24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಿಡ್ಲೆ ಪ್ರಾ.ಕೃ.ಪ. ಸ.ಸಂಘದಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಸಹಕಾರ ಸಪ್ತಾಹ ಆಚರಣೆ ಮತ್ತು ಕೊಬ್ಬರಿ ಎಣ್ಣೆಗಿರಣಿ ಉದ್ಘಾಟನೆ

ನಿಡ್ಲೆ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಇದರ ಸಹಕಾರ, ಮಾರ್ಗದರ್ಶನದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಡ್ಲೆ 72ನೇ ಅಖಿಲ ಭಾರತ ಸಹಕಾರ ಸಪ್ತಾಹ -2025 ಇದರ ಅಂಗವಾಗಿ ಸಹಕಾರ ಸಪ್ತಾಹ ಆಚರಣೆ ಮತ್ತು ಕೊಬ್ಬರಿ ಎಣ್ಣೆಗಿರಣಿ ಉದ್ಘಾಟನೆಯು ನ. 17 ರಂದು ನಡೆಯಿತು.

ಶಾಖೆಯ ಹತ್ತನೇ ವರ್ಷದ ಸವಿನೆನಪಿಗಾಗಿ ನಿಡ್ಲೆ ಕೇಂದ್ರ ಕಛೇರಿಯಲ್ಲಿ ಧ್ವಜಾರೋಹಣ ಮಾಡುವ ಮೂಲಕ ನೆರವೇರಿಸಲಾಯಿತು.

ಕೊಬ್ಬರಿ ಎಣ್ಣೆ ಗಿರಣಿಯನ್ನು ಶಾಸಕ ಹರೀಶ್ ಪೂಂಜ ನೆರವೇರಿಸಿ ಶುಭಹಾರೈಸಿದರು.

ಕಳೆಂಜ ಶಾಖೆಯ ಆವರಣದಲ್ಲಿ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿಡ್ಲೆ ಪ್ರಾ. ಕೃ. ಪ. ಸ ಸಂಘ ಅಧ್ಯಕ್ಷ ಧನಂಜಯ ಗೌಡ ವಹಿಸಿದರು.

ಮುಖ್ಯ ಅತಿಥಿಯಾಗಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ, ನಿಡ್ಲೆ ಪ್ರಾ.ಕೃ.ಪ.ಸ.ಸಂಘ ಉಪಾಧ್ಯಕ್ಷ ಡೀಕಯ್ಯ ಎಮ್.ಕೆ., ಕಳೆಂಜ ಗ್ರಾ.ಪಂ ಉಪಾಧ್ಯಕ್ಷ ವಿಶ್ವನಾಥ ಗೌಡ ಹೆಚ್., ನಿಡ್ಲೆ ಗ್ರಾ.ಪಂ. ಉಪಾಧ್ಯಕ್ಷ ರುಕ್ಮಯ್ಯ ಪೂಜಾರಿ, ಶಾಲೆತ್ತಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಹರೀಶ್ ರಾವ್, ಬರೆಂಗಾಯ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಸುಂದರ ಕಜೆ, ಕಾಯರ್ತಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಹಾಗೂ ಸಹಕಾರಿ ಸಂಘದ ನಿರ್ದೇಶಕ ವಿಜಯ ಕುಮಾರ್ ಹೆಚ್, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರತಿನಿಧಿ ಸಿರಾಜುದ್ದೀನ್ ಉಪಸ್ಥಿತರಿದ್ದರು.

ಈ ವೇಳೆ ವೈದ್ಯರಾದ ಟಿವಿ ಜೋಸೆಫ್, ಟಿ.ಎಸ್ ನಿತ್ಯಾನಂದ ರೈ ಕಳೆಂಜ, ಕ್ರಿಶ್ಚಿನ್ ಬ್ರದರ್ಸ್ ಕಳೆಂಜ ಅಧ್ಯಕ್ಷ ಆಗಸ್ಟಿನ್, ಬರೆಂಗಾಯ ಯುವಜನೇತರ ಯುವಕ ಮಂಡಲದ ಅಧ್ಯಕ್ಷ ಪುನೀತ್ ಪೊಂರ್ದಿಲ, ಶಾಸಕ ಹರೀಶ್ ಪೂಂಜ ಹಾಗೂ ಡಿಸಿಸಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ ಇವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಪದ್ಮನಾಭ ಪಿ., ನಿರ್ದೇಶಕರಾದ ವಿಜಯಕುಮಾರ್ ಹೆಚ್, ಆನಂದ ಗೌಡ, ಹೇಮಂತ ಗೌಡ ಕೆ., ಜಯರಾಮ ಪಾಳಂದೆ ಎಸ್, ಧನಂಜಯ ಬಿ. , ರಾಜು, ಮೋಹನ ಪೂಜಾರಿ, ಹಾಗೂ ಸಿಬ್ಬಂದಿ ವರ್ಗ ಮತ್ತು ಸದಸ್ಯರು, ನಿಡ್ಲೆ ಗ್ರಾ.ಪಂ. ಅಧ್ಯಕ್ಷೆ ಶ್ಯಾಮಲ, ನಿಡ್ಲೆ ಹಾಗೂ ಕಳೆಂಜ ಗ್ರಾ.ಪಂ ಸದಸ್ಯರು ಉಪಸ್ಥಿತರಿದ್ದರು.

ನಿಡ್ಲೆ ಪ್ರಾ. ಕೃ. ಪ. ಸ ಸಂಘ ಅಧ್ಯಕ್ಷ ಧನಂಜಯ ಗೌಡ ಪ್ರಸ್ತಾವಿಕ ಮಾತನಾಡಿದರು. ಲೆಕ್ಕಿಗ ವೇಣುಗೋಪಾಲ್ ಹಾಗೂ ಕಳೆಂಜ ಶಾಖಾ ವ್ಯವಸ್ಥಾಪಕ ಕೃಷ್ಣ ಪ್ರಸಾದ್ ಸನ್ಮಾನಿತರ ಪರಿಚಯ ನೀಡಿದರು.

ನಿರ್ದೇಶಕಿ ಗಾಯತ್ರಿ ಹೆಚ್ ಗೌಡ ಪ್ರಾರ್ಥಿಸಿದರು, ನಿರ್ದೇಶಕ ರಮೇಶ್ ರಾವ್ ಸ್ವಾಗತಿಸಿದರು. ಸಿಬ್ಬಂದಿ ಯೋಗೀಶ್ವರಿ ಕಾರ್ಯಕ್ರಮ ನಿರೂಪಿಸಿದರು. ನಿರ್ದೇಶಕಿ ವಿಜಯಲಕ್ಷ್ಮೀ ಕೆ. ಧನ್ಯವಾದವಿತ್ತರು.

Related posts

ಗುರುವಾಯನಕೆರೆ: ಎಕ್ಸೆಲ್ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಂದ ಶುಚಿತ್ವ ಅಭಿಯಾನ

Suddi Udaya

ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ಗೆ ಶಾಲಾ ಶಿಕ್ಷಣ ಇಲಾಖೆಯಿಂದ ಮಾನ್ಯತೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ದ.ಕ. ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ ನೂತನ ಪದಾಧಿಕಾರಿಗಳ ಪದಪ್ರಧಾನ ಕಾರ್ಯಕ್ರಮ

Suddi Udaya

ಬಿಜೆಪಿಯ ಬೆಂಬಲಿತ ಅಭ್ಯರ್ಥಿಯಾಗಿಯೇ ದಕ್ಷಿಣ ಕನ್ನಡ ಹಾಲು ಒಕ್ಕೂಟದ ನಿರ್ದೇಶಕನಾಗಿ ಆಯ್ಕೆಯಾಗಿರುವೆ : ಪ್ರಭಾಕರ್ ಎಚ್.

Suddi Udaya

ಭಾರತೀಯ ಜನತಾ ಪಾರ್ಟಿ ಯುವಮೋರ್ಚಾ ಬೆಳ್ತಂಗಡಿ ಮಂಡಲವತಿಯಿಂದ ಬೃಹತ್ ಪ್ರತಿಭಟನೆ

Suddi Udaya

ಶಾಸಕ ಹರೀಶ್ ಪೂಂಜರಿಂದ ಮ್ಯಾರಥನ್ ಜನಸ್ಪಂದನ ಸಭೆ

Suddi Udaya
error: Content is protected !!