22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್ ಪಿ ವೈ ಎಸ್ ಎಸ್ ನಿಂದ ಮಾತೃವಂದನ, ಮಾತೃಧ್ಯಾನ, ಮಾತೃ ಭೋಜನ ಕಾರ್ಯಕ್ರಮ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾಭವನ ಶಾಖೆ, ಇಲ್ಲಿ ನಡೆಯುತ್ತಿರುವ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಯೋಗ ತರಗತಿಯಲ್ಲಿ ಮಾತೃವಂದನ, ಮಾತೃಧ್ಯಾನ ಮಾತೃ ಭೋಜನ ಕಾರ್ಯಕ್ರಮವು ವಿಜೃಂಭಣೆಯಿಂದ ಜರುಗಿತು.

ಕಾರ್ಯಕ್ರಮದಲ್ಲಿ ಸಭಾಧ್ಯಕ್ಷತೆಯನ್ನು ಯೋಗ ತರಗತಿಯ ಸಹ ಶಿಕ್ಷಕರಾದ ಶ್ರೀಮತಿ ಕೋಮಲ ಪ್ರಕಾಶ್ ವಹಿಸಿದ್ದು ಅಮ್ಮನ ಪ್ರೀತಿಯ ಬಗ್ಗೆ ಮಾತನಾಡಿದರು. ಮುಖ್ಯ ಅಭ್ಯಾಗತರಾಗಿ ಸಮಾಜ ಮಂದಿರ ಬಿಲ್ಡಿಂಗ್ ಸೊಸೈಟಿ, ಬೆಳ್ತಂಗಡಿ ಇದರ ಸದಸ್ಯರಾದ ಶ್ರೀಮತಿ ಲೋಕೇಶ್ವರಿ ವಿನಯಚಂದ್ರ ಇವರು ತಮ್ಮ ಬಾಲ್ಯದ ದಿನಗಳನ್ನು ನೆನಪಿಸುತ್ತ ಜೀವನದಲ್ಲಿ ಮಾತೃಪ್ರೇಮದ ಮಹತ್ವವನ್ನು ಕೊಂಡಾಡಿದರು.

ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಜಿಲ್ಲಾ ಸಹ ಸಂಚಾಲಕ ಲೋಕೇಶ್ ಪೊಳಲಿ ಇವರು ಕಾರ್ಯಕ್ರಮದ ಪ್ರಸ್ತಾವನೆಯನ್ನು ಮಾಡಿ ಮಾತೃಧ್ಯಾನವನ್ನು ಮಾಡಿಸಿದರು. ಸುಮಾರು 400 ಮಂದಿ ಯೋಗ ಬಂಧುಗಳು ಹಾಗೂ ಯೋಗೇತರ ಬಂಧುಗಳು ಈ ಭಾವನಾತ್ಮಕ ಕ್ಷಣಗಳಿಗೆ ಸಾಕ್ಷಿಯಾದರು. ಹಣತೆಯ ಬೆಳಕಿನಲ್ಲಿ ಮಾತೃ- ಪಿತೃಗಳ ಸ್ವರೂಪವನ್ನು ಧ್ಯಾನಿಸಿ ನಮ್ಮ ಜೀವನದಲ್ಲಿ ಅವರ ಪಾತ್ರ, ಪ್ರೀತಿ ,ಮಹತ್ವ ತಿಳಿಸುತ್ತಾ ಎಲ್ಲರ ಕಣ್ಣಂಚು ಒದ್ದೆಯಾದ ಆ ಅಪೂರ್ವ ಕ್ಷಣವನ್ನು ಅವಿಸ್ಮರಣೀಯವಾಗಿಸಿದ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯು ಸಂಸ್ಕಾರ- ಸಂಘಟನೆ- ಸೇವೆ ಎಂಬ ಧ್ಯೇಯವನ್ನು ಇಟ್ಟುಕೊಂಡು ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಯೋಗವನ್ನು ತಲುಪಿಸುವ ಕಾರ್ಯವನ್ನು ಮಾಡುತ್ತಿದೆ. ಪುತ್ತೂರು ತಾಲೂಕು ಸಂಚಾಲಕರಾದ ಕೃಷ್ಣಾನಂದ ನವರು ಎಲ್ಲಾ ಯೋಗಬಂಧುಗಳಿಗೆ ವಿವಿಧ ಮನೋಲ್ಲಾಸದ ಆಟಗಳನ್ನಾಡಿಸಿ, ನಗುವೇ ಯೋಗದ ಮೂಲಕ ಎಲ್ಲರನ್ನು ನಕ್ಕುನಗಿಸಿದರು.

ಕಾರ್ಯಕ್ರಮದಲ್ಲಿ ಯೋಗ ತರಗತಿಯ ಮುಖ್ಯ ಶಿಕ್ಷಕರಾದ ಶ್ರೀಮತಿ ಪ್ರೇಮಲತಾ ಗಣೇಶ್ ಹಾಗೂ ಸಹ ಶಿಕ್ಷಕರಾದ ಸುಕೇಶ್ ಗೇರುಕಟ್ಟೆ, ಸಂತೋಷ್ ಕಾಪಿನಡ್ಕ, ಗಣೇಶ್ ಪ್ರಸಾದ್ ಬೆಳ್ತಂಗಡಿ, ಶಶಿಕಲಾ ವಿಶ್ವನಾಥ್, ಎಸ್ ಪಿ ವೈ ಎಸ್ ಎಸ್ ನ ಪುತ್ತೂರು ತಾಲೂಕು ಸಂಚಾಲಕರಾದ ಕೃಷ್ಣಾನಂದ ಹಾಗೂ ಇತರ ಪ್ರಮುಖರು ಉಪಸ್ಥಿತರಿದ್ದರು.

Related posts

ಬಿಷಪ್ ಲಾರೆನ್ಸ್ ಮುಕ್ಕುಯಿರವರಿಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಗೌರವಾಭಿನಂದನೆ

Suddi Udaya

ಕಲ್ಮಂಜ: ಓಂಕಾರೇಶ್ವರ ಭಜನಾ ಮಂಡಳಿ ಶ್ರೀ ಕ್ಷೇತ್ರ ಪಜಿರಡ್ಕ ಇದರ ಆಶ್ರಯದಲ್ಲಿ 12ನೇ ವರ್ಷದ ಗೋಕುಲಾಷ್ಟಮಿ

Suddi Udaya

ಉಜಿರೆ ಎಸ್ ಡಿ.ಎಂ.ಕಾಲೇಜು ಎನ್.ಎಸ್.ಎಸ್. ಘಟಕಕ್ಕೆ ರಾಜ್ಯ ಪ್ರಶಸ್ತಿ

Suddi Udaya

ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ ಕಚೇರಿಗೆ ಅಮೆರಿಕದ ಪೆನ್ಸಿಲ್ವೇನಿಯ ವಿಶ್ವವಿದ್ಯಾಲಯದ ಅಧ್ಯಯನ ತಂಡ ಭೇಟಿ

Suddi Udaya

ಬೆಳ್ತಂಗಡಿ ಲಿಯೋ ಕ್ಲಬ್ ಗೆ ‘ಉದಯೋನ್ಮುಖ ನಕ್ಷತ್ರ’ ಅವಾರ್ಡ್

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್‌ ಸುವರ್ಣ ವರ್ಷಾಚರಣೆ; 50 ವಿಶಿಷ್ಟ ಕಾರ್ಯಕ್ರಮಗಳು, ಲಯನ್ಸ್ ಭವನ ನವೀಕರಣಕ್ಕೆ ನಿರ್ಧಾರ

Suddi Udaya
error: Content is protected !!