ಮುಂಡಾಜೆ: “ಭಾರತೀಯರಾದ ನಾವು ಸ್ವದೇಶಿ ವಿಚಾರಧಾರೆಗಳನ್ನು ಅಳವಡಿಸಿಕೊಂಡು ಸ್ವದೇಶಿ ವಸ್ತುಗಳ ಬಳಕೆಯನ್ನು ಮಾಡುವುದರಿಂದ ಆತ್ಮ ನಿರ್ಭರ ಭಾರತದ ನಿರ್ಮಾಣ ಸಾಧ್ಯ” ಎಂದು ಮುಂಡಾಜೆ ಪದವಿ ಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕ ಸುಭಾಷ್ ಚಂದ್ರ ಜೈನ್ ಅಭಿಪ್ರಾಯ ಪಟ್ಟರು.
ಇವರು ಮುಂಡಾಜೆ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ರೋವರ್ಸ್ ರೇಂಜರ್ಸ್ ಘಟಕದ ವತಿಯಿಂದ ನಡೆಸಲ್ಪಟ್ಟ ಮಾಹಿತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಗೀತಾ ಮಾತನಾಡಿ ಸ್ವದೇಶಿ ವಸ್ತುಗಳ ಬಳಕೆಯ ಮಹತ್ವವನ್ನು ತಿಳಿಸಿದರು. ವೇದಿಕೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಕಾರ್ಯಕ್ರಮಾಧಿಕಾರಿ ಶ್ರೀಮತಿ ನಮಿತಾ ಕೆ ಆರ್, ರೇಂಜರ್ ಲೀಡರ್ ಶ್ರೀಮತಿ ವಸಂತಿ, ರೋವರ್ ಸ್ಕೌಟ್ ಲೀಡರ್ ಶ್ರೀಕೃಷ್ಣ ಕಿರಣ್ ಉಪಸ್ಥಿತರಿದ್ದರು. ಕುಮಾರಿ ಶ್ರಾವ್ಯ ಕಾರ್ಯಕ್ರಮದ ನಿರೂಪಣೆಯನ್ನು ಮಾಡಿದರು. ನಳಿನಿ ಸ್ವಾಗತಿಸಿ, ಗಿರೀಶ್ ಧನ್ಯವಾದಗೈದರು.











