July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ರೋಟರಿ ಕ್ಲಬ್ ನಿಂದ ಸರಕಾರಿ ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ರೂ.10 ಲಕ್ಷ ವಿದ್ಯಾರ್ಥಿ ವೇತನ

ಬೆಳ್ತಂಗಡಿ ರೋಟರಿ ಕ್ಲಬ್ ಹಾಗೂ ಬೆಂಗಳೂರು ರೋಟರಿ ಇಂದಿರಾ ನಗರ ಸಹಭಾಗಿತ್ವದಲ್ಲಿ ರೂ. 10,80,000/- ವಿದ್ಯಾರ್ಥಿ ವೇತನವನ್ನು, ಬೆಳ್ತಂಗಡಿ ತಾಲೂಕಿನ 270 ಅರ್ಹ ಪಿಯು ವಿದ್ಯಾರ್ಥಿಗಳಿಗೆ ತಲಾ ರೂ 4000/-ದಂತೆ ನೀಡಲಿದೆ.

ಈ 10,80,000/- ಮೊತ್ತದಲ್ಲಿ, ಬೆಂಗಳೂರು ರೋಟರೀ ಇಂದಿರಾ ನಗರದ ಕೊಡುಗೆ 8,10,000/-, ರೋಟರೀ ಕ್ಲಬ್ ಬೆಳ್ತಂಗಡಿ ಕೊಡುಗೆ 1,70,000/-, ಮತ್ತು ಕೃಷ್ಣ ಪಡ್ವೆಟ್ನಾಯ ಪ್ರತಿಷ್ಠಾನ (ರಿ) ಕೊಡುಗೆ ರೂ. ಒಂದು ಲಕ್ಷ ಇರಲಿದೆ.


ನ.25 ರಂದು ರೋಟರೀ ಭವನದಲ್ಲಿ ನಡೆಯಲಿರುವ ವಿದ್ಯಾರ್ಥಿ ವೇತನ ವಿತರಣ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ತಂಗಡಿ ರೋಟರಿ ಕ್ಲಬ್ ನ ಅಧ್ಯಕ್ಷ ಪ್ರೊ. ಪ್ರಕಾಶ ಪ್ರಭುಗಳು ವಹಿಸಲಿರುವರು. ಉದ್ಘಾಟನೆಯನ್ನು ಬೆಂಗಳೂರು ರೋಟರಿ ಇಂದಿರಾನಗರದ ಮಾಜಿ ಅಧ್ಯಕ್ಷ ರೋ. ಜಗದೀಶ ಮುಗುಳಿ ಮಾಡಲಿರುವರು. ಕೃಷ್ಣ ಪಡ್ವೆಟ್ನಾಯ ಪ್ರತಿಷ್ಠಾನ ಇದರ ಅಧ್ಯಕ್ಷ ಶ್ರೀಧರ ಪಡ್ವೆಟ್ನಾಯ, ರೋಟರಿ ಜಿಲ್ಲೆ 3181 ಇದರ ಮುಂದಿನ ವರ್ಷದ ಜಿಲ್ಲಾಧ್ಯಕ್ಷ ರೊ. ಸತೀಶ್ ಬೋಳಾರರು ಮುಖ್ಯ ಅತಿಥಿಗಳಾಗಿಯೂ, ಉಜಿರೆ ಸಂಧ್ಯಾ ಫ್ರೆಶ್ ಮಾಲಕ ರಾಜೇಶ ಪೈ, ಅಸಿಸ್ಟೆಂಟ್ ಗವರ್ನರ್ ರೊ. ಡಾ ಎ.ಜಯಕುಮಾರ ಶೆಟ್ಟಿ, ವಲಯ ಸೇನಾನಿ ರೊ. ಸುರೇಶ ಸಾಲಿಯಾನ್, ರೋಟರಿ ಸೇವಾ ಟ್ರಸ್ಟ್ ಅಧ್ಯಕ್ಷ ರೋ. ಶ್ರೀಕಾಂತ ಕಾಮತ್, ಸ್ಕಾಲರ್ ಶಿಪ್ ಸಮಿತಿಯ ಚೆಯರ್ ಮ್ಯಾನ್ ರೊ. ಅಬೂಬಕ್ಕರ್ ಯು.ಎಚ್ ಇವರು ಗೌರವ ಅತಿಥಿಗಳಾಗಿ ಭಾಗವಹಿಸಲಿರುವರು ಎಂದು ತಮ್ಮ ಪ್ರಕಟಣೆಯಲ್ಲಿ ಪ್ರೊ. ಪ್ರಕಾಶ ಪ್ರಭು ತಿಳಿಸಿದ್ದಾರೆ.

Related posts

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್‌ನಲ್ಲಿ ಆಟಿಡೊಂಜಿ ದಿನ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು: ಯಕ್ಷಗಾನ, ದೈವರಾಧನೆ, ನಾಟಕ, ನಾಟಿ ವ್ಯೆದ್ಯಕೀಯ, ಕಂಬಳ ಕ್ಷೇತ್ರದ ಸಾಧಕರಿಗೆ ಸನ್ಮಾನ

Suddi Udaya

ಶ್ರೀ ಶಿಶಿಲೇಶ್ವರ ದೇವಸ್ಥಾನದ ರಥಬೀದಿಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya

ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ವೇಣೂರು ಶಾಖೆಯಲ್ಲಿ ಈ ಸ್ಟಾಂಪಿಂಗ್ ಉದ್ಘಾಟನೆ

Suddi Udaya

ಪರಿಶಿಷ್ಠ ವರ್ಗದ ವಿದ್ಯಾರ್ಥಿಗಳಿಂದ ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿಗೆ ದಾಖಲಿಸಲು ಅರ್ಜಿ ಆಹ್ವಾನ

Suddi Udaya

ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆ ಮತ್ತು ರಾಜ ಕೇಸರಿ ಸಂಘಟನೆ ವತಿಯಿಂದ ಬೆಳ್ತಂಗಡಿ ಆಸ್ಪತ್ರೆಯ ಹೊರಾಂಗಣದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಕಲ್ಮಂಜ: 18ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮ

Suddi Udaya
error: Content is protected !!