25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆಯ ಶ್ರೀ ಧ.ಮ. ಕಾಲೇಜಿನಲ್ಲಿ ಆಕರ್ಷನೀಯ ವಸ್ತುಪ್ರದರ್ಶನ

ಉಜಿರೆ: ಶ್ರೀ ಧ.ಮ. ಶಿಕ್ಷಣ ಸಂಸ್ಥೆ (ರಿ), ರೋಟರಿ ಕ್ಲಬ್ ಬೆಳ್ತಂಗಡಿ ಮತ್ತು ಮಂಗಳೂರಿನ ಶಕ್ತಿ ನಗರದಲ್ಲಿರುವ ದಕ್ಷಿಣ ಕನ್ನಡ ಫಿಲೇಟೆಲಿ ಮತ್ತು ನ್ಯೂಮಿಸ್ಮ್ಯಾಟಿಕ್ ಅಸೋಸಿಯೇಷನ್ (DKPANA)ಇವರು ಜಂಟಿಯಾಗಿ ಉಜಿರೆಯ ಶ್ರೀ ಧ.ಮ. ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಏರ್ಪಡಿಸಿದ್ದ ವಸ್ತು ಪ್ರದರ್ಶನ ನಯನ ಮನೋಹರವಾಗಿತ್ತು.

ವಸ್ತು ಪ್ರದರ್ಶನದಲ್ಲಿ, ಹಳೇ ನಾಣ್ಯಗಳು, ಸ್ಟಾಂಪುಗಳು, ಅನೇಕ ಪುರಾತನ ವಸ್ತುಗಳು, ಅವುಗಳ ಜತೆಗೆ ವೀರೇಂದ್ರ ಹೆಗ್ಗಡೆಯವರ ಸಂಗ್ರಹದ ಕೆಲವು ವಸ್ತುಗಳ ಪ್ರದರ್ಶನ ನಡೆಯಿತು. ವಿದ್ಯಾರ್ಥಿಗಳಿಗೆ ಅತೀ ಉಪಯುಕ್ತ ಮಾಹಿತಿ ನೀಡಿತು.


ಶ್ರೀ ಧ.ಮ. ಎಜುಕೇಷನಲ್ ಸೊಸೈಟಿಯ ಐಟಿ ವಿಭಾಗದ ಸಿ. ಇ.ಓ ಪೂರಣ್ ವರ್ಮರವರು ವಸ್ತು ಪ್ರದರ್ಶನದ ಉದ್ಘಾಟನೆ ಮಾಡಿದರು. ಪುರಾತನ ವಸ್ತುಗಳ ಸಂಗ್ರಹದಲ್ಲಿ ವೀರೆಂದ್ರ ಹೆಗ್ಗಡೆಯವರ ಆಸಕ್ತಿಯನ್ನು ವಿವರಿಸಿ, ಭಾಗವಹಿಸಿದ ಎಲ್ಲಾ ತಂಡದವರನ್ನು ಅಭಿನಂದಿಸಿದರು. ಶ್ರೀ ಧ ಮ ಕಾಲೇಜಿನ ಪ್ರಾಚಾರ್ಯ ಡಾ. ವಿಶ್ವನಾಥರು ಕಾರ್ಯಕ್ರಮಕ್ಕೆ ಶುಭ ಕೋರಿದರು. DKPANA ಅಧ್ಯಕ್ಷ ಮರ್ಕಡ್ ಪ್ರಭಾಕರ ಕಾಮತ್, ರೋಟರಿ ಕ್ಲಬ್ ಅಧ್ಯಕ್ಷ ರೊ. ಪ್ರೊ. ಪ್ರಕಾಶ ಪ್ರಭು, ಧರ್ಮಸ್ಥಳ ವಸ್ತು ಸಂಗ್ರಹಾಲಯದ ಡೈರೆಕ್ಟರ್ ರಿತೇಶ್ ಮುಖ್ಯ ಅತಿಥಿಗಳಾಗಿದ್ದರು.

ವಸ್ತು ಪ್ರದರ್ಶನದಲ್ಲಿ ಭಾಗವಹಿಸಿದ ಪ್ರತಿ ಸದಸ್ಯರಿಗೂ ವೀರೇಂದ್ರ ಹೆಗ್ಗಡೆಯವರು ಸ್ವತಃ ಹಸ್ತಾಕ್ಷರ ಮಾಡಿದ ಸರ್ಟಿಫಿಕೇಟ್ ಗಳನ್ನು ನೀಡಲಾಯಿತು
ವಸ್ತು ಪ್ರದರ್ಶನ ಪ್ರಯೋಜನ ಪಡೆದ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳನ್ನು ಕಾರ್ಯಕ್ರಮದ ಸಂಚಾಲಕಿ ಡಾ. ವಿದ್ಯಾ ಶ್ರೀಹರಿಯವರು ಅಭಿನಂದಿಸಿದರು.

Related posts

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ

Suddi Udaya

ಕಣಿಯೂರು ಜಿ. ಪಂ. ವ್ಯಾಪ್ತಿಯ ಮತದಾನ ಕೇಂದ್ರಕ್ಕೆ ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಭೇಟಿ

Suddi Udaya

ಆ.1 ರಿಂದ 15ರ ವರೆಗೆ ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಸಾರಿಮೇಳ: ಗ್ರಾಹಕರಿಗೆಂದೇ ಆಯ್ದು ತಂದ ವಿವಿಧ ಉಡುಪುಗಳ ಮೇಲೆ ಡಿಸ್ಕೌಂಟ್ ಸೇಲ್

Suddi Udaya

ಉಜಿರೆ: ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನಿರ್ದೇಶಕ ಎಮ್. ಗೋಪಾಲಕೃಷ್ಣ ಶೆಟ್ಟಿ (ಎಂ.ಜಿ ಶೆಟ್ಟಿ ) ನಿಧನ

Suddi Udaya

ರಾಜ್ಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಉಜಿರೆ ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜು ದ್ವಿತೀಯ ಸ್ಥಾನ

Suddi Udaya

ಕಾಶಿಪಟ್ಣ ಗ್ರಾ.ಪಂ. ಅರಿವು ಕೇಂದ್ರ, ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!