38.6 C
ಪುತ್ತೂರು, ಬೆಳ್ತಂಗಡಿ
March 6, 2026
ಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅನುಗ್ರಹ ಕಾಲೇಜಿನಲ್ಲಿ ಅನುಕ-2025 ರ ಉದ್ಘಾಟನೆ

ಉಜಿರೆ: ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ ಅನುಕ-2025ರ ಉದ್ಘಾಟನೆಯು ಕಾಲೇಜಿನ ಆಡಿಟೋರಿಯಮ್‌ನಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜಿನ ಪ್ರಾಂಶುಪಾಲರಾದ ವಂ.ಫಾ.ವಿಜಯ್ ಲೋಬೋ ದೀಪ ಬೆಳಗಿಸುವುದರ ಮೂಲಕ ನೆರವೇರಿಸಿ ಆಧುನಿಕ ಯುಗದಲ್ಲಿ ವಾಣಿಜ್ಯ ವಿಭಾಗದ ಮಹತ್ವವನ್ನು ತಿಳಿಸಿ ಇಂತಹ ಕಾರ್ಯಕ್ರಮಗಳು ನಮ್ಮ ದಿನನಿತ್ಯದ ಚಟುವಟಿಕೆಗಳಲ್ಲಿ ದಾರಿದೀಪವಾಗಲಿಯೆಂದು ಅನುಕ-2025 ರ ವತಿಯಿಂದ ವಿದ್ಯಾರ್ಥಿಗಳಿಗೆ ನಡೆಯುವ ಸ್ಪರ್ಧೆಗಳಿಗೆ ಶುಭಹಾರೈಸಿದರು.


ಮುಖ್ಯ ಅಥಿತಿಗಳಾಗಿ ಅನುಗ್ರಹ ಕಾಲೇಜಿನ ಹಳೇ ವಿದ್ಯಾರ್ಥಿ ಎಸ್.ಡಿ.ಎಂ ಪದವಿ ಕಾಲೇಜಿನ ವ್ಯವಹಾರಿಕ ಆಡಳಿತ ವಿಭಾಗದ ಸಹಾಯಕ ಪ್ರಾಧ್ಯಾಪಕ ಶರಸ್ಚಂದ್ರ ಕೆ.ಎಸ್ ಮಾತನಾಡಿ ವಿದ್ಯಾರ್ಥಿಗಳು ತಾವು ಪಡೆದ ಅಂಕಗಳ ಜತೆಯಲ್ಲಿ ಜೀವನ ಕೌಶಲ್ಯವನ್ನು ಬೆಳೆಸಬೇಕು.ಸಾಮರ್ಥ್ಯವನ್ನು ಸರಿಯಾದ ರೀತಿಯಲ್ಲಿ ಸದುಪಯೋಗ ಮಾಡಬೇಕು.ಎಂದು ಹೇಳಿ ಕಾಲೇಜಿನ ವಾಣಿಜ್ಯ ವಿಭಾಗದ ಚಟುವಟಿಕೆಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದರು

ವೇದಿಕೆಯಲ್ಲಿ ವಾಣಿಜ್ಯ ವಿಭಾಗದ ಉಪನ್ಯಾಸಕಿ ಶ್ರೀಮತಿ ಕಾವ್ಯಶ್ರೀ, ಕಾರ್ಯದರ್ಶಿ ಮಾರ್ಕ್ ಉಪಸ್ಥಿತರಿದ್ದರು. ನಂತರ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ನಡೆಸಲಾಯಿತು. ವಿದ್ಯಾರ್ಥಿ ನೀರಜ್ ಕಾರ್ಯಕ್ರಮ ನಿರೂಪಿಸಿದರು.ಅಸ್ಮಿತ್ ಲೋಬೋ ಸ್ವಾಗತಿಸಿ ಮಾರ್ಕ್ ವಂದಿಸಿದರು.

Related posts

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಕುವೆಟ್ಟು: ಸ.ಉ.ಹಿ. ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲೆ ಕಾರ್ಯಕ್ರಮ ಹಾಗೂ ಬೀಳ್ಕೊಡುಗೆ ಸಮಾರಂಭ

Suddi Udaya

ಆಮಂತ್ರಣ ಸೇವಾ ಪ್ರತಿಷ್ಠಾನದ ಗೌರವಾಧ್ಯಕ್ಷರಾಗಿ ಶಿವಪ್ರಸಾದ್ ಅಜಿಲ

Suddi Udaya

ಕುಣಿತ ಭಜನಾ ತರಬೇತಿಗೆ ನೂತನ ಸದಸ್ಯರುಗಳ ಸೇರ್ಪಡೆ ಕಾರ್ಯಕ್ರಮ

Suddi Udaya

ವೇಣೂರು ದೇವಾಡಿಗರ ಸೇವಾ ವೇದಿಕೆಯ ವತಿಯಿಂದ ಸಾಧಕರಿಗೆ ಸನ್ಮಾನ , ಅಭಿನಂದನೆ, ಪ್ರತಿಭಾ ಪುರಸ್ಕಾರ ಹಾಗೂ ಖಾಯಂ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಕಡಿರುದ್ಯಾವರ ಗ್ರಾಮ ಪಂಚಾಯತ್ ಗ್ರಾಮಸಭೆ

Suddi Udaya
error: Content is protected !!