22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ದ.ಕ ಜಿಲ್ಲಾ ಮಟ್ಟದ ಅಖಿಲ ಭಾರತ ಸಹಕಾರ ಸಪ್ತಾಹ ಅಂಗವಾಗಿ ಸ್ವಚ್ಚತಾ ಆಂದೋಲನ

ಧರ್ಮಸ್ಥಳ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಧರ್ಮಸ್ಥಳ ಇದರ ನೇತೃತ್ವದಲ್ಲಿ ದ.ಕ ಜಿಲ್ಲಾ ಮಟ್ಟದ ಅಖಿಲ ಭಾರತ ಸಹಕಾರ ಸಪ್ತಾಹ ಅಂಗವಾಗಿ, ಸಹಕಾರ ಸಂಸ್ಥೆಗಳ ಅಭಿವೃದ್ಧಿಯ ಬಲವರ್ಧನೆ ಎಂಬ ತತ್ವದೊಂದಿಗೆ ಧರ್ಮಸ್ಥಳ ಹಾಗೂ ಪುದುವೆಟ್ಟಿನ ಎಲ್ಲಾ ಬೂತ್ ಮಟ್ಟದಲ್ಲಿ ಸಹಕಾರಿ ಸಪ್ತಾಹ ಸ್ವಚ್ಛತಾ ಆಂದೋಲನ ಸಹಕಾರಿಗಳ ಸಹಕಾರದೊಂದಿಗೆ ನಡೆಯಿತು.

ಕಾರ್ಯಕ್ರಮವನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಉದ್ಘಾಟಿಸಿ ಧರ್ಮಸ್ಥಳ ಸೊಸೈಟಿ ಹಲವಾರು ಸತ್ ಚಿಂತನೆಯಿರುವ ಕಾರ್ಯಕ್ರಮಗಳನ್ನು ಆಯೋಜಿಸಿ ಇತರ ಸಂಘ ಸಂಸ್ಥೆಗಳಿಗೆ ಮಾದರಿಯಾಗಿದೆ. ಸ್ವಚ್ಚ ದೇಶ, ಸ್ಚಚ್ವ ಪರಿಸರ ಪರಿಕಲ್ಪನೆಯೊಂದಿಗೆ ಇಂದು ಹತ್ತಾರು ಕಿ.ಮೀ ರಸ್ತೆ ಬದಿಯನ್ನು ಸ್ವಚ್ಚ ಮಾಡುವ ಕೆಲಸ ಶ್ಲಾಘನೀಯವಾದುದು ಎಂದರು.

ಈ ಸಂದರ್ಭದಲ್ಲಿ ಧರ್ಮಸ್ಥಳ ಸೊಸೈಟಿ ಅಧ್ಯಕ್ಷ ಪ್ರೀತಮ್ ಡಿ, ಉಪಾಧ್ಯಕ್ಷ ಅಜಿತ್ ಕುಮಾರ್, ಸಿಇಓ ಶಶಿಧರ, ಪುದುವೆಟ್ಟು ಗ್ರಾ.ಪಂ ಅಧ್ಯಕ್ಷ ಪೂರ್ಣೇಶ್, ಧರ್ಮಸ್ಥಳ ಪಂಚಾಯತ್ ಉಪಾಧ್ಯಕ್ಷ ಶ್ರೀನಿವಾಸ್ ರಾವ್, ಸೊಸೈಟಿ ನಿರ್ದೇಶಕರಾದ ಶಾಂಭವಿ ರೈ,ಉಮಾನಾಥ, ಶೀನ, ಧನಲಕ್ಷ್ಮಿ ಜನಾರ್ಧನ್, ಪ್ರಭಾಕರ ಗೌಡ ಬೊಳ್ಮ, ನೀಲಾಧರ ಶೆಟ್ಟಿ, ಪ್ರಸನ್ನ ಹೆಬ್ಬಾರ್, ಚಂದ್ರಶೇಖರ, ವಿಕ್ರಂ ಗೌಡ, ತಂಗಚ್ಚನ್ ಹಾಗೂ ಸೊಸೈಟಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಹಲವಾರು ಸಹಕಾರಿ ಬಂಧುಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಸ್ವಚ್ಛತೆಯಲ್ಲಿ ಪಾಲ್ಗೊಂಡರು.ಇದರ ಜೊತೆಗೆ ಧರ್ಮಸ್ಥಳ ಹಾಗೂ ಪುದುವೆಟ್ಟಿನ ಹಲವು ರಸ್ತೆ ಬದಿಯ ಹುಲ್ಲು ತೆಗೆಯುವ ಕೆಲಸಕ್ಕೆ ಚಾಲನೆ ನೀಡಲಾಯಿತು.

Related posts

ಗೇರುಕಟ್ಟೆ: ಕೊರಂಜ ಸ.ಉ.ಪ್ರಾ. ಶಾಲೆಯ ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆ

Suddi Udaya

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೆಯರ್ ವಿತರಣೆ

Suddi Udaya

ಉಜಿರೆಯಲ್ಲಿ ಅಜಾಗರೂಕತೆಯಿಂದ ಕಾರು ಚಾಲನೆ; ಸ್ಕೂಟರ್ ಗೆ ಡಿಕ್ಕಿ, ಯುವತಿಗೆ ಗಾಯ, ಆಸ್ಪತ್ರೆಗೆ ದಾಖಲು

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಯವರಿಗೆ ರಾಜ್ಯಪಾಲರಿಂದ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಪ್ರಶಸ್ತಿ ಪ್ರದಾನ

Suddi Udaya

ನಕಲಿ ಚಿನ್ನದ ಹಾವಳಿ ತಡೆಗೆ ಶಾಸಕರಿಗೆ ಮನವಿ

Suddi Udaya

ಪ್ರಯಾಗ್ ರಾಜ್‌ ಮಹಾಕುಂಭ ಮೇಳದಲ್ಲಿ ಪವಿತ್ರ ಸ್ನಾನಗೈದ ಶಾಸಕ ಹರೀಶ್ ಪೂಂಜ ಹಾಗೂ ಉದ್ಯಮಿ ಶಶಿಧರ ಶೆಟ್ಟಿ

Suddi Udaya
error: Content is protected !!