July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದ ನೂತನ ರಾಜಗೋಪುರ ಹಾಗೂ ಶ್ರೀ ದುರ್ಗಾಗಣೇಶ ಸಭಾಭವನದ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಉರುವಾಲು ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದ ನೂತನ ರಾಜಗೋಪುರ ಹಾಗೂ ಶ್ರೀ ದುರ್ಗಾಗಣೇಶ ಸಭಾಭವನದ ಲೋಕಾರ್ಪಣೆ ಹಾಗೂ ಅಥರ್ವ ಶೀರ್ಷ ಗಣಯಾಗ ಹಾಗೂ ಮಹಾಚಂಡಿಕಾ ಯಾಗವು ಡಿ.6,7,8 ರಂದು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆ ಬಿಡುಗಡೆಯು ನ.18ರಂದು ಶಶಿಧರ ಶೆಟ್ಟಿ ಬರೋಡ ರವರ ಮನೆಯಲ್ಲಿ ಜರುಗಿತು.

ಆಮಂತ್ರಣ ಪತ್ರಿಕೆಯನ್ನು ಶ್ರೀ ಗಣೇಶ ಭಜನಾ ಮಂಡಳಿ ಅಧ್ಯಕ್ಷ ಶಶಿಧರ ಶೆಟ್ಟಿ ಬರೋಡಾ ರವರು ಬಿಡುಗಡೆಗೊಳಿಸಿ ಶುಭಹಾರೈಸಿದರು.

ಈ ವೇಳೆ ಶಾಸಕ ಹರೀಶ್ ಪೂಂಜ, ಕೊರಿಂಜ ಪಂಚಲಿಂಗೇಶ್ವರ ದೇವಸ್ಥಾನ ಮೊಕ್ತೇಸರರು ಯೋಗೀಶ್ ಪೂಜಾರಿ ಕಡ್ತಿಲ, ಶ್ರೀ ಗಣೇಶ ಭಜನಾ ಮಂಡಳಿ ಟ್ರಸ್ಟ್ ಅಧ್ಯಕ್ಷ ರೋಹಿತ ಶೆಟ್ಟಿ ಪಿ. ಕುಪ್ಪೆಟ್ಟಿ, ನಟ್ಟಬೈಲು ಶ್ರೀ ರಾಮ ವಿದ್ಯಾಕೇಂದ್ರ ಅಧ್ಯಕ್ಷ ಸುನಿಲ್ ಅಣವು, ಶ್ರೀ ಗಣೇಶ ಭಜನಾ ಮಂಡಳಿ ಟ್ರಸ್ಟಿ ರಮೇಶ ಗೌಡ, ಉರುವಾಲು ಬೂತ್ ಸಮಿತಿ ಅಧ್ಯಕ್ಷ ಪ್ರವೀಣ್ ಶೆಟ್ಟಿ ಮುಂಡ್ರೋಟ್ಟು, ಶ್ರೀ ಗಣೇಶ ಭಜನಾ ಮಂಡಳಿ ಟ್ರಸ್ಟಿ ಜಯರಾಮ ನಾಯ್ಕ್ ಹಲೇಜಿ, ಕುಪ್ಪೆಟ್ಟಿ ಗಣೇಶೋತ್ಸವ ಸಮಿತಿ ಅಧ್ಯಕ್ಷ ಪ್ರಸಾದ್ ಪೂಂಜ ಬರಮೇಲು, ಆರ್ಥಿಕ ಸಮಿತಿ ಮತ್ತು ಅನ್ನದಾನ ಸಮಿತಿಯ ಸಂಚಾಲಕ ಪ್ರಭಾಕರ ಗೌಡ ಪೋಸಂತೋಡಿ, ಜನಾರ್ಧನ ಗೌಡ ಬೇಂಗೈ, ಶ್ರೀ ಗಣೇಶ ಭಜನಾ ಮಂಡಳಿ ಟ್ರಸ್ಟಿ ಪುರುಷೋತ್ತಮ ಪೂಜಾರಿ ಉಪಸ್ಥಿತರಿದ್ದರು.

Related posts

ಡಿ.26 ವಿದ್ಯುತ್ ನಿಲುಗಡೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ಪದಗ್ರಹಣ

Suddi Udaya

ನಾರಾವಿ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಸರಣಿ ಕಳ್ಳತನಗೈಯ್ಯುತ್ತಿದ್ದ ಅಂತರ್ ಜಿಲ್ಲಾ ಕಳ್ಳನ ಬಂಧನ: ಕಾರ್ಕಳ ತಾಲೂಕು ನಿಟ್ಟೆ ಅಜ್ಜೊಟ್ಟು ನಿವಾಸಿ ಸುರೇಶ ಕೆ ಪೂಜಾರಿ ಬಂಧಿತ ಆರೋಪಿ

Suddi Udaya

ನವರಾತ್ರಿಯ ಸಂದರ್ಭದಲ್ಲಿ ಯಾವುದೇ ಗೊಂದಲಗಳು ಉಂಟಾಗದಂತೆ ಮುನ್ನೆಚ್ಚರಿಕೆಯಾಗಿ ಕ್ಷಿಪ್ರ ಕಾರ್ಯಪಡೆಯ ಸಿಬ್ಬಂದಿಗಳಿಂದ ಬೆಳ್ತಂಗಡಿಯಲ್ಲಿ ಪಥಸಂಚಲನ

Suddi Udaya

ಸೌಜನ್ಯಳ ಅತ್ಯಾಚಾರ, ಕೊಲೆ ಪ್ರಕರಣದ ಎಸ್ .ಐ.ಟಿ ತನಿಖೆಗೆ ಆಗ್ರಹ: ಬೆಳ್ತಂಗಡಿ ತಾಲೂಕು ಕಚೇರಿ ಎದುರು ಮಹಾಧರಣಿ ಆರಂಭ

Suddi Udaya
error: Content is protected !!