23.5 C
ಪುತ್ತೂರು, ಬೆಳ್ತಂಗಡಿ
June 8, 2026
ಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅನುಗ್ರಹ ಕಾಲೇಜಿನಲ್ಲಿ ಅನುಕ-2025 ರ ಉದ್ಘಾಟನೆ

ಉಜಿರೆ: ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ ಅನುಕ-2025ರ ಉದ್ಘಾಟನೆಯು ಕಾಲೇಜಿನ ಆಡಿಟೋರಿಯಮ್‌ನಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜಿನ ಪ್ರಾಂಶುಪಾಲರಾದ ವಂ.ಫಾ.ವಿಜಯ್ ಲೋಬೋ ದೀಪ ಬೆಳಗಿಸುವುದರ ಮೂಲಕ ನೆರವೇರಿಸಿ ಆಧುನಿಕ ಯುಗದಲ್ಲಿ ವಾಣಿಜ್ಯ ವಿಭಾಗದ ಮಹತ್ವವನ್ನು ತಿಳಿಸಿ ಇಂತಹ ಕಾರ್ಯಕ್ರಮಗಳು ನಮ್ಮ ದಿನನಿತ್ಯದ ಚಟುವಟಿಕೆಗಳಲ್ಲಿ ದಾರಿದೀಪವಾಗಲಿಯೆಂದು ಅನುಕ-2025 ರ ವತಿಯಿಂದ ವಿದ್ಯಾರ್ಥಿಗಳಿಗೆ ನಡೆಯುವ ಸ್ಪರ್ಧೆಗಳಿಗೆ ಶುಭಹಾರೈಸಿದರು.


ಮುಖ್ಯ ಅಥಿತಿಗಳಾಗಿ ಅನುಗ್ರಹ ಕಾಲೇಜಿನ ಹಳೇ ವಿದ್ಯಾರ್ಥಿ ಎಸ್.ಡಿ.ಎಂ ಪದವಿ ಕಾಲೇಜಿನ ವ್ಯವಹಾರಿಕ ಆಡಳಿತ ವಿಭಾಗದ ಸಹಾಯಕ ಪ್ರಾಧ್ಯಾಪಕ ಶರಸ್ಚಂದ್ರ ಕೆ.ಎಸ್ ಮಾತನಾಡಿ ವಿದ್ಯಾರ್ಥಿಗಳು ತಾವು ಪಡೆದ ಅಂಕಗಳ ಜತೆಯಲ್ಲಿ ಜೀವನ ಕೌಶಲ್ಯವನ್ನು ಬೆಳೆಸಬೇಕು.ಸಾಮರ್ಥ್ಯವನ್ನು ಸರಿಯಾದ ರೀತಿಯಲ್ಲಿ ಸದುಪಯೋಗ ಮಾಡಬೇಕು.ಎಂದು ಹೇಳಿ ಕಾಲೇಜಿನ ವಾಣಿಜ್ಯ ವಿಭಾಗದ ಚಟುವಟಿಕೆಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದರು

ವೇದಿಕೆಯಲ್ಲಿ ವಾಣಿಜ್ಯ ವಿಭಾಗದ ಉಪನ್ಯಾಸಕಿ ಶ್ರೀಮತಿ ಕಾವ್ಯಶ್ರೀ, ಕಾರ್ಯದರ್ಶಿ ಮಾರ್ಕ್ ಉಪಸ್ಥಿತರಿದ್ದರು. ನಂತರ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ನಡೆಸಲಾಯಿತು. ವಿದ್ಯಾರ್ಥಿ ನೀರಜ್ ಕಾರ್ಯಕ್ರಮ ನಿರೂಪಿಸಿದರು.ಅಸ್ಮಿತ್ ಲೋಬೋ ಸ್ವಾಗತಿಸಿ ಮಾರ್ಕ್ ವಂದಿಸಿದರು.

Related posts

ಬೆಳ್ತಂಗಡಿ : ಆಡಳಿತ ಸೌಧದಲ್ಲಿ ಸರ್ವಜ್ಞ ಜಯಂತಿ ಆಚರಣೆ

Suddi Udaya

ಸೆ.26: ಕೊಲ್ಲಿ ದೇವಸ್ಥಾನ ಜೀರ್ಣೋದ್ದಾರ ಸಮಿತಿಯಿಂದ ಭಕ್ತರ ಸಭೆ

Suddi Udaya

ಕಲ್ಮಂಜ: ನಿಡಿಗಲ್ ಬಳಿ ಮನೆಯ ಕಾಂಪೌಂಡ್ ಕುಸಿದು ಬಿದ್ದು ಹಾನಿ

Suddi Udaya

ಶ್ರೀಮತಿ ಮಾಲಿನಿ ಮತ್ತು ರಮಾನಂದ ಗುಡ್ಡಾಜೆ ಇವರ 25ನೇ ವರ್ಷದ ವಿವಾಹ ವಾರ್ಷಿಕೋತ್ಸವ ಸಂಭ್ರಮ

Suddi Udaya

ಶಿರ್ಲಾಲು ಸ.ಉ.ಪ್ರಾ. ಶಾಲೆಯ ಮಕ್ಕಳಿಗೆ ವಕೀಲರು ಮುರುಳಿ ಬಿ. ರವರಿಂದ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ನಡ ಅಂಗನವಾಡಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿದ ಶ್ರೀಮತಿ ರಾಜೀವಿರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!