ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

8ನೇ ರಾಷ್ಟ್ರೀಯ ಪ್ರಾಕೃತಿಕ ಚಿಕಿತ್ಸೆ ದಿನದ ಪ್ರಯುಕ್ತ ಎಸ್.ಡಿ.ಎಂ. ನ್ಯಾಚುರೋಪತಿ ಕಾಲೇಜಿನಿಂದ ಪ್ರಾಕೃತಿಕ ಚಿಕಿತ್ಸೆ ಜಾಗೃತಿ ಮತ್ತು ಆರೋಗ್ಯ ಶಿಬಿರ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ನೈಸರ್ಗಿಕ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯ ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ 8ನೇ ರಾಷ್ಟ್ರೀಯ ಪ್ರಾಕೃತಿಕ ಚಿಕಿತ್ಸೆ ದಿನದ ಪ್ರಯುಕ್ತ ಬೆಳ್ತಂಗಡಿ ತಾಲೂಕಿನ ವಿವಿಧೆಡೆ ಪ್ರಾಕೃತಿಕ ಚಿಕಿತ್ಸೆ ಜಾಗೃತಿ ಮತ್ತು ಆರೋಗ್ಯ ಶಿಬಿರ ಕಾರ್ಯ ಕ್ರಮವನ್ನು ಹಮ್ಮಿಕೊಂಡಿತು.

ಸವಣಾಲು ಅಂಗನವಾಡಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜನರಿಗೆ ನೈಸರ್ಗಿಕ ಚಿಕಿತ್ಸೆಯ ಮಹತ್ವವನ್ನು ವಿವರಿಸಿ, ಅದರ ವಿವಿಧ ವಿಧಗಳು ಹಾಗೂ ಅದರ ಪ್ರಯೋಜನಗಳ ಬಗ್ಗೆ ತಿಳಿಸಲಾಯಿತು. ಶಿಬಿರದ ಪ್ರಯುಕ್ತ ರಕ್ತದೊತ್ತಡವನ್ನು ಪರೀಕ್ಷಿಸಲಾಯಿತು.

ವೇಣೂರು ಪೊಲೀಸ್ ಠಾಣೆಯಲ್ಲಿ ನೈಸರ್ಗಿಕ ಚಿಕಿತ್ಸಾ ಜಾಗೃತಿ ಮತ್ತು ಚಿಕಿತ್ಸಾ ಶಿಬಿರವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ನೈಸರ್ಗಿಕ ಚಿಕಿತ್ಸೆ ದೇಹದಲ್ಲಿ ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬ ಕುರಿತು ತಿಳಿಸಲಾಯಿತು.

ಮನೆಯಲ್ಲಿ ಅನುಸರಿಸಬಹುದಾದ ಸರಳ ಮನೆಮದ್ದುಗಳು ಹಾಗೂ ಸಾಮಾನ್ಯ ಕಾಯಿಲೆಗಳಿಗೆ ನೈಸರ್ಗಿಕ ಚಿಕಿತ್ಸೆ ವಿಧಾನಗಳು ಹೇಗೆ ಅಗತ್ಯ ಬೀಳುವುದು ಎಂಬುದರ ಕುರಿತು ಪ್ರದರ್ಶನ ಹಾಗೂ ಚರ್ಚೆ ನಡೆಯಿತು. ಜತೆಗೆ ಹೈಡ್ರೋಥೆರಪಿ, ಮಡ್ ಥೆರಪಿ, ಡಯಟ್ ಥೆರಪಿ ಮತ್ತು ಯೋಗ ಕ್ರಮಗಳು ಸೇರಿದಂತೆ ನೈಸರ್ಗಿಕ ಚಿಕಿತ್ಸೆಯ ವಿವಿಧ ಅಂಶಗಳನ್ನು ಪರಿಚಯಿಸಲಾಯಿತು. ಪೊಲೀಸ್ ಅಧಿಕಾರಿಗಳು ಮತ್ತು ಸಿಬಂದಿ ಸೇರಿ ಹೆಚ್ಚಿನ ಮಂದಿ ಭಾಗವಹಿಸಿದ್ದರು.

ಉಳಿದಂತೆ ಬೆಳ್ತಂಗಡಿ ಕುತ್ಯಾರು ದೇವಸ್ಥಾನ, ಲಾಯಿಲ ಪುತ್ರಬೈಲು ಸಮಾಜಮಂದಿರದಲ್ಲಿ, ಗುರುವಾಯನಕೆರೆ ಶಕ್ತಿನಗರ, ಗೇರುಕಟ್ಟೆ, ಮುಗುಳಿ ವಸತಿ ಶಾಲೆಗಳಲ್ಲಿ ಶಿಬಿರ ನಡೆಸಲಾಯಿತು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ನೈಸರ್ಗಿಕ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯದ ಡಾ.ಭಾಷಿಣಿ ನೇತೃತ್ವದಲಿ ವೈಷ್ಣವಿ, ನಿಶಿತಾ ಮತ್ತು ಮೇಘಶ್ರೀ ಶಿಬಿರ ನಡೆಸಿಕೊಟ್ಟರು.

ಕಾಲೇಜಿನಿಂದ ನ.18 ರವರೆಗೆ ರಾಜ್ಯದ 234 ತಾಲೂಕಗಳಲ್ಲಿ ಶಿಬಿರವನ್ನು ಆಯೋಜಿಸಿದೆ.

Related posts

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಶಾಸಕ ಹರೀಶ್ ಪೂಂಜರ ಹುಟ್ಟು ಹಬ್ಬದ ಪ್ರಯುಕ್ತ ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ: ತಡೆ ನೀಡಲು ನಿರಾಕರಿಸಿದ ಹೈಕೋರ್ಟ್

Suddi Udaya

ಗೇರುಕಟ್ಟೆ: ಎ.ಪಿ.ಉಸ್ತಾದ್ ರಿಂದ ಪರಪ್ಪು ಜಮಾಅತ್ ನ ಗೌರವಾಧ್ಯಕ್ಷರಾಗಿ ಕಾಜೂರು ತಂಙಳ್, ಅಧ್ಯಕ್ಷರಾಗಿ ಜಿ.ಡಿ.ಅಶ್ರಫ್ ಆಯ್ಕೆ

Suddi Udaya

ವಾಣಿ ಕಾಲೇಜಿನಲ್ಲಿ ಚುನಾವಣಾ ಸಾಕ್ಷರತಾ ಸಂಘದಿಂದ ‘ಮಾಕ್ ಪಾರ್ಲಿಮೆಂಟ್’ ಕಾರ್ಯಕ್ರಮ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಮತದಾನ ಜಾಗೃತಿ ಕಾರ್ಯಾಗಾರ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಅಕ್ಷರೋತ್ಸವ: ನಾಡು – ನುಡಿಯ ರಾಷ್ಟ್ರೀಯ ಸಮ್ಮೇಳನ ಉದ್ಘಾಟನೆ

Suddi Udaya
error: Content is protected !!