26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ಮಡಂತ್ಯಾರಿನಲ್ಲಿ ನ. 17 ರಂದು ಮಕ್ಕಳ ದಿನಾಚರಣೆಯನ್ನು ಸೇಕ್ರೆಡ್ ಹಾರ್ಟ್ ಸಭಾಭವನದಲ್ಲಿ ಆಚರಿಸಲಾಯಿತು.

ಕಾರ್ಯಕ್ರಮವು ಪ್ರಾರ್ಥನಾ ವಿಧಿಯೊಂದಿಗೆ ಪ್ರಾರಂಭವಾಯಿತು. ಸಹಶಿಕ್ಷಕಿಯಾದ ಶ್ರೀಮತಿ ಮಲ್ಲಿಕಾರವರು ಮಕ್ಕಳ ದಿನಾಚರಣೆಯ ಮಹತ್ವವನ್ನು ವಿವರಿಸಿದರು. ಶಿಕ್ಷಕ-ಶಿಕ್ಷಕೇತರ ವೃಂದದವರು ಹಾಡು, ನೃತ್ಯ, ನಾಟಕದ ಮೂಲಕ ಮಕ್ಕಳನ್ನು ಮನರಂಜಿಸಿದರು.

ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಶಾಲಾ ಸಂಚಾಲಕರಾದ ವಂ|ಸ್ವಾ| ಸ್ಟ್ಯಾನಿ ಗೋವಿಯಸ್ ರವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸೈಂಟ್ ಸೆಬ್ಯಾಸ್ಟಿಯನ್ ಚರ್ಚ್ ಗರ್ಡಾಡಿಯ ಧರ್ಮ ಗುರುಗಳಾದ ವಂ|ಸ್ವಾ| ಮ್ಯಾಕ್ಸಿಮ್ ಪೀಟರ್ ಪಿಂಟೋ ರವರು ಆಗಮಿಸಿದ್ದರು ಅವರು ಮಕ್ಕಳನ್ನು ಉದ್ದೇಶಿಸಿ ಮಾತನಾಡಿ ವಿದ್ಯಾರ್ಥಿಗಳು ತಮ್ಮ ಹೆತ್ತವರನ್ನು ಮತ್ತು ಶಿಕ್ಷಕರನ್ನು ಗೌರವಿಸಬೇಕು ಎಂದು ಹೇಳಿ ಮಕ್ಕಳ ದಿನಾಚರಣೆಯ ಶುಭಾಶಯಗಳು ಕೋರಿದರು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ವಂ|ಸ್ವಾ| ದೀಪಕ್ ಲಿಯೊ ಡೇಸರವರು, ಸೇಕ್ರೆಡ್ ಹಾರ್ಟ್ ಚರ್ಚಿನ ಸಹಾಯಕ ಧರ್ಮ ಗುರುಗಳಾದ ವಂ|ಸ್ವಾ| ಲ್ಯಾರಿ ಪಿಂಟೋ, ಪುಂಜಾಲಕಟ್ಟೆ ವಲಯದ ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳಾದ ಶ್ರೀಮತಿ ಚೇತನ, ಶಿಕ್ಷಕರಕ್ಷಕ ಸಂಘದ ಉಪಾಧ್ಯಕ್ಷ ರವೀಂದ್ರ ರೈ , ಮರಿಯ ಕೃಪ ಕಾನ್ವೆಂಟಿನಾ ನಿರ್ದೇಶಕಿಯಾದ ಸಿ|ಹಿಲ್ಡಾ ಮಸ್ಕರೇನಸ್ , ಹಾಗೂ ಶಿಕ್ಷಕರ-ರಕ್ಷಕ ಸಂಘದ ಸದಸ್ಯರು ಉಪಸ್ಥಿತರಿದ್ದರು. ಶಿಕ್ಷಕ ವೃಂದದವರು ನಿರೂಪಿಸಿ, ಶ್ರೀಮತಿ ಸ್ಟೆಲ್ಲಾ ಸ್ವಾಗತಿಸಿ, ಶ್ರೀಮತಿ ಅನಿತಾ ಡೇಸ ಧನ್ಯವಾದವನ್ನು ಸಮರ್ಪಿಸಿದರು.

Related posts

ತೋಟದಲ್ಲಿ ಕೃಷಿ ಕೆಲಸ ಮಾಡುತ್ತಿದ್ದಾಗ ಹೃದಯಾಘಾತ: ನ್ಯಾಯತರ್ಪು ಕೊಡಿಯಡ್ಕ ತಿಮ್ಮಪ್ಪ ಗೌಡ ನಿಧನ

Suddi Udaya

ಅಳದಂಗಡಿ ಶ್ರೀ‌ ಸತ್ಯಸಾರಮುಪ್ಪಣ್ಯ ದೈವಸ್ಥಾನಕ್ಕೆ ನಟ ವಿಜಯ ರಾಘವೇಂದ್ರ ಭೇಟಿ

Suddi Udaya

ಮಡಂತ್ಯಾರು ಜೆಸಿ ಸಪ್ತಾಹ: ಡಾ‌. ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವಲಯಮಟ್ಟದ ಪ್ರತಿಭಾ ಕಾರಂಜಿ : ಬೆಳ್ತಂಗಡಿ ಶ್ರೀ ಧ. ಮಂ. ಆಂ.ಮಾ. ಶಾಲೆಗೆ ಹಲವಾರು ಪ್ರಶಸ್ತಿ

Suddi Udaya

ಗೇರುಕಟ್ಟೆ: ಅಲ್ಟೋ ಕಾರು ಡಿಕ್ಕಿ – ಪಾದಚಾರಿಗೆ ಗಂಭೀರ ಗಾಯ

Suddi Udaya

ನಾಲ್ಕೂರು: ರಾಮನಗರದಲ್ಲಿ ಬ್ರಹ್ಮಕುಮಾರಿ ಸಂಸ್ಥೆಯಿಂದ ರಕ್ಷಾಬಂಧನ ಕಾರ್ಯಕ್ರಮ

Suddi Udaya
error: Content is protected !!