22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುಡ್ ಫ್ಯೂಚರ್ ಶಾಲೆಯಲ್ಲಿ ಮಕ್ಕಳ ದಿನಾಚರಣೆ, ವಾರ್ಷಿಕ ಕ್ರೀಡಾಕೂಟ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ

ಬೆಳ್ತಂಗಡಿ: ಗುಡ್ ಫ್ಯೂಚರ್ ಶಾಲೆಯಲ್ಲಿ ಮಕ್ಕಳ ದಿನಾಚರಣೆ, ವಾರ್ಷಿಕ ಕ್ರೀಡಾಕೂಟ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಿತು.

ಶಾಲಾ ಶಿಕ್ಷಕಿಯರ ಪ್ರಾರ್ಥನೆಯ ಬಳಿಕ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲಾ ಸಂಚಾಲಕರಾದ ನಸೀರ್ ಅಹಮದ್ ಖಾನ್ ರವರು ಹಸಿರು ನಿಶಾನೆಯ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅತಿಥಿಗಳ ಜೊತೆಗೂಡಿ ನೆಹರೂರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ಮುಖ್ಯೋಪಾಧ್ಯಾಯರಾದ ಪ್ರಭಾಕರ ಶೆಟ್ಟಿ ಅವರು ಮಕ್ಕಳ ದಿನಾಚರಣೆಯ ಮಹತ್ವವನ್ನು ತಿಳಿಸಿದರು. ಶಿಕ್ಷಕಿ ಶ್ರುತಿ ನೆಹರೂರವರ ಆದರ್ಶ ಜೀವನದ ಕುರಿತು ಮಾತನಾಡಿದರು.


ನಂತರ ನಡೆದ ವಾರ್ಷಿಕ ಬಹುಮಾನ ವಿತರಣಾ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿ ಶ್ರೀಮತಿ ಬಿಂದು ಕೇಶವರವರು ಬಹುಮಾನ ನೀಡುವ ಮೂಲಕ ಚಾಲನೆ ನೀಡಿದರು. ವೇದಿಕೆಯಲ್ಲಿ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಶುಕುರ್ ಸಾಹೇಬ್, ಉಪಾಧ್ಯಕ್ಷ ಧನ ಕೀರ್ತಿ ಜೈನ್ ಹಾಗೂ ಶ್ರೀಮತಿ ವಿನಯ ಮಾಜಿ ಉಪಾಧ್ಯಕ್ಷ ವೀರೇಂದ್ರ ಕುಮಾರ್ ಜೈನ್, ಶ್ರೀಮತಿ ಹರಿಣಾಕ್ಷಿ ಸದಸ್ಯರಾದ ಯಶೋಧರ ರವರು ಉಪಸ್ಥಿತರಿದ್ದು ಮಕ್ಕಳಿಗೆ ಬಹುಮಾನ ವಿತರಿಸಿದರು. ಶಿಕ್ಷಕಿಯರಾದ ಸೌಜನ್ಯ, ಅಫ್ರ ,ರೂಪ ಇವರು ವಿಜೇತರ ಹೆಸರನ್ನು ವಾಚಿಸಿದರು. ಶಿಕ್ಷಕಿ ಕುಮುದಾಕ್ಷಿ ಸ್ವಾಗತಿಸಿ , ರಕ್ಷಿತಾ ಧನ್ಯವಾದವಿತ್ತರು. ಶಿಕ್ಷಕಿ ಪೈಝುನ್ ಕಾರ್ಯಕ್ರಮ ನಿರ್ವಹಿಸಿದರು.

Related posts

ಉಜಿರೆ ಶ್ರೀ ಧ.ಮಂ. ಪಿಯು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಶೈಕ್ಷಣಿಕ ಕಾರ್ಯಕ್ರಮ

Suddi Udaya

ಕುವೆಟ್ಟು: ಸ.ಉ.ಹಿ. ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲೆ ಕಾರ್ಯಕ್ರಮ ಹಾಗೂ ಬೀಳ್ಕೊಡುಗೆ ಸಮಾರಂಭ

Suddi Udaya

ಶ್ರೀ ಎರ್ನೋಡಿ ಕ್ಷೇತ್ರ ಉಜಿರೆ ವಷಾ೯ವಧಿ ಜಾತ್ರೋತ್ಸವ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾರಾವಿ ಸಂತ ಅಂತೋನಿ ಪದವಿ ಪೂರ್ವ ಕಾಲೇಜಿಗೆ ಶೇ.94.11 ಫಲಿತಾಂಶ

Suddi Udaya

ಮಡಂತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರಿಗೆ ಗೌರವಾರ್ಪಣೆ

Suddi Udaya

ತಲೆಮರೆಸಿಕೊಂಡಿದ್ದ ಜ್ಯೋತಿಷಿಯನ್ನು ಹಿಡಿದು ನ್ಯಾಯಾಲಯಕ್ಕೆ ಹಾಜರುಪಡಿಸಿದ ಧರ್ಮಸ್ಥಳ ಪೊಲೀಸರು

Suddi Udaya
error: Content is protected !!