ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

8ನೇ ರಾಷ್ಟ್ರೀಯ ಪ್ರಾಕೃತಿಕ ಚಿಕಿತ್ಸೆ ದಿನದ ಪ್ರಯುಕ್ತ ಎಸ್.ಡಿ.ಎಂ. ನ್ಯಾಚುರೋಪತಿ ಕಾಲೇಜಿನಿಂದ ಪ್ರಾಕೃತಿಕ ಚಿಕಿತ್ಸೆ ಜಾಗೃತಿ ಮತ್ತು ಆರೋಗ್ಯ ಶಿಬಿರ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ನೈಸರ್ಗಿಕ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯ ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ 8ನೇ ರಾಷ್ಟ್ರೀಯ ಪ್ರಾಕೃತಿಕ ಚಿಕಿತ್ಸೆ ದಿನದ ಪ್ರಯುಕ್ತ ಬೆಳ್ತಂಗಡಿ ತಾಲೂಕಿನ ವಿವಿಧೆಡೆ ಪ್ರಾಕೃತಿಕ ಚಿಕಿತ್ಸೆ ಜಾಗೃತಿ ಮತ್ತು ಆರೋಗ್ಯ ಶಿಬಿರ ಕಾರ್ಯ ಕ್ರಮವನ್ನು ಹಮ್ಮಿಕೊಂಡಿತು.

ಸವಣಾಲು ಅಂಗನವಾಡಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜನರಿಗೆ ನೈಸರ್ಗಿಕ ಚಿಕಿತ್ಸೆಯ ಮಹತ್ವವನ್ನು ವಿವರಿಸಿ, ಅದರ ವಿವಿಧ ವಿಧಗಳು ಹಾಗೂ ಅದರ ಪ್ರಯೋಜನಗಳ ಬಗ್ಗೆ ತಿಳಿಸಲಾಯಿತು. ಶಿಬಿರದ ಪ್ರಯುಕ್ತ ರಕ್ತದೊತ್ತಡವನ್ನು ಪರೀಕ್ಷಿಸಲಾಯಿತು.

ವೇಣೂರು ಪೊಲೀಸ್ ಠಾಣೆಯಲ್ಲಿ ನೈಸರ್ಗಿಕ ಚಿಕಿತ್ಸಾ ಜಾಗೃತಿ ಮತ್ತು ಚಿಕಿತ್ಸಾ ಶಿಬಿರವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ನೈಸರ್ಗಿಕ ಚಿಕಿತ್ಸೆ ದೇಹದಲ್ಲಿ ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬ ಕುರಿತು ತಿಳಿಸಲಾಯಿತು.

ಮನೆಯಲ್ಲಿ ಅನುಸರಿಸಬಹುದಾದ ಸರಳ ಮನೆಮದ್ದುಗಳು ಹಾಗೂ ಸಾಮಾನ್ಯ ಕಾಯಿಲೆಗಳಿಗೆ ನೈಸರ್ಗಿಕ ಚಿಕಿತ್ಸೆ ವಿಧಾನಗಳು ಹೇಗೆ ಅಗತ್ಯ ಬೀಳುವುದು ಎಂಬುದರ ಕುರಿತು ಪ್ರದರ್ಶನ ಹಾಗೂ ಚರ್ಚೆ ನಡೆಯಿತು. ಜತೆಗೆ ಹೈಡ್ರೋಥೆರಪಿ, ಮಡ್ ಥೆರಪಿ, ಡಯಟ್ ಥೆರಪಿ ಮತ್ತು ಯೋಗ ಕ್ರಮಗಳು ಸೇರಿದಂತೆ ನೈಸರ್ಗಿಕ ಚಿಕಿತ್ಸೆಯ ವಿವಿಧ ಅಂಶಗಳನ್ನು ಪರಿಚಯಿಸಲಾಯಿತು. ಪೊಲೀಸ್ ಅಧಿಕಾರಿಗಳು ಮತ್ತು ಸಿಬಂದಿ ಸೇರಿ ಹೆಚ್ಚಿನ ಮಂದಿ ಭಾಗವಹಿಸಿದ್ದರು.

ಉಳಿದಂತೆ ಬೆಳ್ತಂಗಡಿ ಕುತ್ಯಾರು ದೇವಸ್ಥಾನ, ಲಾಯಿಲ ಪುತ್ರಬೈಲು ಸಮಾಜಮಂದಿರದಲ್ಲಿ, ಗುರುವಾಯನಕೆರೆ ಶಕ್ತಿನಗರ, ಗೇರುಕಟ್ಟೆ, ಮುಗುಳಿ ವಸತಿ ಶಾಲೆಗಳಲ್ಲಿ ಶಿಬಿರ ನಡೆಸಲಾಯಿತು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ನೈಸರ್ಗಿಕ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯದ ಡಾ.ಭಾಷಿಣಿ ನೇತೃತ್ವದಲಿ ವೈಷ್ಣವಿ, ನಿಶಿತಾ ಮತ್ತು ಮೇಘಶ್ರೀ ಶಿಬಿರ ನಡೆಸಿಕೊಟ್ಟರು.

ಕಾಲೇಜಿನಿಂದ ನ.18 ರವರೆಗೆ ರಾಜ್ಯದ 234 ತಾಲೂಕಗಳಲ್ಲಿ ಶಿಬಿರವನ್ನು ಆಯೋಜಿಸಿದೆ.

Related posts

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಸಂಸ್ಕೃತೋತ್ಸವ ಕಾರ್ಯಕ್ರಮ

Suddi Udaya

ಆರಂಬೋಡಿ: ಪಾಣಿಮೇರುನಲ್ಲಿ ಅಕ್ರಮ ಮರಳು ಸಾಗಾಟ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತ: ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

Suddi Udaya

ಮುಂಡಾಜೆ ಪ. ಪೂ. ಕಾಲೇಜಿನಲ್ಲಿ ಪುನಶ್ಚೇತನ ಕಾರ್ಯಕ್ರಮ

Suddi Udaya

ಭಾರತೀಯ ಬಾಹ್ಯಾಕಾಶ ವಿಜ್ಞಾನ ಸಂಸ್ಥೆಯಾದ ಇಸ್ರೊ ಕೈಗೊಂಡ ಚಂದ್ರಯಾನ-3 ಯಶಸ್ವಿ: ಕೇದಾರನಾಥ ಯಾತ್ರೆ ಕೈಗೊಂಡಿದ್ದ ಬೆಳ್ತಂಗಡಿಯ ಯುವಕರು ಹರಿದ್ವಾರದಲ್ಲಿ ಸಂಭ್ರಮಾಚರಣೆ

Suddi Udaya

ಕಕ್ಕಿಂಜೆಗೆ ಮೌಲಾನಾ ಆಜಾದ್ ಮಾದರಿ ಶಾಲೆ ಮಂಜೂರು ಸಚಿವರಿಗೆ ಅಭಿನಂದನೆ

Suddi Udaya
error: Content is protected !!