July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಎಸ್‌.ಡಿ.ಎಂ. ಐಟಿ ಉಪನ್ಯಾಸಕರಿಗೆ ಪಿ.ಹೆಚ್.ಡಿ ಪದವಿ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಿಗೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಪಿ.ಹೆಚ್.ಡಿ ಪದವಿ ಪ್ರದಾನ ಮಾಡಿದೆ.

ಇಲೆಕ್ಟ್ರಾನಿಕ್ಸ್ ಅಂಡ್ ಕಮ್ಯೂನಿಕೇಶನ್ ಎಂಜಿನಿಯರಿಂಗ್ ವಿಭಾಗದ ಸಹ ಪ್ರಾಧ್ಯಾಪಕಿ ಶ್ರೀಮತಿ ಅರ್ಪಿತಾ ರವರು, ಡಾ.ಎ.ಎಲ್. ಚೂಡರತ್ನಾಕರ ರವರ ಮಾರ್ಗದರ್ಶನದಲ್ಲಿ ‘Landslide Susceptibility Mapping for Kodagu Region Using Machine Learning Techniques’ಎಂಬ ವಿಷಯದ ಕುರಿತು ಸಂಶೋಧನಾ ಪ್ರಬಂಧ ಮಂಡಿಸಿ ಪಿ.ಹೆಚ್.ಡಿ ಪದವಿ ಪಡೆದಿದ್ದಾರೆ.

ಇಲೆಕ್ಟ್ರಾನಿಕ್ಸ್ ಅಂಡ್ ಕಮ್ಯೂನಿಕೇಶನ್ ವಿಭಾಗದ ಸಹ ಪ್ರಾಧ್ಯಾಪಕ ಪ್ರವೀಣ್‌ರವರು, ಡಾ. ಯೆರ್ರಿಸ್ವಾಮಿ ಟಿ. ರವರ ಮಾರ್ಗದರ್ಶನದಲ್ಲಿ ‘Impact of Antenna Array Geometries on Direction of Arrival Estimation’’ ಎಂಬ ವಿಷಯದ ಕುರಿತು ಸಂಶೋಧನೆ ನಡೆಸಿ ಪಿ.ಹೆಚ್.ಡಿ ಪದವಿ ಪಡೆದಿದ್ದಾರೆ.


ಗಣಿತ ವಿಭಾಗದ ಸಹ ಪ್ರಾಧ್ಯಾಪಕ ನಂದೀಶ್‌ರವರು, ಡಾ. ಉಶಾ ಪಿ. ರವರ ಮಾರ್ಗದರ್ಶನದಲ್ಲಿ ‘‘Results on Labelling and Spectra of Graphs’ ಎಂಬ ವಿಷಯದ ಕುರಿತು ಸಂಶೋಧನಾ ಪ್ರಬಂಧ ಮಂಡಿಸಿ ಪಿ.ಹೆಚ್.ಡಿ ಪದವಿ ಪಡೆದಿದ್ದಾರೆ.

Related posts

ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಸದ್ಭಾವನಾ ದಿನಾಚರಣೆ

Suddi Udaya

ಪುಂಜಾಲಕಟ್ಟೆ ಸ.ಪ್ರ. ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ಉಜಿರೆಯಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ

Suddi Udaya

ಬೆಳ್ತಂಗಡಿ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ- ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಮಾಲಾಡಿ ಸ.ಹಿ.ಪ್ರಾ ಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ, ಗಿಡ ನಾಟಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ನಡಿಗುತ್ತು ನಿವಾಸಿ ಶ್ರೀಮತಿ ಪುಷ್ಪಾವತಿ ನಿಧನ

Suddi Udaya
error: Content is protected !!