25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಮಕ್ಕಳ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಮುದ್ದು ಕಂದ ಫೋಟೋ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

ಕುವೆಟ್ಟು,: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಮಕ್ಕಳ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಮುದ್ದು ಕoದ ಫೋಟೋ ಸ್ಪರ್ಧೆ 2025 ಇದರ ವಿಜೇತರಾದವರಿಗೆ ಬಹುಮಾನ ವಿತರಣೆ ಸಮಾರಂಭ ನ 18 ರoದು ಗುರುವಾಯನಕೆರೆ ಛಾಯಾ ಭವನದಲ್ಲಿ ಜರಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಲಯದ ಅಧ್ಯಕ್ಷ ರವಿ ಪೂಜಾರಿ ನಾರಾವಿ ವಹಿಸಿದ್ದರು ವೇದಿಕೆಯಲ್ಲಿ ಗೌರವಾಧ್ಯಕ್ಷ ವಿಲ್ಸನ್ ಬೆಳ್ತಂಗಡಿ. ಉಪಾಧ್ಯಕ್ಷರಾದ ಉಮೇಶ್ ಕುಲಾಲ್ ಗುರುವಾಯನಕೆರೆ, ಹರ್ಷ ಬಳ್ಳಮoಜ, ಪ್ರಧಾನ ಕಾರ್ಯದರ್ಶಿ ದಾಮೋದರ್ ಗುರುವಾಯನಕೆರೆ, ಕೋಶಾಧಿಕಾರಿ ಸುಜಿತ್ ರೈ ಪದ್ಮುoಜ, ಛಾಯಾ ಕಾರ್ಯದರ್ಶಿ ಸoದೇಶ್ ನಿಡ್ಲೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಗೌರವಾಧ್ಯಕ್ಷ ವಿಲ್ಸನ್ ಬೆಳ್ತಂಗಡಿ ಕಾರ್ಯಕ್ರಮದ ಪ್ರಾಸ್ತಾವಿಕವಾಗಿ ಮಾತನಾಡಿದರು ಬಹುಮಾನ ಪಡೆದ ಪುಟಾಣಿ ಮಕ್ಕಳ ಹೆತ್ತವರು ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಪ್ರಥಮ, ದ್ವಿತೀಯ, ತೃತೀಯ ಹಾಗೂ ತೀರ್ಪುಗಾರರು ಮೆಚ್ಚುಗೆ ಗಳಿಸಿದ ಫೋಟೋಗಳಿಗೆ ಸಮಾಧಾನಕರ ಬಹುಮಾನ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದ ಬಹುಮಾನದ ಪ್ರಾಯೋಜಕರಾದ ವಲಯದ ಮಾಜಿ ಅಧ್ಯಕ್ಷೆ ಸಿಲ್ವಿಯಾ ಬೆಳ್ತಂಗಡಿ ಹಾಗೂ ಸುರೇಶ್ ಬಿ ಕೌಡoಗೆ ಇವರನ್ನು ಮತ್ತು ವಿಜೇತರಾದ ಮಕ್ಕಳ ಛಾಯಾ ಚಿತ್ರಗಾರರನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು . ಕಾರ್ಯಕ್ರಮದಲ್ಲಿ ಗೌರವ ಸಲಹೆಗಾರರು ಪದಾಧಿಕಾರಿಗಳು ಸರ್ವ ಸದಸ್ಯರು ಉಪಸ್ಥಿತರಿದ್ದರು. ಉಮೇಶ್ ಕುಮಾರ್ ಮದ್ದಡ್ಕ ಕಾರ್ಯಕ್ರಮ ನಿರೂಪಿಸಿ, ಅಧ್ಯಕ್ಷ ರವಿ ಪೂಜಾರಿ ನಾರಾವಿ ಸ್ವಾಗತಿಸಿ, ಗಣೇಶ್ ಹೆಗ್ಡೆ ನಾರಾವಿ ಪ್ರಾರ್ಥನೆ ಗೈದರು ಹರ್ಷ ಬಳ್ಳಮಂಜ ಧನ್ಯವಾದ ನೀಡಿದರು.

ವರದಿ: ಮನು ಮದ್ದಡ್ಕ

Related posts

ಬಡಗಕಾರಂದೂರು ಸ.ಉ.ಹಿ.ಪ್ರಾ ಶಾಲೆಯಲ್ಲಿ ಮಾದಕ ವಸ್ತುಗಳ ಕುರಿತು ಜಾಗೃತಿ ಅಭಿಯಾನ

Suddi Udaya

ಕಳಿಯ ಗ್ರಾ.ಪಂ. ಅಧ್ಯಕ್ಷರಾಗಿ ದಿವಾಕರ ಹಾಗೂ ಉಪಾಧ್ಯಕ್ಷರಾಗಿ ಇಂದಿರಾ ಆಯ್ಕೆ

Suddi Udaya

ಶಾಸಕ ಹರೀಶ್ ಪೂಂಜರ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಮಟ್ಟದ ಜನಸ್ಪಂದನ ಸಭೆ

Suddi Udaya

ಸೆ.26: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಪರವಾನಿಗೆ ಭೂಮಾಪಕರ ಸಂಘದ ಜಿಲ್ಲಾಧ್ಯಕ್ಷ ನಾಗ ವಿ ಮತ್ತು ಪದಾಧಿಕಾರಿಗಳ ಪದಪ್ರದಾನ ಸಮಾರಂಭ

Suddi Udaya

ಉಜಿರೆ :ಶ್ರೀ ಧ. ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ವಿದ್ಯಾರ್ಥಿನಿಯರ ಬೀಳ್ಕೊಡುಗೆ

Suddi Udaya
error: Content is protected !!