25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ದ.ಕ ಜಿಲ್ಲಾ ಮಟ್ಟದ ಅಖಿಲ ಭಾರತ ಸಹಕಾರ ಸಪ್ತಾಹ ಅಂಗವಾಗಿ ಸ್ವಚ್ಚತಾ ಆಂದೋಲನ

ಧರ್ಮಸ್ಥಳ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಧರ್ಮಸ್ಥಳ ಇದರ ನೇತೃತ್ವದಲ್ಲಿ ದ.ಕ ಜಿಲ್ಲಾ ಮಟ್ಟದ ಅಖಿಲ ಭಾರತ ಸಹಕಾರ ಸಪ್ತಾಹ ಅಂಗವಾಗಿ, ಸಹಕಾರ ಸಂಸ್ಥೆಗಳ ಅಭಿವೃದ್ಧಿಯ ಬಲವರ್ಧನೆ ಎಂಬ ತತ್ವದೊಂದಿಗೆ ಧರ್ಮಸ್ಥಳ ಹಾಗೂ ಪುದುವೆಟ್ಟಿನ ಎಲ್ಲಾ ಬೂತ್ ಮಟ್ಟದಲ್ಲಿ ಸಹಕಾರಿ ಸಪ್ತಾಹ ಸ್ವಚ್ಛತಾ ಆಂದೋಲನ ಸಹಕಾರಿಗಳ ಸಹಕಾರದೊಂದಿಗೆ ನಡೆಯಿತು.

ಕಾರ್ಯಕ್ರಮವನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಉದ್ಘಾಟಿಸಿ ಧರ್ಮಸ್ಥಳ ಸೊಸೈಟಿ ಹಲವಾರು ಸತ್ ಚಿಂತನೆಯಿರುವ ಕಾರ್ಯಕ್ರಮಗಳನ್ನು ಆಯೋಜಿಸಿ ಇತರ ಸಂಘ ಸಂಸ್ಥೆಗಳಿಗೆ ಮಾದರಿಯಾಗಿದೆ. ಸ್ವಚ್ಚ ದೇಶ, ಸ್ಚಚ್ವ ಪರಿಸರ ಪರಿಕಲ್ಪನೆಯೊಂದಿಗೆ ಇಂದು ಹತ್ತಾರು ಕಿ.ಮೀ ರಸ್ತೆ ಬದಿಯನ್ನು ಸ್ವಚ್ಚ ಮಾಡುವ ಕೆಲಸ ಶ್ಲಾಘನೀಯವಾದುದು ಎಂದರು.

ಈ ಸಂದರ್ಭದಲ್ಲಿ ಧರ್ಮಸ್ಥಳ ಸೊಸೈಟಿ ಅಧ್ಯಕ್ಷ ಪ್ರೀತಮ್ ಡಿ, ಉಪಾಧ್ಯಕ್ಷ ಅಜಿತ್ ಕುಮಾರ್, ಸಿಇಓ ಶಶಿಧರ, ಪುದುವೆಟ್ಟು ಗ್ರಾ.ಪಂ ಅಧ್ಯಕ್ಷ ಪೂರ್ಣೇಶ್, ಧರ್ಮಸ್ಥಳ ಪಂಚಾಯತ್ ಉಪಾಧ್ಯಕ್ಷ ಶ್ರೀನಿವಾಸ್ ರಾವ್, ಸೊಸೈಟಿ ನಿರ್ದೇಶಕರಾದ ಶಾಂಭವಿ ರೈ,ಉಮಾನಾಥ, ಶೀನ, ಧನಲಕ್ಷ್ಮಿ ಜನಾರ್ಧನ್, ಪ್ರಭಾಕರ ಗೌಡ ಬೊಳ್ಮ, ನೀಲಾಧರ ಶೆಟ್ಟಿ, ಪ್ರಸನ್ನ ಹೆಬ್ಬಾರ್, ಚಂದ್ರಶೇಖರ, ವಿಕ್ರಂ ಗೌಡ, ತಂಗಚ್ಚನ್ ಹಾಗೂ ಸೊಸೈಟಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಹಲವಾರು ಸಹಕಾರಿ ಬಂಧುಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಸ್ವಚ್ಛತೆಯಲ್ಲಿ ಪಾಲ್ಗೊಂಡರು.ಇದರ ಜೊತೆಗೆ ಧರ್ಮಸ್ಥಳ ಹಾಗೂ ಪುದುವೆಟ್ಟಿನ ಹಲವು ರಸ್ತೆ ಬದಿಯ ಹುಲ್ಲು ತೆಗೆಯುವ ಕೆಲಸಕ್ಕೆ ಚಾಲನೆ ನೀಡಲಾಯಿತು.

Related posts

ಕೊಯ್ಯೂರು ಸರಕಾರಿ ಪದವಿಪೂರ್ವ ಕಾಲೇಜು ಅಭಿವೃದ್ಧಿ ಬಗ್ಗೆ ಸಮಾಲೋಚನೆ ಸಭೆ

Suddi Udaya

ಬೆಳ್ತಂಗಡಿ: ಶ್ರೀ ಧರ್ಮಸ್ಥಳ “ಶೌರ್ಯ” ವಿಪತ್ತು ಘಟಕದ ಕೋರ್ ಕಮಿಟಿಯ ಸಭೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಪದೇ ಪದೇ ಸಂಭವಿಸುತ್ತಿರುವ ಕಾಳ್ಗಿಚ್ಚು ತಡೆಯಲು ಕೊನೆಗೂ ಅರಣ್ಯ ಇಲಾಖೆಯಿಂದ ಸಿಬ್ಬಂದಿ ನಿಯೋಜನೆ

Suddi Udaya

ಉಜಿರೆ :ಝೆoಕಾರ ರಾಷ್ಟ್ರೀಯ ಶಿಕ್ಷಣ ಮತ್ತು ಸಾಂಸ್ಕೃತಿಕ ಫೆಸ್ಟ್ : ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ವಿದ್ಯಾರ್ಥಿ ವನಿಶ್ ಗೆ ಫೋಟೋಗ್ರಫಿ ಸ್ಪರ್ಧೆಯಲ್ಲಿ ಪ್ರಥಮ

Suddi Udaya

ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Suddi Udaya

ಬೆಳ್ತಂಗಡಿ: ತಿಮರೋಡಿ ಗಡಿಪಾರು ಆದೇಶ ಪ್ರಕರಣ ಹಿಂಪಡೆಯುವಂತೆ ತಹಶೀಲ್ದಾರ್ ಟಪ್ಪಾಲು ಮೂಲಕ ಮನವಿ

Suddi Udaya
error: Content is protected !!