July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಪ್ರಕರಣ ಹಾಗೂ ಬಂದೂಕು ಪತ್ತೆ ಪ್ರಕರಣ : ಇಂದು ಹೈಕೋರ್ಟ್ ನಲ್ಲಿ ವಿಚಾರಣೆ

ಬೆಳ್ತಂಗಡಿ: ಎಸ್ಐಟಿ ದಾಳಿ ವೇಳೆ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಒಂದು ಅಕ್ರಮ ಬಂದೂಕು ಮತ್ತು ಎರಡು ತಲವಾರು ಪತ್ತೆಯಾದ ಪ್ರಕರಣ ಸಂಬಂಧ ಹೈಕೋರ್ಟ್ ನಲ್ಲಿ ಪ್ರಕರಣಕ್ಕೆ ಮಧ್ಯಂತರ ತಡೆ ಕೋರಿ ಸಲ್ಲಿಸಿದ ಅರ್ಜಿ ವಿಚಾರಣೆ ನ.17 ರಂದು(ಇಂದು) ನಡೆಯಲಿದೆ.

ಬುರುಡೆ ಪ್ರಕರಣ ಸಂಬಂಧ ಆರೋಪಿ ಚಿನ್ನಯ್ಯನಿಗೆ ಆಶ್ರಯ ನೀಡಿದ ಪ್ರಕರಣದಲ್ಲಿ ಎಸ್.ಐ.ಟಿ ಅಧಿಕಾರಿಗಳು ಕೋರ್ಟ್ ಅನುಮತಿ ಪಡೆದು ತಿಮರೋಡಿ ಮಹೇಶ್ ಶೆಟ್ಟಿ ಮನೆಗೆ ದಾಳಿ ಮಾಡಿದಾಗ ಒಂದು ಬಂದೂಕು ಮತ್ತು ಎರಡು ತಲವಾರು ಪತ್ತೆಯಾಗಿತ್ತು. ಈ ಸಂಬಂಧ ಪ್ರಕರಣದಲ್ಲಿ ಜಿಲ್ಲಾ ಕೋರ್ಟ್ ಅರ್ಜಿ ವಜಾ ಮಾಡಿತ್ತು. ಬಳಿಕ ಹೈ ಕೋರ್ಟ್ ನಲ್ಲಿ ಮಧ್ಯಂತರ ತಡೆ ಕೋರಿ ಅರ್ಜಿ ಸಲ್ಲಿಸಿದ್ದರು‌. ಈ ಅರ್ಜಿಗೆ ಮುಂದಿನ ವಿಚಾರಣೆವರೆಗೆ ಮಧ್ಯಂತರ ತಡೆ ನೀಡಿತ್ತು.

ಒಂದು ವರ್ಷಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಪುತ್ತೂರು ಎ.ಸಿ.ಸ್ಟೆಲ್ಲಾ ವರ್ಗಿಸ್ ಸೆ.18 ರಂದು (18-09-2025 ರಿಂದ 17-09-2026 ರವೆಗೆ) ಗಡಿಪಾರು ಮಾಡಿ ಆದೇಶ ಹೊರಡಿಸಿದ್ದರು.
ಈ ಆದೇಶದ ವಿರುದ್ಧ ತಿಮರೋಡಿ ವಕೀಲರ ಮೂಲಕ ದಕ್ಷಿಣ ಕನ್ನಡ ಜಿಲ್ಲಾ ಕೋರ್ಟ್ ಗೆ ಮೊರೆ ಹೋಗಿದ್ದರು. ಆದರೆ ಅ.9 ರಂದು ಜಿಲ್ಲಾ ಕೋರ್ಟ್ ನಲ್ಲಿ ಅರ್ಜಿ ವಜಾಗೊಳಿಸಿತ್ತು. ಇದರ ಬೆನ್ನಲ್ಲೇ ಹೈಕೋರ್ಟ್ ನಲ್ಲಿ ಸೆ.29 ರಂದು ಗಡಿಪಾರು ರದ್ದು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ಅ.13 ರಂದು ವಿಚಾರಣೆ ನಡೆಸಿ ತಿಮರೋಡಿ ಮೇಲೆ ಮುಂದಿನ ಆದೇಶದವರೆಗೆ ಬಲವಂತದ ಕ್ರಮ ಬೇಡ ಎಂದು ಸೂಚನೆ ನೀಡಿ ಗಡಿಪಾರು ಪ್ರಕರಣದ ಆದೇಶವನ್ನು ಕಾಯ್ದಿರಿಸಿತ್ತು.

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಪ್ರಕರಣದ ಆದೇಶದ ಭವಿಷ್ಯ ನ.17 ರಂದು(ಇಂದು) ಹೈ ಕೋರ್ಟ್ ನಲ್ಲಿ ಹೊರಬೀಳಲಿದೆ.

Related posts

ಕೊಕ್ಕಡ ನಿವಾಸಿ ರೇಖಾ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಸೈಂಟ್ ಫ್ರಾನ್ಸಿಸ್ ಆಂ.ಮಾ. ಶಾಲೆಗೆ ಶೇ.100 ಫಲಿತಾಂಶ

Suddi Udaya

ಕಡಿರುದ್ಯಾವರ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಓಮ್ನಿ ಕಾರು

Suddi Udaya

ಹತ್ಯಡ್ಕ: ನೆಕ್ಕರಡ್ಕ ನಿವಾಸಿ ಅನಸೂಯ ನಿಧನ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಲ್ಯಾಪ್ರೋಸ್ಕೋಪಿಕ್ ಹಿಸ್ಟರೆಕ್ಟಮಿ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನದಿಂದ ಬಳಂಜ-ಡೆಂಜೋಲಿ- ಗರ್ಡಾಡಿ ರಸ್ತೆ ಅಭಿವೃದ್ಧಿಗೆ ರೂ. 2 ಕೋಟಿ ಅನುದಾನ ಬಿಡುಗಡೆ: ಜನರ ಬಹುದಿನದ ಬೇಡಿಕೆ ಈಡೇರಿಸಿದ ಶಾಸಕ ಹರೀಶ್ ಪೂಂಜರವರಿಗೆ ಸಾರ್ವಜನಿಕರಿಂದ ಮೆಚ್ಚುಗೆ

Suddi Udaya
error: Content is protected !!