22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

ಲಾಯಿಲ ಗ್ರಾಮ ಪಂಚಾಯತ್ ನಲ್ಲಿ 2025-26 ನೇ ಸಾಲಿನ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆಯನ್ನು ಹಮ್ಮಿಕೊಳ್ಳಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಪಂಚಾಯತ್ ಅಧ್ಯಕ್ಷೆ ಜಯಂತಿ ಎಂ ಕೆ ವಹಿಸಿದರು. ಸಭೆಯಲ್ಲಿ ಪಂಚಾಯತ್ ಉಪಾಧ್ಯಕ್ಷರು, ಸದಸ್ಯರಾದ ಜಯಂತಿ ಆಶಾಸಾಲ್ದಾನ, ರಜನಿ ಎಂ ಆರ್, ಅರವಿಂದ ಕುಮಾರ್, ಲೆಕ್ಕಸಹಾಯಕರಾದ ಸುಪ್ರಿತಾ ಶೆಟ್ಟಿ ಮತ್ತು ಅರೋಗ್ಯ ಕಾರ್ಯಕರ್ತೆ ಸರಸ್ವತಿ ಆಶಾಕಾರ್ಯಕರ್ತರು ಹಾಗೂ ಇಂದಬೆಟ್ಟು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರದ ಜೋಸೆಫ್ ರವರು ಹಾಜರಿದ್ದು ವಿಶೇಷ ವಿಕಲಚೇತನ ರಿಗೆ ಸಿಗುವ ಸೌಲಭ್ಯದ ಬಗ್ಗೆ ಮಾಹಿತಿ ನೀಡಿದರು.

ಸೌಭಾಗ್ಯ ವಿಕಲಚೇತನರ ಪತ್ತಿನ ಸಹಕಾರಿ ಸಂಘದ ವ್ಯವಸ್ಥಾಪಕರು ಉಪಸ್ಥಿತರಿದ್ದರು. ವಿಕಲಚೇತನರಿಗೆ ಬ್ಯಾಂಕಿನಿಂದ ಸಿಗುವ ಸೌಲಭ್ಯದ ಬಗ್ಗೆ ಮಾಹಿತಿ ನೀಡಿದರು. ಆಯ್ದ ಫಲಾನುಭವಿಗಳಿಗೆ ಪಂಚಾಯತ್ ವತಿಯಿಂದ ವೀಲ್ ಚೇರ್, ವಾಕರ್ ವಿತರಿಸಲಾಯಿತು. ಗ್ರಾಮ ಸಭೆಗೆ ಆಗಮಿಸಿದ ಎಲ್ಲಾರಿಗೂ ಅರೋಗ್ಯ ತಪಾಸಣೆಯನ್ನು ಏರ್ಪಡಿಸಲಾಗಿತ್ತು.

ವಿಶೇಷವಾಗಿ ಪಂಚಾಯತ್ ನಲ್ಲಿ ಸೇವೆ ಸಲಿಸುತ್ತಿರುವ ವಿ ಆರ್ ಡಬ್ಲ್ಯೂ ಸೋಮನಾಥ ಹಾಗೂ ಸ್ವಚ್ಛತಾ ಸಿಬ್ಬಂದಿ ಯೋಗೀಶ್ ಇವರಿಗೆ ಉತ್ತಮ ಸೇವಾ ಮನೋಭಾವಕ್ಕೆ ಗೌರವ ಸನ್ಮಾನ ಹಮ್ಮಿಕೊಳ್ಳಲಾಯಿತು. ಪಂಚಾಯತ್ ಲೆಕ್ಕ ಸಹಾಯಕಿ ಸುಪ್ರೀತಾ ಶೆಟ್ಟಿ ನಿರೂಪಿಸಿ, ಧನ್ಯವಾದವಿತ್ತರು.

ಗ್ರಾಮ ಪಂಚಾಯತ್ ಬಿಲ್ ಕಲೆಕ್ಟರ್ ಮೋಹನ್ ಜಮಾ ಖರ್ಚು ಮಂಡನೆ ಮಾಡಿದರು. ಸಿಬ್ಬಂದಿಗಳು ಸಹಕರಿಸಿದರು.

Related posts

ಲಾಯಿಲ: ಕನ್ನಾಜೆ ಅಂಗನವಾಡಿ ಕೇಂದ್ರದಲ್ಲಿ ಹಣ್ಣಿನ ಗಿಡಗಳ ನಾಟಿ ಹಾಗೂ ಶಾಲಾ ಕೈತೋಟ ರಚನೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಕೊಕ್ಕಡ ವಲಯದಲ್ಲಿ ಸಿದ್ಧಿವಿನಾಯಕ ಹೊಸ ಸಂಘ ರಚನೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಿವೃತ್ತರಾದ ಡಾ| ಎಲ್.ಹೆಚ್ ಮಂಜುನಾಥ್ ಅವರಿಗೆ ಸನ್ಮಾನ

Suddi Udaya

ಮುಂಡಾಜೆ: ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೇ ರಸ್ತೆಯಲ್ಲೇ ಹರಿದ ಮಳೆಯ ನೀರು

Suddi Udaya

ಎಸ್ ಡಿ ಯಂ ಪಾಲಿಟೆಕ್ನಿಕ್ ನಲ್ಲಿ ಯುವ ರೆಡ್ ಕ್ರಾಸ್ ಘಟಕ ಹಾಗೂಎನ್.ಎಸ್.ಎಸ್ ಸಹಯೋಗದಲ್ಲಿ ಸಂಚಾರಿ ನಿಯಮಗಳ ಮಾಹಿತಿ

Suddi Udaya

ಮೂಡಬಿದಿರೆ ಎಕ್ಸಲೆಂಟ್ ಪಿಯು ಕಾಲೇಜಿನ ಸಾಧನೆಯ ಶಿಖರ: ದ್ವಿತೀಯ ಪಿಯುಸಿಯಲ್ಲಿ 32 ರ‍್ಯಾಂಕ್‌:ವಿಜ್ಞಾನ ವಿಭಾಗದಲ್ಲಿ 22 ವಿದ್ಯಾರ್ಥಿಗಳು ಹಾಗೂ ವಾಣಿಜ್ಯ ವಿಭಾಗದಲ್ಲಿ 10 ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಟಾಪ್ 10 ರ‍್ಯಾಂಕ್‌

Suddi Udaya
error: Content is protected !!