March 7, 2026
ಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅನುಗ್ರಹ ಕಾಲೇಜಿನಲ್ಲಿ ಅನುಕ-2025 ರ ಉದ್ಘಾಟನೆ

ಉಜಿರೆ: ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ ಅನುಕ-2025ರ ಉದ್ಘಾಟನೆಯು ಕಾಲೇಜಿನ ಆಡಿಟೋರಿಯಮ್‌ನಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜಿನ ಪ್ರಾಂಶುಪಾಲರಾದ ವಂ.ಫಾ.ವಿಜಯ್ ಲೋಬೋ ದೀಪ ಬೆಳಗಿಸುವುದರ ಮೂಲಕ ನೆರವೇರಿಸಿ ಆಧುನಿಕ ಯುಗದಲ್ಲಿ ವಾಣಿಜ್ಯ ವಿಭಾಗದ ಮಹತ್ವವನ್ನು ತಿಳಿಸಿ ಇಂತಹ ಕಾರ್ಯಕ್ರಮಗಳು ನಮ್ಮ ದಿನನಿತ್ಯದ ಚಟುವಟಿಕೆಗಳಲ್ಲಿ ದಾರಿದೀಪವಾಗಲಿಯೆಂದು ಅನುಕ-2025 ರ ವತಿಯಿಂದ ವಿದ್ಯಾರ್ಥಿಗಳಿಗೆ ನಡೆಯುವ ಸ್ಪರ್ಧೆಗಳಿಗೆ ಶುಭಹಾರೈಸಿದರು.


ಮುಖ್ಯ ಅಥಿತಿಗಳಾಗಿ ಅನುಗ್ರಹ ಕಾಲೇಜಿನ ಹಳೇ ವಿದ್ಯಾರ್ಥಿ ಎಸ್.ಡಿ.ಎಂ ಪದವಿ ಕಾಲೇಜಿನ ವ್ಯವಹಾರಿಕ ಆಡಳಿತ ವಿಭಾಗದ ಸಹಾಯಕ ಪ್ರಾಧ್ಯಾಪಕ ಶರಸ್ಚಂದ್ರ ಕೆ.ಎಸ್ ಮಾತನಾಡಿ ವಿದ್ಯಾರ್ಥಿಗಳು ತಾವು ಪಡೆದ ಅಂಕಗಳ ಜತೆಯಲ್ಲಿ ಜೀವನ ಕೌಶಲ್ಯವನ್ನು ಬೆಳೆಸಬೇಕು.ಸಾಮರ್ಥ್ಯವನ್ನು ಸರಿಯಾದ ರೀತಿಯಲ್ಲಿ ಸದುಪಯೋಗ ಮಾಡಬೇಕು.ಎಂದು ಹೇಳಿ ಕಾಲೇಜಿನ ವಾಣಿಜ್ಯ ವಿಭಾಗದ ಚಟುವಟಿಕೆಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದರು

ವೇದಿಕೆಯಲ್ಲಿ ವಾಣಿಜ್ಯ ವಿಭಾಗದ ಉಪನ್ಯಾಸಕಿ ಶ್ರೀಮತಿ ಕಾವ್ಯಶ್ರೀ, ಕಾರ್ಯದರ್ಶಿ ಮಾರ್ಕ್ ಉಪಸ್ಥಿತರಿದ್ದರು. ನಂತರ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ನಡೆಸಲಾಯಿತು. ವಿದ್ಯಾರ್ಥಿ ನೀರಜ್ ಕಾರ್ಯಕ್ರಮ ನಿರೂಪಿಸಿದರು.ಅಸ್ಮಿತ್ ಲೋಬೋ ಸ್ವಾಗತಿಸಿ ಮಾರ್ಕ್ ವಂದಿಸಿದರು.

Related posts

ವೇಣೂರು ಭಗವಾನ್ ಶ್ರೀ ಬಾಹುಬಲಿಗೆ ಮಹಾ ಮಸ್ತಕಾಭಿಷೇಕ: ಮೂಡಬಿದ್ರೆ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಹಾಗೂ ಅಳದಂಗಡಿ ಅರಸರ ಉಪಸ್ಥಿತಿಯಲ್ಲಿ ಚಪ್ಪರ ಮುಹೂರ್ತ

Suddi Udaya

ಕೊಕ್ಕಡ: ಮಿಯಾವಕಿ ಅರಣ್ಯೀಕರಣ ಗಿಡನಾಟಿ ಕಾರ್ಯಕ್ರಮ

Suddi Udaya

ಜು.30: ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಕಣಿಯೂರು ಗ್ರಾ. ಪಂ. ನ ಸದಸ್ಯ ಪ್ರವೀಣ್ ಗೌಡ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ನಡೆದ ಹಲ್ಲೆಯನ್ನು ಖಂಡಿಸಿ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸುವಂತೆ ಬೃಹತ್ ಪ್ರತಿಭಟನೆ

Suddi Udaya

ಬೆಂಗಳೂರು ಜೈ ತುಲುನಾಡ್ ನೇತೃತ್ವದಲ್ಲಿ ತುಲುನಾಡ ಆಟಿ: ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭಾಗಿ

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ. ಶಾಲೆಯಲ್ಲಿ ಎಲ್ ಕೆ ಜಿ ಮತ್ತು ಯುಕೆಜಿ ಮಕ್ಕಳ ರೆಡ್ ಕಲರ್ ಸಂಭ್ರಮ

Suddi Udaya

ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಗುರುವಾಯನಕೆರೆಯ ಕೆರೆ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!