನಿಧಿಗಳು, ಹಾಗೂ ಜಿಲ್ಲಾ ಬ್ಯಾಂಕ್ ಸಂಯೋಜಕರು ಪಾಲ್ಗೊಂಡಿದ್ದರು.

Related posts

ಲಾಯಿಲ: ಕುಂಟಿನಿ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಉಜಿರೆ ಶ್ರೀ ವನದುರ್ಗಾ, ಶ್ರೀ ನಾಗ ರಕ್ತೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ಅಯೋಧ್ಯೆ ಸಂಭ್ರಮಾಚರಣೆ ಕ್ಷೇತ್ರದ ದೇವರಿಗೆ ವಿಶೇಷ ಪೂಜೆ, ರಾಮನಾಮ ತಾರಕ ಮಂತ್ರ ಹೋಮ, ಭಜನೆ ಸಂಕೀರ್ಣತೆ

Suddi Udaya

ಎ.13-23: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಾರ್ಷಿಕ ವಿಷು ಜಾತ್ರೋತ್ಸವ       

Suddi Udaya

ಕರಾಯ ಸರ್ಕಾರಿ ಪ್ರೌಢಶಾಲೆಗೆ ಹಿರಿಯ ವಿದ್ಯಾರ್ಥಿಗಳಿಂದ ಕುಡಿಯುವ ನೀರಿನ ಯಂತ್ರ ಕೊಡುಗೆ

Suddi Udaya

ಹಾಟ್‌ಮಿಕ್ಸ್ ಘಟಕದ ವಿರುದ್ಧ ಪಿಐಎಲ್ ಸಲ್ಲಿಕೆ : ಹೈಕೋರ್ಟ್ ನಿಂದ ನೋಟಿಸ್ ಆದೇಶ

Suddi Udaya

ತ್ರೋಬಾಲ್ ಸ್ಪರ್ಧೆ: ಮಚ್ಚಿನ ಸರಕಾರಿ ಪ್ರೌಢಶಾಲಾ ಬಾಲಕ ಹಾಗೂ ಬಾಲಕಿಯರಿಗೆ ದ್ವಿತೀಯ ಸ್ಥಾನ

Suddi Udaya
error: Content is protected !!