ಉಜಿರೆ: ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ ಅನುಕ-2025ರ ಉದ್ಘಾಟನೆಯು ಕಾಲೇಜಿನ ಆಡಿಟೋರಿಯಮ್ನಲ್ಲಿ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜಿನ ಪ್ರಾಂಶುಪಾಲರಾದ ವಂ.ಫಾ.ವಿಜಯ್ ಲೋಬೋ ದೀಪ ಬೆಳಗಿಸುವುದರ ಮೂಲಕ ನೆರವೇರಿಸಿ ಆಧುನಿಕ ಯುಗದಲ್ಲಿ ವಾಣಿಜ್ಯ ವಿಭಾಗದ ಮಹತ್ವವನ್ನು ತಿಳಿಸಿ ಇಂತಹ ಕಾರ್ಯಕ್ರಮಗಳು ನಮ್ಮ ದಿನನಿತ್ಯದ ಚಟುವಟಿಕೆಗಳಲ್ಲಿ ದಾರಿದೀಪವಾಗಲಿಯೆಂದು ಅನುಕ-2025 ರ ವತಿಯಿಂದ ವಿದ್ಯಾರ್ಥಿಗಳಿಗೆ ನಡೆಯುವ ಸ್ಪರ್ಧೆಗಳಿಗೆ ಶುಭಹಾರೈಸಿದರು.
ಮುಖ್ಯ ಅಥಿತಿಗಳಾಗಿ ಅನುಗ್ರಹ ಕಾಲೇಜಿನ ಹಳೇ ವಿದ್ಯಾರ್ಥಿ ಎಸ್.ಡಿ.ಎಂ ಪದವಿ ಕಾಲೇಜಿನ ವ್ಯವಹಾರಿಕ ಆಡಳಿತ ವಿಭಾಗದ ಸಹಾಯಕ ಪ್ರಾಧ್ಯಾಪಕ ಶರಸ್ಚಂದ್ರ ಕೆ.ಎಸ್ ಮಾತನಾಡಿ ವಿದ್ಯಾರ್ಥಿಗಳು ತಾವು ಪಡೆದ ಅಂಕಗಳ ಜತೆಯಲ್ಲಿ ಜೀವನ ಕೌಶಲ್ಯವನ್ನು ಬೆಳೆಸಬೇಕು.ಸಾಮರ್ಥ್ಯವನ್ನು ಸರಿಯಾದ ರೀತಿಯಲ್ಲಿ ಸದುಪಯೋಗ ಮಾಡಬೇಕು.ಎಂದು ಹೇಳಿ ಕಾಲೇಜಿನ ವಾಣಿಜ್ಯ ವಿಭಾಗದ ಚಟುವಟಿಕೆಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದರು
ವೇದಿಕೆಯಲ್ಲಿ ವಾಣಿಜ್ಯ ವಿಭಾಗದ ಉಪನ್ಯಾಸಕಿ ಶ್ರೀಮತಿ ಕಾವ್ಯಶ್ರೀ, ಕಾರ್ಯದರ್ಶಿ ಮಾರ್ಕ್ ಉಪಸ್ಥಿತರಿದ್ದರು. ನಂತರ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ನಡೆಸಲಾಯಿತು. ವಿದ್ಯಾರ್ಥಿ ನೀರಜ್ ಕಾರ್ಯಕ್ರಮ ನಿರೂಪಿಸಿದರು.ಅಸ್ಮಿತ್ ಲೋಬೋ ಸ್ವಾಗತಿಸಿ ಮಾರ್ಕ್ ವಂದಿಸಿದರು.











