ಗ್ರಾಮಾಂತರ ಸುದ್ದಿಚಿತ್ರ ವರದಿ

ದಕ್ಷಿಣ ಕನ್ನಡ ಜಿಲ್ಲೆಯ ಮಾರ್ಗದರ್ಶಿ ಬ್ಯಾಂಕ್ ನಿಂದ “ನಿಮ್ಮ ಹಣ ನಿಮ್ಮ ಹಕ್ಕು” ‘ಅನ್ಕ್ಲೇಮ್ಡ್ ಡೆಪಾಸಿಟ್’ ಜಾಗೃತಿ ಅಭಿಯಾನ

ಮಂಗಳೂರು: ದೀರ್ಘಕಾಲದವರೆಗೆ ಕ್ಲೇಮ್ ಮಾಡದಿರುವ ಠೇವಣಿಗಳನ್ನು ಗುರುತಿಸಿ, ಅವುಗಳನ್ನು ಖಾತೆದಾರರಿಗೆ ಅಥವಾ ಅವರ ಕಾನೂನುಬದ್ಧ ವಾರಸುದಾರರಿಗೆ ಹಸ್ತಾಂತರಿಸುವ ಉದ್ದೇಶದಿಂದ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ‘ಅನ್ಕ್ಲೇಮ್ಡ್ ಡೆಪಾಸಿಟ್’ ಜಾಗೃತಿ ಅಭಿಯಾನ ಚಾಲನೆ ನೀಡಲಾಯಿತು.

ಅಭಿಯಾನಕ್ಕೆ ಜಿಲ್ಲಾ ಪಂಚಾಯತ್ ಉಪಕಾರ್ಯನಿರ್ವಾಹಕ ಅಧಿಕಾರಿ ಶ್ರೀಮತಿ ಜಯಲಕ್ಷ್ಮಿ ಚಾಲನೆ ನೀಡಿ ನಮ್ಮ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕ್ಲೇಮ್ ಮಾಡದೇ ಒಟ್ಟು 633960 – ಖಾತೆಗಳಲ್ಲಿ 142.79 ಕೋಟಿ ರೂಪಾಯಿ ಇದ್ದು ,ಈ ಅಭಿಯಾನದ ಪ್ರಯೋಜನವನ್ನು ಸೂಕ್ತ ವಾರಸುದಾರರು ಪಡೆಯಲು ಸಹಕಾರಿ ಎಂದು ತಿಳಿಸಿದರು.
ಅಭಿಯಾನದಲ್ಲಿ ಬ್ಯಾಂಕರರಿಗೆ ವೇಗವಾಗಿ ಕ್ಲೇಮ್ ಇತ್ಯರ್ಥ ಮಾಡುವ ವಿಧಾನ, ಅಗತ್ಯ ದಾಖಲೆಗಳು, ಹಾಗೂ ಸರ್ಕಾರದ ಮಾರ್ಗಸೂಚಿಗಳ ಕುರಿತು ಲೀಡ್ ಬ್ಯಾಂಕ್ ವ್ಯವಸ್ಥಾಪಕರು ಶ್ರೀಮತಿ ಕವಿತಾ ಎನ್ ಶೆಟ್ಟಿ ಮಾಹಿತಿ ನೀಡಿ ಅಕ್ಟೋಬರ್ ಹಾಗೂ ನವೆಂಬರ್ ತಿಂಗಳಲ್ಲಿ ಈ ಅಭಿಯಾನದ ಭಾಗವಾಗಿ ಒಟ್ಟು 359 ಖಾತೆಗಳನ್ನು ಕ್ಲೇಮ್ ಮಾಡಿ, ರೂ. 1.50 ಕೋಟಿ ಹಣವನ್ನು ಸಂಬಂಧಿಸಿದ ಮಾಲೀಕರು/ವಾರಸುದಾರರಿಗೆ ಹಸ್ತಾಂತರಿಸಲಾಗಿದೆ ಎಂದು ತಿಳಿಸಿದರು.

ಹಣಕಾಸು ಸಚಿವಾಲಯದ ಮಾರ್ಗಸೂಚಿಯಂತೆ, ದೇಶಾದ್ಯಂತ ಈ ‘ನಿಮ್ಮ ಹಣ ನಿಮ್ಮ ಹಕ್ಕು’ ವಿಶೇಷ ಅಭಿಯಾನವು ಬ್ಯಾಂಕಿಂಗ್, ವಿಮೆ ಹಾಗೂ ಸಂಬಂಧಿತ ವಲಯದ ಎಲ್ಲಾ ಶಾಖೆಗಳಲ್ಲಿ 31 ಡಿಸೆಂಬರ್ 2025 ರವರೆಗೆ ಮುಂದುವರಿಯಲಿದೆ. ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ಎಲ್ಐಸಿ ಪ್ರತಿನಿಧಿಗಳು, ಹಾಗೂ ಜಿಲ್ಲಾ ಬ್ಯಾಂಕ್ ಸಂಯೋಜಕರು ಪಾಲ್ಗೊಂಡಿದ್ದರು.

Related posts

ಕಣಿಯೂರು ಗ್ರಾಮದ 03 ಜನ ವಿಶೇಷ ಚೇತನರಿಗೆ ಬ್ರೈಟ್ ಇಂಡಿಯಾ ಮದ್ದಡ್ಕ ವತಿಯಿಂದ ಸಾಧನ ಸಲಕರಣೆ ವಿತರಣೆ

Suddi Udaya

ದಾರುನ್ನೂರ್ ಮಸೀದಿ ನಿರ್ಮಿಸಿದ ಶೈಖ್ ಅಬ್ದುಲ್ ರವರ ಪುತ್ರ ಖಾಲಿದ್ ಅಲ್ ಝುಬೈರ್ ರಿಗೆ ಸನ್ಮಾನ

Suddi Udaya

ಅಂತರರಾಷ್ಟ್ರೀಯ ಇಂಗ್ಲಿಷ್ ಒಲಿಂಪಿಯಾಡ್ 2025–26: ಎಕ್ಸೆಲ್ ಪಿಯು ಕಾಲೇಜು, ಗುರುವಾಯನಕೆರೆ ವಿದ್ಯಾರ್ಥಿಗಳ ಅದ್ಭುತ ಸಾಧನೆ: ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya

ಧರ್ಮಸ್ಥಳ: ಗಂಗಾಧರ ಬೇಕಲ್ ನಿಧನ

Suddi Udaya

ಬೆಳ್ತಂಗಡಿ ಜೆಸಿಐ, ಮಂಜುಶ್ರೀ ವತಿಯಿಂದ ಶ್ರಾವಣ ತರಬೇತಿ ಕಾರ್ಯಕ್ರಮ

Suddi Udaya

ಶಿರ್ಲಾಲು: ಭೀಕರ ಮಳೆಗೆ ರಸ್ತೆ ಸಂಪರ್ಕ ಕಡಿದು ಹೋಗುವ ಭೀತಿ

Suddi Udaya
error: Content is protected !!