23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ರೋಟರಿ ಕ್ಲಬ್ ನಿಂದ ಸರಕಾರಿ ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ರೂ.10 ಲಕ್ಷ ವಿದ್ಯಾರ್ಥಿ ವೇತನ

ಬೆಳ್ತಂಗಡಿ ರೋಟರಿ ಕ್ಲಬ್ ಹಾಗೂ ಬೆಂಗಳೂರು ರೋಟರಿ ಇಂದಿರಾ ನಗರ ಸಹಭಾಗಿತ್ವದಲ್ಲಿ ರೂ. 10,80,000/- ವಿದ್ಯಾರ್ಥಿ ವೇತನವನ್ನು, ಬೆಳ್ತಂಗಡಿ ತಾಲೂಕಿನ 270 ಅರ್ಹ ಪಿಯು ವಿದ್ಯಾರ್ಥಿಗಳಿಗೆ ತಲಾ ರೂ 4000/-ದಂತೆ ನೀಡಲಿದೆ.

ಈ 10,80,000/- ಮೊತ್ತದಲ್ಲಿ, ಬೆಂಗಳೂರು ರೋಟರೀ ಇಂದಿರಾ ನಗರದ ಕೊಡುಗೆ 8,10,000/-, ರೋಟರೀ ಕ್ಲಬ್ ಬೆಳ್ತಂಗಡಿ ಕೊಡುಗೆ 1,70,000/-, ಮತ್ತು ಕೃಷ್ಣ ಪಡ್ವೆಟ್ನಾಯ ಪ್ರತಿಷ್ಠಾನ (ರಿ) ಕೊಡುಗೆ ರೂ. ಒಂದು ಲಕ್ಷ ಇರಲಿದೆ.


ನ.25 ರಂದು ರೋಟರೀ ಭವನದಲ್ಲಿ ನಡೆಯಲಿರುವ ವಿದ್ಯಾರ್ಥಿ ವೇತನ ವಿತರಣ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ತಂಗಡಿ ರೋಟರಿ ಕ್ಲಬ್ ನ ಅಧ್ಯಕ್ಷ ಪ್ರೊ. ಪ್ರಕಾಶ ಪ್ರಭುಗಳು ವಹಿಸಲಿರುವರು. ಉದ್ಘಾಟನೆಯನ್ನು ಬೆಂಗಳೂರು ರೋಟರಿ ಇಂದಿರಾನಗರದ ಮಾಜಿ ಅಧ್ಯಕ್ಷ ರೋ. ಜಗದೀಶ ಮುಗುಳಿ ಮಾಡಲಿರುವರು. ಕೃಷ್ಣ ಪಡ್ವೆಟ್ನಾಯ ಪ್ರತಿಷ್ಠಾನ ಇದರ ಅಧ್ಯಕ್ಷ ಶ್ರೀಧರ ಪಡ್ವೆಟ್ನಾಯ, ರೋಟರಿ ಜಿಲ್ಲೆ 3181 ಇದರ ಮುಂದಿನ ವರ್ಷದ ಜಿಲ್ಲಾಧ್ಯಕ್ಷ ರೊ. ಸತೀಶ್ ಬೋಳಾರರು ಮುಖ್ಯ ಅತಿಥಿಗಳಾಗಿಯೂ, ಉಜಿರೆ ಸಂಧ್ಯಾ ಫ್ರೆಶ್ ಮಾಲಕ ರಾಜೇಶ ಪೈ, ಅಸಿಸ್ಟೆಂಟ್ ಗವರ್ನರ್ ರೊ. ಡಾ ಎ.ಜಯಕುಮಾರ ಶೆಟ್ಟಿ, ವಲಯ ಸೇನಾನಿ ರೊ. ಸುರೇಶ ಸಾಲಿಯಾನ್, ರೋಟರಿ ಸೇವಾ ಟ್ರಸ್ಟ್ ಅಧ್ಯಕ್ಷ ರೋ. ಶ್ರೀಕಾಂತ ಕಾಮತ್, ಸ್ಕಾಲರ್ ಶಿಪ್ ಸಮಿತಿಯ ಚೆಯರ್ ಮ್ಯಾನ್ ರೊ. ಅಬೂಬಕ್ಕರ್ ಯು.ಎಚ್ ಇವರು ಗೌರವ ಅತಿಥಿಗಳಾಗಿ ಭಾಗವಹಿಸಲಿರುವರು ಎಂದು ತಮ್ಮ ಪ್ರಕಟಣೆಯಲ್ಲಿ ಪ್ರೊ. ಪ್ರಕಾಶ ಪ್ರಭು ತಿಳಿಸಿದ್ದಾರೆ.

Related posts

ಉಜಿರೆ ಶ್ರೀ ಧ.ಮಂ. ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ಪಾದಯಾತ್ರಿಗಳಿಗೆ ಉಚಿತ ವೈದ್ಯಕೀಯ ಸೇವೆ: ಚಾರ್ಮಾಡಿ, ಮುಂಡಾಜೆ ಶಿಬಿರಗಳ ಉದ್ಘಾಟನೆ

Suddi Udaya

ಚಿಬಿದ್ರೆ: ಶತಾಯುಷಿ ಸೇಸು ನಿಧನ

Suddi Udaya

ಮಂಗಳೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಯುವ ಘಟಕ ಮಂಗಳೂರು ಕೋಶಾಧಿಕಾರಿಯಾಗಿ ಚೇತನ್ ಕೆಂಗುಡೇಲು

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ವಿವಿಧ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya

ಕ್ಷುಲ್ಲಕ ವಿಚಾರಕ್ಕೆ ಯುವಕನ ಮೇಲೆ ಜಾತಿ ನಿಂದನೆ, ಹಲ್ಲೆ ಪ್ರಕರಣ : ಆರೋಪಿ ಕರುಣಾಕರ ಗೌಡನಿಗೆ ನ್ಯಾಯಾಂಗ ಬಂಧನ

Suddi Udaya

ಸಾಮರಸ್ಯ ಸಾರಿದ ಮಂಗಳೂರು ದಸರಾ ಬೆಳ್ತಂಗಡಿ ಧರ್ಮಪ್ರಾಂತ್ಯದ ಬಿಷಪ್ ಹರ್ಷ

Suddi Udaya
error: Content is protected !!