ಪುಂಜಾಲಕಟ್ಟೆ ವಲಯದ ಉಳಿ ಯುವಕ ಮಂಡಲ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಇದರ ಸಹಕಾರದಿಂದ ಪರ್ಯಾಯ ಶ್ರೀ ಪುತ್ತಿಗೆ ಮಠ ಉಡುಪಿ ಇಲ್ಲಿನ ವಿಶ್ವಗೀತಾ ಪರ್ಯಾಯ 2024-2026 ಇದರ ಗೀತೋತ್ಸವ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳ ಭಜನಾ ಕಮ್ಮಟದ ಹಿರಿಯ ಸಂಪನ್ಮೂಲ ವ್ಯಕ್ತಿ ಸಂಗೀತ ವಿದುಷಿ ಶ್ರೀಮತಿ ಉಷಾ ಹೆಬ್ಬಾರ್ ಮಣಿಪಾಲ ಇವರಿಂದ ಉಳಿ ಯುವಕ ಮಂಡಲದ ಸಭಾಂಗಣದಲ್ಲಿ ಭಜನಾ ತರಬೇತಿ ಕಾರ್ಯಗಾರ ನಡೆಯಿತು.

ತಾಲೂಕಿನ 7 ಭಜನಾ ಮಂಡಳಿಯ ಸುಮಾರು 250 ಭಜಕರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಭಜನೆ ಮಂಡಳಿಗಳಿಗೆ ಭಜನೆ ತರಬೇತಿ ನೀಡಲಾಯಿತು. ಈ ತರಬೇತಿ ಕಾರ್ಯಗಾರದಲ್ಲಿ ಶ್ರೀಮತಿ ಸಾವಿತ್ರಿ ಮೇಡಂ, ಭಜನಾ ತರಬೇತುದಾರರಾದ ಸಂದೇಶ್ ಮದ್ದಡ್ಕ, ಭಜನಾ ಪರಿಷತ್ ನ ಜಿಲ್ಲಾ ಸಮನ್ವಯಧಿಕಾರಿ ಸಂತೋಷ್ ಪಿ ಅಳಿಯೂರು, ಭಜನಾ ತರಬೇತುದಾರರು, ಉಳಿ ಯುವಕ ಮಂಡಲದ ಕಾರ್ಯದರ್ಶಿ ರಾಜ್ ಕುಮಾರ್, ಕೇಂದ್ರ ಒಕ್ಕೂಟದ ಅಧ್ಯಕ್ಷರು ಚಿದಾನಂದ ರೈ ಕಕ್ಯ,ವಲಯ ಮೇಲ್ವಿಚಾರಕಿ ಶ್ರೀಮತಿ ಸವಿತಾ, ಸೇವಾಪ್ರತಿನಿಧಿ ಶೇಖರ್ ಉಷಾ ಸುಧಾ ಕುಸುಮ ಹಾಗೂ ಭಜನೆ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.
ಸಂತೋಷ್ ಕಾರ್ಯಕ್ರಮದ ನಿರೂಪಿಸಿ, ರಾಜ್ ಕುಮಾರ್ ದನ್ಯವಾದವಿತ್ತರು.











