ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಷ್ಟ್ರಮಟ್ಟದ ಉರ್ದು ಭಾಷಣ ಸ್ಪರ್ಧೆ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯ ಹಳೆ ವಿದ್ಯಾರ್ಥಿ ಸೈಯ್ಯದ್ ಮಹಮ್ಮದ್ ಉವೈಸ್ ಪ್ರಥಮ ಸ್ಥಾನ

ಬೆಳ್ತಂಗಡಿ: ಸುನ್ನಿ ಸ್ಟುಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ ಇದರ ಪ್ರಾಯೋಜಕತ್ವದಲ್ಲಿ ನ.15ರಂದು ಗುಲ್ಬರ್ಗ ಜಿಲ್ಲೆಯ ಬಂದೇನವಾಝ್ ನಲ್ಲಿ ನಡೆದ ರಾಷ್ಟ್ರಮಟ್ಟದ ಸಾಹಿತ್ಯೋತ್ಸವ ಕಾರ್ಯಕ್ರಮದಲ್ಲಿ ಜೂನಿಯರ್ ವಿಭಾಗದ ಉರ್ದು ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಬಂಟ್ವಾಳ ತಾಲೂಕಿನ ಪ್ರತಿಷ್ಠಿತ ವಿದ್ಯಾಸಂಸ್ಥೆಗಳಲ್ಲಿ ಒಂದಾದ ಅಲ್ ಖಾದಿಸ ಕಾವಳಕಟ್ಟೆ ಇಲ್ಲಿ ಹಿಫ್ಲ್, ಓದುತ್ತಿರುವ ಸೈಯ್ಯದ್ ಮಹಮ್ಮದ್ ಉವೈಸ್ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ವಿದ್ಯಾ ಸಂಸ್ಥೆಯ ಕಾರ್ಯದರ್ಶಿಯಾದ ಸೈಯ್ಯದ್ ಅಯ್ಯುಬ್ ಹಾಗೂ ಶ್ರೀಮತಿ ನೂರುಶಬ ಇವರ ಪುತ್ರನಾಗಿದ್ದಾರೆ .

ಸುನ್ನಿ ಸ್ಟುಡೆಂಟ್ಸ್ ಫೆಡರೇಷನ್ ಇದರ ಬೆಳ್ತಂಗಡಿ ಲ್ಯಾಲ ಘಟಕದ ವಿದ್ಯಾರ್ಥಿಯಾಗಿದ್ದು,ಬೆಳ್ತಂಗಡಿ ಸೆಕ್ಟರ್ ಮಟ್ಟದಲ್ಲಿ ಪ್ರಥಮ ಸ್ಥಾನ, ವಿಭಾಗ ಮಟ್ಟದಲ್ಲಿ ಪ್ರಥಮ ಸ್ಥಾನ, ಜಿಲ್ಲಾಮಟ್ಟ ಹಾಗೂ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಸತತ ಮೂರನೇ ಬಾರಿ ರಾಷ್ಟ್ರಮಟ್ಟದ ಸಾಹಿತ್ಯೋತ್ಸವ ಕಾರ್ಯಕ್ರಮದ ಉರ್ದು ಭಾಷಣ ಸ್ಪರ್ಧೆಯಲ್ಲಿ ಕರ್ನಾಟಕದ ಪ್ರತಿನಿಧಿಯಾಗಿ ಭಾಗವಹಿಸಿ ಜಮ್ಮು ಕಾಶ್ಮೀರ ಮುಂತಾದ ರಾಜ್ಯದ ವಿದ್ಯಾರ್ಥಿಗಳ ಪ್ರಬಲ ಪೈಪೋಟಿಯ ನಡುವೆಯೂ ತನ್ನ ಮಾತಿನ ವಿಶೇಷ ಕೌಶಲ್ಯದಿಂದ ರಾಷ್ಟ್ರಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ.

Related posts

ಸೆ.25 -ಅ.8: ನಾವೂರುನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ಅರಸಿನಮಕ್ಕಿ ವಲಯ ಶ್ರೀ ಕ್ಷೇ. ಧ. ಗ್ರಾ. ಯೋಜನೆಯ ಪ್ರಗತಿ ಬಂಧು ಸ್ವಸಹಾಯ ಸಂಘಕ್ಕೆ ವಾರ್ಷಿಕ ಲೆಕ್ಕ ಪರಿಶೋಧನೆಯ ಗ್ರೇಡಿಂಗ್ ಪತ್ರ ವಿತರಣೆ

Suddi Udaya

ಬೆಂಗಳೂರು -ಮಂಗಳೂರು ಪೆಟ್ರೋನೆಟ್ ಪೈಪ್ ಲೈನ್ ಕೊರೆದು ಡಿಸೇಲ್ ಕಳ್ಳತನ ; ಐವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಭಗವದ್ಗೀತಾ ಅಭಿಯಾನ: ಶ್ರೀ ಮಂ. ಅ.ಪ್ರೌ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ತೆಂಕಕಾರಂದೂರು ಪಲ್ಕೆ ಎರಡು ಮನೆಯಲ್ಲಿ ಕಳ್ಳತನ

Suddi Udaya

ಸೊರಬ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕುಮಾರ್ ಬಂಗಾರಪ್ಪ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya
error: Content is protected !!