July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ರೋಟರಿ ಕ್ಲಬ್ ನಿಂದ ಸರಕಾರಿ ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ರೂ.10 ಲಕ್ಷ ವಿದ್ಯಾರ್ಥಿ ವೇತನ

ಬೆಳ್ತಂಗಡಿ ರೋಟರಿ ಕ್ಲಬ್ ಹಾಗೂ ಬೆಂಗಳೂರು ರೋಟರಿ ಇಂದಿರಾ ನಗರ ಸಹಭಾಗಿತ್ವದಲ್ಲಿ ರೂ. 10,80,000/- ವಿದ್ಯಾರ್ಥಿ ವೇತನವನ್ನು, ಬೆಳ್ತಂಗಡಿ ತಾಲೂಕಿನ 270 ಅರ್ಹ ಪಿಯು ವಿದ್ಯಾರ್ಥಿಗಳಿಗೆ ತಲಾ ರೂ 4000/-ದಂತೆ ನೀಡಲಿದೆ.

ಈ 10,80,000/- ಮೊತ್ತದಲ್ಲಿ, ಬೆಂಗಳೂರು ರೋಟರೀ ಇಂದಿರಾ ನಗರದ ಕೊಡುಗೆ 8,10,000/-, ರೋಟರೀ ಕ್ಲಬ್ ಬೆಳ್ತಂಗಡಿ ಕೊಡುಗೆ 1,70,000/-, ಮತ್ತು ಕೃಷ್ಣ ಪಡ್ವೆಟ್ನಾಯ ಪ್ರತಿಷ್ಠಾನ (ರಿ) ಕೊಡುಗೆ ರೂ. ಒಂದು ಲಕ್ಷ ಇರಲಿದೆ.


ನ.25 ರಂದು ರೋಟರೀ ಭವನದಲ್ಲಿ ನಡೆಯಲಿರುವ ವಿದ್ಯಾರ್ಥಿ ವೇತನ ವಿತರಣ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ತಂಗಡಿ ರೋಟರಿ ಕ್ಲಬ್ ನ ಅಧ್ಯಕ್ಷ ಪ್ರೊ. ಪ್ರಕಾಶ ಪ್ರಭುಗಳು ವಹಿಸಲಿರುವರು. ಉದ್ಘಾಟನೆಯನ್ನು ಬೆಂಗಳೂರು ರೋಟರಿ ಇಂದಿರಾನಗರದ ಮಾಜಿ ಅಧ್ಯಕ್ಷ ರೋ. ಜಗದೀಶ ಮುಗುಳಿ ಮಾಡಲಿರುವರು. ಕೃಷ್ಣ ಪಡ್ವೆಟ್ನಾಯ ಪ್ರತಿಷ್ಠಾನ ಇದರ ಅಧ್ಯಕ್ಷ ಶ್ರೀಧರ ಪಡ್ವೆಟ್ನಾಯ, ರೋಟರಿ ಜಿಲ್ಲೆ 3181 ಇದರ ಮುಂದಿನ ವರ್ಷದ ಜಿಲ್ಲಾಧ್ಯಕ್ಷ ರೊ. ಸತೀಶ್ ಬೋಳಾರರು ಮುಖ್ಯ ಅತಿಥಿಗಳಾಗಿಯೂ, ಉಜಿರೆ ಸಂಧ್ಯಾ ಫ್ರೆಶ್ ಮಾಲಕ ರಾಜೇಶ ಪೈ, ಅಸಿಸ್ಟೆಂಟ್ ಗವರ್ನರ್ ರೊ. ಡಾ ಎ.ಜಯಕುಮಾರ ಶೆಟ್ಟಿ, ವಲಯ ಸೇನಾನಿ ರೊ. ಸುರೇಶ ಸಾಲಿಯಾನ್, ರೋಟರಿ ಸೇವಾ ಟ್ರಸ್ಟ್ ಅಧ್ಯಕ್ಷ ರೋ. ಶ್ರೀಕಾಂತ ಕಾಮತ್, ಸ್ಕಾಲರ್ ಶಿಪ್ ಸಮಿತಿಯ ಚೆಯರ್ ಮ್ಯಾನ್ ರೊ. ಅಬೂಬಕ್ಕರ್ ಯು.ಎಚ್ ಇವರು ಗೌರವ ಅತಿಥಿಗಳಾಗಿ ಭಾಗವಹಿಸಲಿರುವರು ಎಂದು ತಮ್ಮ ಪ್ರಕಟಣೆಯಲ್ಲಿ ಪ್ರೊ. ಪ್ರಕಾಶ ಪ್ರಭು ತಿಳಿಸಿದ್ದಾರೆ.

Related posts

ಕುಣಿತ ಭಜನಾ ತರಬೇತಿ ಶಿಬಿರಕ್ಕೆ ಭಜನಾ ಪರಿಷತ್ ರಾಜ್ಯಾಧ್ಯಕ್ಷರ ಭೇಟಿ

Suddi Udaya

ಗುರುವಾಯನಕೆರೆ ಗೆಳೆಯರ ಬಳಗ 35 ನೇ ವರ್ಷದ ಶಾರದೋತ್ಸವ ಆರಂಭ

Suddi Udaya

ಬೆಳ್ತಂಗಡಿ ಬಿಜೆಪಿ ಕಚೇರಿಯಲ್ಲಿ ಕಾರ್ಯಕಾರಿಣಿ ಸಭೆ: ಮಾ.30 ರಂದು ಬಿಜೆಪಿ ಬೆಳ್ತಂಗಡಿ ಮಂಡಲ ಪದಾಧಿಕಾರಿಗಳ ಪದಗ್ರಹಣ

Suddi Udaya

ಬೆಳ್ತಂಗಡಿ ಆನ್ ಸಿಲ್ಕ್ ಆಷಾಢ ಬಂಪರ್ ಸೇಲ್ ಕೆಲ ದಿನಗಳವರೆಗೆ ವಿಸ್ತರಣೆ: ಶೇ.50 ಖರೀದಿಗಾಗಿ ಜನರ ಬಾರಿ ಬೆಂಬಲ

Suddi Udaya

ಪುದುವೆಟ್ಟು ನಿಡ್ವಾಳ ಶ್ರೀ ಪಾರ್ಶ್ವನಾಥ ಸ್ವಾಮಿ ಬಸದಿಯ ಸಂಪರ್ಕ ರಸ್ತೆಗೆ ಅನುದಾನ ನೀಡಿ ಅಭಿವೃದ್ದಿ ಪಡಿಸುವಂತೆ ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya

ಇಂದಬೆಟ್ಟು ಟೀಮ್ ದೇವನಾರಿ ವತಿಯಿಂದ ದೇವನಾರಿ ಸ.ಹಿ.ಪ್ರಾ. ಶಾಲೆಗೆ ಉಚಿತ ಪುಸ್ತಕ ವಿತರಣೆ

Suddi Udaya
error: Content is protected !!