25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ದ.ಕ ಜಿಲ್ಲಾ ಮಟ್ಟದ ಅಖಿಲ ಭಾರತ ಸಹಕಾರ ಸಪ್ತಾಹ ಅಂಗವಾಗಿ ಸ್ವಚ್ಚತಾ ಆಂದೋಲನ

ಧರ್ಮಸ್ಥಳ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಧರ್ಮಸ್ಥಳ ಇದರ ನೇತೃತ್ವದಲ್ಲಿ ದ.ಕ ಜಿಲ್ಲಾ ಮಟ್ಟದ ಅಖಿಲ ಭಾರತ ಸಹಕಾರ ಸಪ್ತಾಹ ಅಂಗವಾಗಿ, ಸಹಕಾರ ಸಂಸ್ಥೆಗಳ ಅಭಿವೃದ್ಧಿಯ ಬಲವರ್ಧನೆ ಎಂಬ ತತ್ವದೊಂದಿಗೆ ಧರ್ಮಸ್ಥಳ ಹಾಗೂ ಪುದುವೆಟ್ಟಿನ ಎಲ್ಲಾ ಬೂತ್ ಮಟ್ಟದಲ್ಲಿ ಸಹಕಾರಿ ಸಪ್ತಾಹ ಸ್ವಚ್ಛತಾ ಆಂದೋಲನ ಸಹಕಾರಿಗಳ ಸಹಕಾರದೊಂದಿಗೆ ನಡೆಯಿತು.

ಕಾರ್ಯಕ್ರಮವನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಉದ್ಘಾಟಿಸಿ ಧರ್ಮಸ್ಥಳ ಸೊಸೈಟಿ ಹಲವಾರು ಸತ್ ಚಿಂತನೆಯಿರುವ ಕಾರ್ಯಕ್ರಮಗಳನ್ನು ಆಯೋಜಿಸಿ ಇತರ ಸಂಘ ಸಂಸ್ಥೆಗಳಿಗೆ ಮಾದರಿಯಾಗಿದೆ. ಸ್ವಚ್ಚ ದೇಶ, ಸ್ಚಚ್ವ ಪರಿಸರ ಪರಿಕಲ್ಪನೆಯೊಂದಿಗೆ ಇಂದು ಹತ್ತಾರು ಕಿ.ಮೀ ರಸ್ತೆ ಬದಿಯನ್ನು ಸ್ವಚ್ಚ ಮಾಡುವ ಕೆಲಸ ಶ್ಲಾಘನೀಯವಾದುದು ಎಂದರು.

ಈ ಸಂದರ್ಭದಲ್ಲಿ ಧರ್ಮಸ್ಥಳ ಸೊಸೈಟಿ ಅಧ್ಯಕ್ಷ ಪ್ರೀತಮ್ ಡಿ, ಉಪಾಧ್ಯಕ್ಷ ಅಜಿತ್ ಕುಮಾರ್, ಸಿಇಓ ಶಶಿಧರ, ಪುದುವೆಟ್ಟು ಗ್ರಾ.ಪಂ ಅಧ್ಯಕ್ಷ ಪೂರ್ಣೇಶ್, ಧರ್ಮಸ್ಥಳ ಪಂಚಾಯತ್ ಉಪಾಧ್ಯಕ್ಷ ಶ್ರೀನಿವಾಸ್ ರಾವ್, ಸೊಸೈಟಿ ನಿರ್ದೇಶಕರಾದ ಶಾಂಭವಿ ರೈ,ಉಮಾನಾಥ, ಶೀನ, ಧನಲಕ್ಷ್ಮಿ ಜನಾರ್ಧನ್, ಪ್ರಭಾಕರ ಗೌಡ ಬೊಳ್ಮ, ನೀಲಾಧರ ಶೆಟ್ಟಿ, ಪ್ರಸನ್ನ ಹೆಬ್ಬಾರ್, ಚಂದ್ರಶೇಖರ, ವಿಕ್ರಂ ಗೌಡ, ತಂಗಚ್ಚನ್ ಹಾಗೂ ಸೊಸೈಟಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಹಲವಾರು ಸಹಕಾರಿ ಬಂಧುಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಸ್ವಚ್ಛತೆಯಲ್ಲಿ ಪಾಲ್ಗೊಂಡರು.ಇದರ ಜೊತೆಗೆ ಧರ್ಮಸ್ಥಳ ಹಾಗೂ ಪುದುವೆಟ್ಟಿನ ಹಲವು ರಸ್ತೆ ಬದಿಯ ಹುಲ್ಲು ತೆಗೆಯುವ ಕೆಲಸಕ್ಕೆ ಚಾಲನೆ ನೀಡಲಾಯಿತು.

Related posts

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಸ್ಟಾನ (ರಿ) ಪ್ರಾಯೋಜಿತ ಬಟ್ಟೆಯ ಕಸೂತಿ ಆರಿ ಕೌಶಲ್ಯ ಸ್ವ ಉದ್ಯೋಗ ತರಬೇತಿಯ ಸಮಾರೋಪ ಕಾರ್ಯಕ್ರಮ

Suddi Udaya

ಪಡ್ಡಂದಡ್ಕ ನೂರುಲ್ ಹುಧಾ ಕೇಂದ್ರ ಮಸೀದಿ ಖತೀಬ್ ಜನಾಬ್ ಅಶ್ರಫ್ ಫೈಝಿ ಅರ್ಕಾನರವರಿಗೆ ಪವಿತ್ರ ಉಮ್ರಾ ಯಾತ್ರೆಗೆ ಬೀಳ್ಕೊಡುಗೆ

Suddi Udaya

ಮಚ್ಚಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರಾಣಿಜನ್ಯ ರೋಗಗಳ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಶ್ರೀ ಕ್ಷೇತ್ರ ಪಾರೆಂಕಿ ಶ್ರೀ ಮಹಿಷಮರ್ದಿನೀ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನೂತನ ಅಧ್ಯಕ್ಷರಾಗಿ ಮಾಲಾಡಿ ಗ್ರಾ. ಪಂ. ಅಧ್ಯಕ್ಷ, ಯುವ ನಾಯಕ ಪುನೀತ್ ಕುಮಾರ್ ಅವಿರೋಧ ಆಯ್ಕೆ

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಬಸದಿ ಅಭಿವೃದ್ಧಿಗೆ ಅನುದಾನ ಬಿಡುಗಡೆ: ಪ್ರತಾಪ್ ಸಿಂಹ ನಾಯಕ್ ರವರಿಗೆ ಆಡಳಿತ ಮಂಡಳಿಯಿಂದ ಅಭಿನಂದನೆ

Suddi Udaya

ಚಿಬಿದ್ರೆ : ಪೆರಿಯಡ್ಕ ನಿವಾಸಿ ನಾಟಿ ವೈದ್ಯ ರಾಮಣ್ಣ ಗೌಡ ನಿಧನ

Suddi Udaya
error: Content is protected !!