25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುವೆಟ್ಟು ಮತ್ತು ಓಡಿಲ್ನಾಳ ಬಿಜೆಪಿ ಶಕ್ತಿ ಕೇಂದ್ರಗಳ ಅಭ್ಯಾಸ ವರ್ಗ

ಕುವೆಟ್ಟು : ಕುವೆಟ್ಟು ಮತ್ತು ಓಡಿಲ್ನಾಳ ಬಿಜೆಪಿ ಶಕ್ತಿ ಕೇಂದ್ರಗಳ ಅಭ್ಯಾಸವರ್ಗ ಕಾರ್ಯಕ್ರಮ ನ. 16 ರಂದು ಕುವೆಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಗಣೇಶ್ ಕುಲಾಲ್ ಅವರ ಮನೆಯಲ್ಲಿ ನಡೆಯಿತು.

ಬಿಜೆಪಿಯ ಹಿರಿಯ ಕಾರ್ಯಕರ್ತ ಗಂಗಯ್ಯ ಮೂಲ್ಯ ಮತ್ತು ಮಾಜಿ ಕುವೆಟ್ಟು ಪಂಚಾಯತ್ ಅಧ್ಯಕ್ಷ ಅಧ್ಯಕ್ಷ ಪೂವಪ್ಪ ಭಂಡಾರಿಯವರು ದೀಪ ಬೆಳಗಿಸಿ, ಭಾರತ ಮಾತೆಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು.
ಮಂಡಲ ಉಪಾಧ್ಯಕ್ಷ ಕೊರಗಪ್ಪ ಗೌಡ ಉದ್ಘಾಟನಾ ಭಾಷಣ ಮಾಡಿ ಶುಭ ಹಾರೈಸಿದರು.

ನಮ್ಮ ವೈಚಾರಿಕತೆ ಮತ್ತು ಪಂಚ ಪರಿವರ್ತನೆ ವಿಷಯವನ್ನು ಉಮೇಶ್ ನರ್ತಿಕಲ್ಲು ಮಂಡನೆ ಮಾಡಿದರು. ಬೂತ್ ಸಂಘಟನೆ ಮತ್ತು ಸ್ಥಳೀಯ ಆಡಳಿತದೊಂದಿಗೆ ನಮ್ಮ ಪಾತ್ರ ಈ ವಿಷಯವನ್ನು ಸುದೀರ್ ಸುವರ್ಣ ಅಳದಂಗಡಿಯವರು ಮಂಡಿಸಿದರು. ವಿಕಸಿತ ಭಾರತದ ಅಮೃತ ಕಾಲದಲ್ಲಿ ನಮ್ಮ ಸಕ್ರಿಯತೆ ವಿಷಯವನ್ನು ಸೀತಾ ರಾಮ್ ಬೆಲಾಲ್ ಮಂಡಿಸಿದರು.ಬೂತ್ ಷ ಬೈಠಕ್ ಧರ್ಮಸ್ಥಳ ಮಹಾಶಕ್ತಿಕೇಂದ್ರ ಅಧ್ಯಕ್ಷ ಚಂದ್ರಕಾಂತ್ ನಿಡ್ಡಾಜೆಯವರು ತೆಗೆದುಕೊಂಡು ವರದಿ ಪಡೆದುಕೊಂಡರು.
ಶಾಸಕ ಹರೀಶ್ ಪೂಂಜ ಸಮಾರೋಪ ಭಾಷಣ ಮಾಡಿದರು.

ಕುವೆಟ್ಟು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಚಂದ್ರಕಾಂತ್ ನಿಡ್ಡಾಜೆ, ಪ್ರಧಾನ ಕಾರ್ಯದರ್ಶಿ ಪ್ರದೀಪ್ ಶೆಟ್ಟಿ ಶಕ್ತಿನಗರ, ಪಕ್ಷದ ಪ್ರಮುಖರಾದ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಮಮತಾ ಶೆಟ್ಟಿ ದೇವಸ್ಯ,ಯುವ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಉಮೇಶ್ ಕುಲಾಲ್, ಹಿಂದುಳಿದ ಮೋರ್ಚಾದ ತಾಲೂಕು ಕಾರ್ಯದರ್ಶಿ ವಿಠಲ ಆಚಾರ್ಯ, ಮಾಜಿ ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕರಾದ ಪ್ರಭಾಕರ್ ಶೆಟ್ಟಿ ಉಪ್ಪಡ್ಕ, ತಿಲಕ್ ಕಂಚಿಂಜ, ಕುವೆಟ್ಟು ಶಕ್ತಿ ಕೇಂದ್ರದ ಅಧ್ಯಕ್ಷರಾದ ಚಂದ್ರಹಾಸ ದಾಸ್,ಓಡಿಲ್ನಾಳ ಶಕ್ತಿ ಕೇಂದ್ರದ ಅಧ್ಯಕ್ಷರಾದ ರಾಜಪ್ರಕಾಶ್ ಪಡ್ಡೈಲು ಹಾಗು ಕುವೆಟ್ಟು ಮತ್ತು ಓಡಿಲ್ನಾಲ ಭಾಗದ ಪಂಚಾಯತ್ ಸದಸ್ಯರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ಪಂಚಾಯತ್ ಅಧ್ಯಕ್ಷೆ ಭಾರತಿ ಶೆಟ್ಟಿಯವರು ಬಿಜೆಪಿ ಗೀತೆ ಯೊಂದಿಗೆ ಸಂಪದ ಆರಂಭ ಆಗಿ, ಕುಮಾರಿ ರಮ್ಯಾ ಅವರು ವಂದೇಮಾತರಂ ಗೀತೆ ಹಾಡಿದರು. ಬೆಳ್ತಂಗಡಿ ಯುವಮೋರ್ಚಾ ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ ಗುರುವಾಯನಕೆರೆ ಸ್ವಾಗತಿಸಿದರು, ಕುವೆಟ್ಟು ಗ್ರಾಮ ಪಂಚಾಯತ್ ಸದಸ್ಯ ನಿತಿನ್ ಬರಾಯ ಧನ್ಯವಾದವಿತ್ತರು.

Related posts

ಮುಂಡ್ರುಪಾಡಿ: ದ.ಕ.ಜಿ.ಪಂ.ಸ.ಕಿ.ಪ್ರಾ. ಶಾಲೆಯಲ್ಲಿ ಪರಿಸರ ಕಾರ್ಯಕ್ರಮ, ಹಣ್ಣಿನ ಗಿಡ ನಾಟಿ

Suddi Udaya

ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಮೋಹನ್ ಕುಮಾರ್ ಕಚೇರಿಗೆ ಕ್ಯಾ. ಬ್ರಿಜೇಶ್ ಚೌಟ ಭೇಟಿ:

Suddi Udaya

ಕನ್ಯಾಡಿ ಸ್ವಾಮೀಜಿಯವರಿಂದ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಪುಣ್ಯಕೋಟಿಯನ್ನು ಉಳಿಸಿ,ಕೋಟಿ ಕೋಟಿ ಪುಣ್ಯ ಗಳಿಸಿ, ಆ.26: ಉಜಿರೆಯಲ್ಲಿ “ಗೋವು ಉಳಿದರೆ ನಾವು” ಅಭಿಯಾನ-2026

Suddi Udaya

ಕಡಿರುದ್ಯಾವರ: ತೋಟಗಳಿಗೆ ನುಗ್ಗಿದ ಕಾಡಾನೆಗಳ ಹಿಂಡು: ಅಪಾರ ಕೃಷಿ ನಾಶ

Suddi Udaya

ಉಜಿರೆ ಶ್ರೀ ವನದುರ್ಗಾ, ಶ್ರೀ ನಾಗ ರಕ್ತೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ಅಯೋಧ್ಯೆ ಸಂಭ್ರಮಾಚರಣೆ ಕ್ಷೇತ್ರದ ದೇವರಿಗೆ ವಿಶೇಷ ಪೂಜೆ, ರಾಮನಾಮ ತಾರಕ ಮಂತ್ರ ಹೋಮ, ಭಜನೆ ಸಂಕೀರ್ಣತೆ

Suddi Udaya
error: Content is protected !!