July 23, 2026
ಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅನುಗ್ರಹ ಕಾಲೇಜಿನಲ್ಲಿ ಅನುಕ-2025 ರ ಉದ್ಘಾಟನೆ

ಉಜಿರೆ: ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ ಅನುಕ-2025ರ ಉದ್ಘಾಟನೆಯು ಕಾಲೇಜಿನ ಆಡಿಟೋರಿಯಮ್‌ನಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜಿನ ಪ್ರಾಂಶುಪಾಲರಾದ ವಂ.ಫಾ.ವಿಜಯ್ ಲೋಬೋ ದೀಪ ಬೆಳಗಿಸುವುದರ ಮೂಲಕ ನೆರವೇರಿಸಿ ಆಧುನಿಕ ಯುಗದಲ್ಲಿ ವಾಣಿಜ್ಯ ವಿಭಾಗದ ಮಹತ್ವವನ್ನು ತಿಳಿಸಿ ಇಂತಹ ಕಾರ್ಯಕ್ರಮಗಳು ನಮ್ಮ ದಿನನಿತ್ಯದ ಚಟುವಟಿಕೆಗಳಲ್ಲಿ ದಾರಿದೀಪವಾಗಲಿಯೆಂದು ಅನುಕ-2025 ರ ವತಿಯಿಂದ ವಿದ್ಯಾರ್ಥಿಗಳಿಗೆ ನಡೆಯುವ ಸ್ಪರ್ಧೆಗಳಿಗೆ ಶುಭಹಾರೈಸಿದರು.


ಮುಖ್ಯ ಅಥಿತಿಗಳಾಗಿ ಅನುಗ್ರಹ ಕಾಲೇಜಿನ ಹಳೇ ವಿದ್ಯಾರ್ಥಿ ಎಸ್.ಡಿ.ಎಂ ಪದವಿ ಕಾಲೇಜಿನ ವ್ಯವಹಾರಿಕ ಆಡಳಿತ ವಿಭಾಗದ ಸಹಾಯಕ ಪ್ರಾಧ್ಯಾಪಕ ಶರಸ್ಚಂದ್ರ ಕೆ.ಎಸ್ ಮಾತನಾಡಿ ವಿದ್ಯಾರ್ಥಿಗಳು ತಾವು ಪಡೆದ ಅಂಕಗಳ ಜತೆಯಲ್ಲಿ ಜೀವನ ಕೌಶಲ್ಯವನ್ನು ಬೆಳೆಸಬೇಕು.ಸಾಮರ್ಥ್ಯವನ್ನು ಸರಿಯಾದ ರೀತಿಯಲ್ಲಿ ಸದುಪಯೋಗ ಮಾಡಬೇಕು.ಎಂದು ಹೇಳಿ ಕಾಲೇಜಿನ ವಾಣಿಜ್ಯ ವಿಭಾಗದ ಚಟುವಟಿಕೆಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದರು

ವೇದಿಕೆಯಲ್ಲಿ ವಾಣಿಜ್ಯ ವಿಭಾಗದ ಉಪನ್ಯಾಸಕಿ ಶ್ರೀಮತಿ ಕಾವ್ಯಶ್ರೀ, ಕಾರ್ಯದರ್ಶಿ ಮಾರ್ಕ್ ಉಪಸ್ಥಿತರಿದ್ದರು. ನಂತರ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ನಡೆಸಲಾಯಿತು. ವಿದ್ಯಾರ್ಥಿ ನೀರಜ್ ಕಾರ್ಯಕ್ರಮ ನಿರೂಪಿಸಿದರು.ಅಸ್ಮಿತ್ ಲೋಬೋ ಸ್ವಾಗತಿಸಿ ಮಾರ್ಕ್ ವಂದಿಸಿದರು.

Related posts

ಗುರುವಾಯನಕೆರೆಯ ‘ಕೆರೆ’ ಗೆ ಲೋಕಾಯುಕ್ತ ನ್ಯಾಯಾಮೂರ್ತಿ ಭೇಟಿ, ಪರಿಶೀಲನೆ

Suddi Udaya

ಕೊಕ್ಕಡ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಶಿವರಾಮ ಗೌಡ ಟಿ. ಎಂ. ನಿಧನ

Suddi Udaya

ಮದ್ದಡ್ಕ  : ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ರಚನೆ: ಅಧ್ಯಕ್ಷರಾಗಿ ಗೋಪಿನಾಥ್ ನಾಯಕ್

Suddi Udaya

ಮಡಂತ್ಯಾರು: ಪಾರೆಂಕಿ ನಿವಾಸಿ ಸಾಂತಪ್ಪ ಗೌಡ ಹೃದಯಾಘಾತದಿಂದ ನಿಧನ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ

Suddi Udaya

ತಣ್ಣೀರುಪಂತ: ಪಾಲೇದುವಿನ ಡಾ. ಸ್ವಾತಿಕ್‌ರಿಗೆ ಬ್ಯಾಚುಲರ್ ಆಫ್ ಫಿಸಿಯೋಥೆರಪಿ ಪದವಿ

Suddi Udaya
error: Content is protected !!