25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ದಕ್ಷಿಣ ಕನ್ನಡ ಜಿಲ್ಲೆಯ ಮಾರ್ಗದರ್ಶಿ ಬ್ಯಾಂಕ್ ನಿಂದ “ನಿಮ್ಮ ಹಣ ನಿಮ್ಮ ಹಕ್ಕು” ‘ಅನ್ಕ್ಲೇಮ್ಡ್ ಡೆಪಾಸಿಟ್’ ಜಾಗೃತಿ ಅಭಿಯಾನ

ಮಂಗಳೂರು: ದೀರ್ಘಕಾಲದವರೆಗೆ ಕ್ಲೇಮ್ ಮಾಡದಿರುವ ಠೇವಣಿಗಳನ್ನು ಗುರುತಿಸಿ, ಅವುಗಳನ್ನು ಖಾತೆದಾರರಿಗೆ ಅಥವಾ ಅವರ ಕಾನೂನುಬದ್ಧ ವಾರಸುದಾರರಿಗೆ ಹಸ್ತಾಂತರಿಸುವ ಉದ್ದೇಶದಿಂದ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ‘ಅನ್ಕ್ಲೇಮ್ಡ್ ಡೆಪಾಸಿಟ್’ ಜಾಗೃತಿ ಅಭಿಯಾನ ಚಾಲನೆ ನೀಡಲಾಯಿತು.

ಅಭಿಯಾನಕ್ಕೆ ಜಿಲ್ಲಾ ಪಂಚಾಯತ್ ಉಪಕಾರ್ಯನಿರ್ವಾಹಕ ಅಧಿಕಾರಿ ಶ್ರೀಮತಿ ಜಯಲಕ್ಷ್ಮಿ ಚಾಲನೆ ನೀಡಿ ನಮ್ಮ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕ್ಲೇಮ್ ಮಾಡದೇ ಒಟ್ಟು 633960 – ಖಾತೆಗಳಲ್ಲಿ 142.79 ಕೋಟಿ ರೂಪಾಯಿ ಇದ್ದು ,ಈ ಅಭಿಯಾನದ ಪ್ರಯೋಜನವನ್ನು ಸೂಕ್ತ ವಾರಸುದಾರರು ಪಡೆಯಲು ಸಹಕಾರಿ ಎಂದು ತಿಳಿಸಿದರು.
ಅಭಿಯಾನದಲ್ಲಿ ಬ್ಯಾಂಕರರಿಗೆ ವೇಗವಾಗಿ ಕ್ಲೇಮ್ ಇತ್ಯರ್ಥ ಮಾಡುವ ವಿಧಾನ, ಅಗತ್ಯ ದಾಖಲೆಗಳು, ಹಾಗೂ ಸರ್ಕಾರದ ಮಾರ್ಗಸೂಚಿಗಳ ಕುರಿತು ಲೀಡ್ ಬ್ಯಾಂಕ್ ವ್ಯವಸ್ಥಾಪಕರು ಶ್ರೀಮತಿ ಕವಿತಾ ಎನ್ ಶೆಟ್ಟಿ ಮಾಹಿತಿ ನೀಡಿ ಅಕ್ಟೋಬರ್ ಹಾಗೂ ನವೆಂಬರ್ ತಿಂಗಳಲ್ಲಿ ಈ ಅಭಿಯಾನದ ಭಾಗವಾಗಿ ಒಟ್ಟು 359 ಖಾತೆಗಳನ್ನು ಕ್ಲೇಮ್ ಮಾಡಿ, ರೂ. 1.50 ಕೋಟಿ ಹಣವನ್ನು ಸಂಬಂಧಿಸಿದ ಮಾಲೀಕರು/ವಾರಸುದಾರರಿಗೆ ಹಸ್ತಾಂತರಿಸಲಾಗಿದೆ ಎಂದು ತಿಳಿಸಿದರು.

ಹಣಕಾಸು ಸಚಿವಾಲಯದ ಮಾರ್ಗಸೂಚಿಯಂತೆ, ದೇಶಾದ್ಯಂತ ಈ ‘ನಿಮ್ಮ ಹಣ ನಿಮ್ಮ ಹಕ್ಕು’ ವಿಶೇಷ ಅಭಿಯಾನವು ಬ್ಯಾಂಕಿಂಗ್, ವಿಮೆ ಹಾಗೂ ಸಂಬಂಧಿತ ವಲಯದ ಎಲ್ಲಾ ಶಾಖೆಗಳಲ್ಲಿ 31 ಡಿಸೆಂಬರ್ 2025 ರವರೆಗೆ ಮುಂದುವರಿಯಲಿದೆ. ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ಎಲ್ಐಸಿ ಪ್ರತಿನಿಧಿಗಳು, ಹಾಗೂ ಜಿಲ್ಲಾ ಬ್ಯಾಂಕ್ ಸಂಯೋಜಕರು ಪಾಲ್ಗೊಂಡಿದ್ದರು.

Related posts

ಓಡಿಲ್ನಾಳ ಶಾಲಾ ವಿದ್ಯಾರ್ಥಿಗಳಿಗೆ ನೆರಿಯ ಸ್ಟೇಶನ್ ಇಂಚಾರ್ಜ್ ಪೆಟ್ರೋನೆಟ್ ವತಿಯಿಂದ ಬ್ಯಾಗ್ ಹಾಗೂ ಲೇಖನಿ ಸಾಮಾಗ್ರಿ ವಿತರಣೆ

Suddi Udaya

ಮಚ್ಚಿನ: ನೆತ್ತರ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಅತ್ಯಂತ ಕುತೂಹಲ ಕೆರಳಿಸಿದ ಮಡಂತ್ಯಾರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಚುನಾವಣೆ : ಅಧ್ಯಕ್ಷರಾಗಿ ಜೋಯಲ್ ಗಾಡ್ಫಿ ಮೆಂಡೋನ್ಸಾ, ಹಾಗೂ ಉಪಾಧ್ಯಕ್ಷರಾಗಿ ಕಾಂತಪ್ಪ ಗೌಡ ಆಯ್ಕೆ

Suddi Udaya

ಪಟ್ರಮೆ ಶಾಲೆಯಲ್ಲಿ ಯಕ್ಷ ಶಿಕ್ಷಣ ನಾಟ್ಯ ತರಬೇತಿ ಪ್ರಾರಂಭ

Suddi Udaya

ಒಕಿನಾವನ್ ಶೋಟೋಕಾನ್ ಕರಾಟೆ ಚಾಂಪಿಯನ್‌ಶಿಪ್ : ಬೆಳ್ತಂಗಡಿಯ ಅವಳಿ ಮಕ್ಕಳು ವಿಜೇತರು

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಕ್ರೀಡಾ ದಿನದ ಮಹತ್ವದ ಕುರಿತು ಕಾರ್ಯಕ್ರಮ

Suddi Udaya
error: Content is protected !!