ಗ್ರಾಮಾಂತರ ಸುದ್ದಿಚಿತ್ರ ವರದಿ

ಹೊರ ರಾಜ್ಯ ಹಾಗೂ ಅಂತರ್ ಜಿಲ್ಲೆಗಳಲ್ಲಿ ಸುಮಾರು 40 ಕ್ಕೂ ಅಧಿಕ ಕಳವು ಪ್ರಕರಣದ ಕುಖ್ಯಾತ ಆರೋಪಿ “ಇತ್ತೆ ಬರ್ಪೆ ಅಬುಬಕ್ಕರ್” ಬಂಧನ: ಆರೋಪಿತನಿಂದ ರೂ 5‌.65 ಲಕ್ಷ ಮೌಲ್ಯದ 56.850 ಗ್ರಾಂ ತೂಕದ ಚಿನ್ನಾಭರಣಗಳು ಹಾಗೂ ದ್ವಿಚಕ್ರ ವಾಹನ ವಶ

ಬೆಳ್ತಂಗಡಿ: ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಕುತ್ತೂರು ಎಂಬಲ್ಲಿ ದಿನಾಂಕ ಅ.2 ರಿಂದ ಅ. 6ರ ಮಧ್ಯದ ಅವಧಿಯಲ್ಲಿ ಬೀಗ ಹಾಕಿದ್ದ ಮನೆಯೊಂದರಲ್ಲಿ ನಡೆದ ಸುಮಾರು 149 ಗ್ರಾಂ ತೂಕದ ಒಟ್ಟು 9,50,000/- ರೂ. ಮೌಲ್ಯದ ಚಿನ್ನಾಭರಣಗಳ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ, ವೇಣೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ 85/2025 ಕಲಂ 331(1), 331(4), 305 ಬಿ.ಎನ್. ಎಸ್. 2023 ರಂತೆ ಪ್ರಕರಣ ದಾಖಲಾಗಿರುತ್ತು.

ಪ್ರಕರಣದ ತನಿಖೆ ನಡೆಸಲಾಗಿ, ಹೊರ ರಾಜ್ಯಗಳಲ್ಲಿ ಹಾಗೂ ಹಲವು ಜಿಲ್ಲೆಗಳಲ್ಲಿ ಸುಮಾರು 40 ಕ್ಕೂ ಅಧಿಕ ಕಳವು ಪ್ರಕರಣದ ಕುಖ್ಯಾತ ಆರೋಪಿತ, ಮಂಗಳೂರು, ಜೋಕಟ್ಟೆ ನಿವಾಸಿ ಅಬುಬಕ್ಕರ್ @ ಅಬ್ದುಲ್ ಖಾದರ್ @ ಇತ್ತೆ ಬರ್ಪೆ ಅಬುಬಕ್ಕರ್ (70) ಎಂಬಾತನನ್ನು ದಸ್ತಗಿರಿ ಮಾಡಿ, ಆರೋಪಿತನಿಂದ ಸುಮಾರು 5,65,000 ರೂ. ಬೆಲೆಬಾಳುವ ಒಟ್ಟು 56.850 ಗ್ರಾಂ ತೂಕದ ಚಿನ್ನಾಭರಣಗಳನ್ನು ಹಾಗೂ ಮಂಗಳೂರು ಕೊಣಾಜೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಕಳವು ಮಾಡಿದ 60,000/-ರೂ. ಮೌಲ್ಯದ ದ್ವಿಚಕ್ರ ವಾಹನವನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದ್ದು, ಆರೋಪಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿರುತ್ತದೆ. ಸದ್ರಿ ಪ್ರಕರಣದಲ್ಲಿ ಆರೋಪಿತರ ಪತ್ತೆಕಾರ್ಯದಲ್ಲಿ, ಬೆಳ್ತಂಗಡಿ ಡಿ.ವೈ.ಎಸ್. ಪಿ. ಶ್ರೀಮತಿ ರೋಹಿಣಿ ಸಿ.ಕೆ. ರವರ ಮಾರ್ಗದರ್ಶನದಂತೆ, ಬೆಳ್ತಂಗಡಿ ವೃತ್ತ ನಿರೀಕ್ಷಕರಾದ ಬಿ.ಜಿ. ಸುಬ್ಬಾಪೂರ ಮಠ ರವರ ತಂಡ, ವೇಣೂರು ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರಾದ ಅಕ್ಷಯ್ ಡವಗಿ, ಶ್ರೀಮತಿ ಓಮನ ಎನ್. ಹಾಗೂ ಎ.ಎಸ್. ಐ. ಗಳಾದ ವೆಂಕಟೇಶ್ ನಾಯ್ಕ, ಬೆನ್ನಿಚ್ಚನ್, ಹಚ್.ಸಿ. ಕೃಷ್ಣ, ಧರ್ಮಸ್ಥಳ ಠಾಣಾ ಹಚ್.ಸಿ. ಪ್ರಶಾಂತ್, ಪಿ.ಸಿ. ಚರಣ್, ವೇಣೂರು ಪೊಲೀಸ್ ಠಾಣಾ ಪಿ.ಸಿ. ಬಸವರಾಜ್, ಪಿ.ಸಿ. ಮೋಹನ್, ಮಪಿಸಿ. ಶ್ರೀಮತಿ ಜಯಶ್ರೀ ಪೂಂಜಾಲಕಟ್ಟೆ ಪೊಲೀಸ್ ಠಾಣಾ ಪಿ.ಸಿ. ರಜಿತ್ ಮಂಗಳೂರು ಜಿಲ್ಲಾ ಗಣಕ ಯಂತ್ರದ ಸಿಬ್ಬಂದಿಗಳಾದ ಸಂಪತ್ ಮತ್ತು ದಿವಾಕರ ರವರುಗಳನ್ನು ಒಳಗೊಂಡ ತಂಡ ಕರ್ತವ್ಯ ನಿರ್ವಹಿಸಿರುತ್ತದೆ.

Related posts

ಅಳದಂಗಡಿಯಲ್ಲಿ ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆ: ಗ್ರಾ.ಪಂ ಅಧಿಕಾರಿಗಳು ಭೇಟಿ ನೀಡಿ ಮೂಲ ಸೌಕರ್ಯ ಒದಗಿಸುವ ಭರವಸೆ : ” ಸುದ್ದಿ ಉದಯ” ಸ್ಪೆಷಲ್ ರಿಪೋರ್ಟ್ ಇಫೇಕ್ಟ್

Suddi Udaya

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆ ಮತ್ತು ಸ್ವಚ್ಛತಾ ಶ್ರಮದಾನ

Suddi Udaya

ಗ್ರಾಮಸ್ಥರ ಮನೆಗಳ ಶುಚಿತ್ವಕ್ಕೆ ಕಂಟಕವಾದ ಸ್ಥಳೀಯ ಕೋಳಿಸಾಕಾಣಿಕೆ: ಅಗತ್ಯ ಕ್ರಮಕ್ಕೆ ಸ್ಥಳೀಯರ ಒತ್ತಾಯ

Suddi Udaya

ಕಳೆಂಜ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Suddi Udaya

ಎಸ್.ಡಿ.ಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ : ಅಂತರ್ ಕಾಲೇಜು ಮತ್ತು ರಾಜ್ಯ ಮಟ್ಟದ ತ್ರೋಬಾಲ್ ಪಂದ್ಯಾಟಕ್ಕೆ ಚಾಲನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ತಂದೆಯಂದಿರ ದಿನಾಚರಣೆ

Suddi Udaya
error: Content is protected !!